![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 5, 2023, 10:34 PM IST
ನವದೆಹಲಿ: ದೇಶದಲ್ಲಿ ಟೊಮಾಟೋ ಬೆಲೆ ಏರಿಕೆಯಿಂದ ಗ್ರಾಹಕರು ತತ್ತರಿಸಿರುವ ನಡುವೆಯೇ, ಈಗ ಈರುಳ್ಳಿ ಬೆಲೆಯೂ ಗಗನಕ್ಕೇರುವ ಸಾಧ್ಯತೆಗಳಿದ್ದು, ಆಗಸ್ಟ್ ತಿಂಗಳಾಂತ್ಯದ ವೇಳೆ ಈರುಳ್ಳಿ ಬೆಲೆ ಕೆಜಿಗೆ 60ರಿಂದ 70 ರೂ.ಗೆ ತಲುಪಲಿದೆ ಎಂದು ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆ ಕ್ರಿಸಿಲ್ ತಿಳಿಸಿದೆ.
ಕ್ರಿಸಿಲ್ ವರದಿಗಳ ಪ್ರಕಾರ, ಅತ್ಯಧಿಕ ತಾಪಮಾನ ಹಾಗೂ ಅಕಾಲಿಕ ಮಳೆಯಿಂದಾಗಿ ಬಹುತೇಕ ಕಡೆ ಈರುಳ್ಳಿ ಬೆಳೆ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಪೂರೈಕೆ ಸರಪಳಿಯಲ್ಲಿ ವ್ಯತ್ಯಯವಾಗುತ್ತಿರುವುದೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾಸಾಂತ್ಯದಲ್ಲಿ ಬೆಲೆ ಏರಿಕೆ ಆಗುವ ಸಾಧ್ಯತೆ ಅಧಿಕವಾಗಿದೆ. ಪ್ರಸಕ್ತ ದೇಶದಲ್ಲಿ ಈರುಳ್ಳಿ ಬೆಲೆ ಕೆಜಿಗೆ 25ರಿಂದ 30 ರೂ.ಗಳಿವೆ.
ಇನ್ನು, ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವೆಡೆ ಆಗಿರುವ ಭಾರೀ ಮಳೆಯ ಅನಾಹುತದಿಂದಾಗಿ ಟೊಮಾಟೋ ಪೂರೈಕೆಗೆ ಸಮಸ್ಯೆಯಾಗುತ್ತಿದ್ದು, ಆಗಸ್ಟ್ನಲ್ಲೂ ಟೊಮಾಟೋ ಬೆಲೆ ಇಳಿಕೆಯಾಗುವ ಸಾಧ್ಯತೆ ಇಲ್ಲ. ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಏರಿಕೆಯಾಗಿ 1 ಕೆಜಿ ಟೊಮೆಟೊಗೆ 180 ರೂ.ಗಳಿಂದ 200 ರೂ.ಗಳವರೆಗೂ ಏರಬಹುದು ಎನ್ನಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.