ಕರಾವಳಿಯಲ್ಲಿ  ಮಳೆಗಾಲದಲ್ಲೂ ಸೆಕೆ!


Team Udayavani, Aug 6, 2023, 12:56 AM IST

temparature

ಮಂಗಳೂರು: ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಮಳೆಗಾಲದಲ್ಲೂ ಸೆಕೆಯ ಅನುಭವ ಹೆಚ್ಚಾಗುತ್ತಿದೆ. ಹವಾಮಾನದಲ್ಲಾದ ಬದಲಾವಣೆಯ ಪರಿಣಾಮ ಕಳೆದ ಒಂದು ವಾರದಿಂದ ದಿನವಿಡೀ ಸೆಕೆಯ ವಾತಾವರಣ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಸದ್ಯ ಮುಂಗಾರು ದುರ್ಬಲಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಸದ್ಯಕ್ಕೆ ಭಾರೀ ಮಳೆಯಾ ಗುವ ಮುನ್ಸೂಚನೆಯಿಲ್ಲ. ಇದೇ ಕಾರಣಕ್ಕೆ ಗರಿಷ್ಠ ಉಷ್ಣಾಂಶಲ್ಲಿ ವಾಡಿಕೆಗಿಂತ 2ರಿಂದ 3 ಡಿ.ಸೆ. ಏರಿಕೆಯಾಗಬಹುದು. ಕನಿಷ್ಠ ಉಷ್ಣಾಂಶದಲ್ಲಿಯೂ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 29.8 ಡಿ.ಸೆ. ಮತ್ತು ಕನಿಷ್ಠ 23.2 ಡಿ.ಸೆ. ಇತ್ತು. ಗರಿಷ್ಠ ಉಷ್ಣಾಂಶದಲ್ಲಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚು ಇತ್ತು.

ಈ ವರ್ಷ ಕಡಿಮೆ ಮಳೆ
ಕರಾವಳಿ ಭಾಗದಲ್ಲಿ ಕಳೆದ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. 2022ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 10 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 6ರಷ್ಟು ಸೇರಿ ಕರಾವಳಿ ಭಾಗದಲ್ಲಿ ಶೇ. 3ರಷ್ಟು ಮಳೆ ಪ್ರಮಾಣ ಹೆಚ್ಚಾಗಿತ್ತು. ಆದರೆ ಈ ವರ್ಷ ಮುಂಗಾರು ಆಗಮನವೇ ತಡವಾಗಿದೆ. ಕೆಲವು ದಿನ ಭಾರೀ ಮಳೆಯಾಗಿತ್ತೇ ವಿನಾ ಸದ್ಯ ಮುಂಗಾರು ದುರ್ಬಲಗೊಂಡಿದೆ. 2023ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 19 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 13 ಸೇರಿದಂತೆ ಕರಾವಳಿ ಭಾಗದಲ್ಲಿ ಶೇ. 9ರಷ್ಟು ಮಳೆ ಕೊರತೆ ಇದೆ.

ಎಲ್‌ ನಿನೋ ಪ್ರಭಾವ
ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಈ ಹಿಂದೆ ಅಂದಾಜಿಸಿದ್ದರು. ಆದರೆ ಸದ್ಯದ ಮುನ್ಸೂಚನೆಯಂತೆ ಎಲ್‌ ನಿನೋ ಪ್ರಭಾವದಿಂದ ಹಿಂದೂ ಮಹಾಸಾಗರದಲ್ಲಿ ಮೋಡ ಗಳ ಸೃಷ್ಟಿ ಕಡಿಮೆಯಾಗಲಿದೆ. ಮೋಡಗಳ ಸೃಷ್ಟಿಯೇ ಕಡಿಮೆಯಾದರೆ ಮಳೆ ಸುರಿ ಯುವ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ರಾಜ್ಯದಲ್ಲಿ ನಿರೀಕ್ಷೆಯಂತೆ ವಾಡಿಕೆ ಮುಂಗಾರು ಮಳೆ ಯಾಗುವ ಸಾಧ್ಯತೆ ಕಡಿಮೆ ಎಂದು ಸದ್ಯಕ್ಕೆ ಅಂದಾಜಿಸಬಹುದು.

ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮುಂಗಾರು ದುರ್ಬಲಗೊಂಡಿದೆ. ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಭಾರೀ ಮಳೆಯ ಸಾಧ್ಯತೆ ಇಲ್ಲ. ಇದೇ ಕಾರಣಕ್ಕೆ ಉಷ್ಣಾಂಶದಲ್ಲಿಯೂ ಏರಿಳಿತವಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಸೆಕೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು ಗರಿಷ್ಠ ಉಷ್ಣಾಂಶ 2ರಿಂದ 3 ಡಿ.ಸೆ. ಏರಿಕೆಯಾಗುವ ನಿರೀಕ್ಷೆ ಇದೆ.
– ಪ್ರಸಾದ್‌, ಭಾರತೀಯ ಹವಾಮಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.