ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ: ಆರೋಪಿ ಬಂಧನ
Team Udayavani, Aug 5, 2023, 10:56 PM IST
ಮಂಗಳೂರು: ಯುವಕನೋರ್ವ ನೆರೆಮನೆಯವರ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ರಾಲ್ ಹೊಸಕಾಡು ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಸುಮಂತ್ ಪೂಜಾರಿ (22) ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ನೆರೆಮನೆಯ ಪ್ರಜ್ವಲ್ ಆ. 2ರಂದು ರಾತ್ರಿ ಸುಮಾರು 11.30ಕ್ಕೆ ಶೌಚಾಲಯಕ್ಕೆ ಹೋದಾಗ ಅಲ್ಲಿ ಮೊಬೈಲ್ ಸಿಕ್ಕಿತು. ಮೊಬೈಲ್ನ ಮುಖಾಂತರ ಅದು ನೆರಮನೆಯ ಸುಮಂತ್ನದ್ದು ಎಂಬುದು ಗೊತ್ತಾಗಿತ್ತು. ಈ ಬಗ್ಗೆ ಶುಕ್ರವಾರ ಪ್ರಜ್ವಲ್ ಮೂಲ್ಕಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಹಿಳೆಯರ ವೀಡಿಯೋ ಉದ್ದೇಶ
“ನನ್ನ ತಾಯಿ, ಸಹೋದರಿಯರು ಸೇರಿದಂತೆ ಮನೆಮಂದಿಯ ವೀಡಿಯೋ ಚಿತ್ರೀಕರಣ ನಡೆಸುವ ಉದ್ದೇಶ ಆರೋಪಿ ಸುಮಂತ್ಗೆ ಇತ್ತು’ ಎಂಬುದಾಗಿ ಪ್ರಜ್ವಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿಯ ಮೊಬೈಲ್ ಅನ್ನು ಪರಿಶೀಲಿಸಿದಾಗ ಅದರಲ್ಲಿ 18 ಸೆಕೆಂಡಿನ ಒಂದು ವೀಡಿಯೋ ಮಾತ್ರವಿತ್ತು. ಮೊಬೈಲ್ ಸ್ವಾಧೀನಪಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
“ಸಂಘಟನೆಯ ಮಾಹಿತಿ ಇಲ್ಲ’
ಆರೋಪಿ ಸುಮಂತ್ ಯಾವುದೇ ಸಂಘಟನೆಯಲ್ಲಿ ಇರುವುದು ನಿಖರ ಮಾಹಿತಿ ಇಲ್ಲ. ಆತ 10ನೇ ತರಗತಿ ಓದಿದ್ದು, ಕಟ್ಟಿಗೆಯ ಕೆಲಸ ಮಾಡಿಕೊಂಡಿದ್ದ. ಆತ ತನ್ನ ಕೃತ್ಯ ಮತ್ತು ಉದ್ದೇಶವನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ವಿರುದ್ಧ ಐಪಿಸಿ 354ಸಿ ಮತ್ತು ಐಟಿ ಕಾಯಿದೆ 66ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.