Nuh: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ಎಸೆದವರಿಗೆ ಆಶ್ರಯ ನೀಡಿದ್ದ ಹೋಟೆಲ್ ನೆಲಸಮ
Team Udayavani, Aug 6, 2023, 11:18 AM IST
ನುಹ್: ಹಿಂಸಾಚಾರ ಪೀಡಿತ ಹರಿಯಾಣದ ನುಹ್ ನಲ್ಲಿ ಅಕ್ರಮ ನಿರ್ಮಾಣಗಳ ವಿರುದ್ಧ ಬೃಹತ್ ಧ್ವಂಸ ಕಾರ್ಯಾಚರಣೆ ಮುಂದುವರಿದಿದೆ.
ಡೆಮಾಲಿಶನ್ ಡ್ರೈವ್ ನ ನಾಲ್ಕನೇ ದಿನವಾದ ಇಂದು ನುಹ್ ಜಿಲ್ಲಾಡಳಿತವು ಸಹಾರಾ ಹೋಟೆಲನ್ನು ನೆಲಸಮಗೊಳಿಸಲು ಬುಲ್ಡೋಜರ್ ಗಳನ್ನು ತಂದಿದೆ.
ಸಹಾರಾ ಹೋಟೆಲ್ ನ ಮೇಲ್ಛಾವಣಿಯಿಂದ ಧಾರ್ಮಿಕ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ನಂತರ ಸೋಮವಾರ ನುಹ್ ನಲ್ಲಿ ಹಿಂಸಾಚಾರ ಪ್ರಾರಂಭವಾಯಿತು ಎಂದು ಅಧಿಕಾರಿಗಳು ನಂಬಿದ್ದಾರೆ. ಗುಂಪೊಂದು ಮೆರವಣಿಗೆಯ ಮೇಲೆ ಕಲ್ಲುಗಳಿಂದ ದಾಳಿ ಮಾಡುತ್ತಿದ್ದಂತೆ, 2,500-ಕ್ಕೂ ಹೆಚ್ಚು ಭಾಗವಹಿಸುವವರು ಆಶ್ರಯ ಪಡೆಯಲು ದೇವಸ್ಥಾನಕ್ಕೆ ನುಗ್ಗಿದ್ದರು.
ಮೆಡಿಕಲ್ ಸ್ಟೋರ್ ಗಳು ಸೇರಿದಂತೆ ಸುಮಾರು 12 ಅಂಗಡಿಗಳನ್ನು ಶನಿವಾರ ಧ್ವಂಸಗೊಳಿಸಲಾಗಿದೆ. ಹಿಂಸಾಚಾರ ಪೀಡಿತ ನುಹ್ ನಿಂದ ಸುಮಾರು 20 ಕಿಮೀ ದೂರದಲ್ಲಿರುವ ಟೌರುನಲ್ಲಿ ವಾಸಿಸುವ ವಲಸಿಗರ ಗುಡಿಸಲುಗಳನ್ನು ಈ ವಾರದ ಆರಂಭದಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಕ್ಕಾಗಿ ನೆಲಸಮಗೊಳಿಸಲಾಗಿತ್ತು.
ಹಿಂಸಾಚಾರದಲ್ಲಿ ತೊಡಗಿದ್ದವರಿಗೆ ಸೇರಿದ ಮನೆ ಮತ್ತು ಅಂಗಡಿಗಳನ್ನು ಧ್ವಂಸ ಮಾಡುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ವಿವಿಧ ಪ್ರದೇಶಗಳಲ್ಲಿ 50 ರಿಂದ 60 ಕಟ್ಟಡಗಳನ್ನು ಇದುವರೆಗೆ ಕೆಡವಲಾಗಿದೆ. ಬಂಧನಕ್ಕೆ ಹೆದರಿ ಹಲವರು ಓಡಿ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.