ಮಂಗಳೂರು ಸೇರಿ ರಾಜ್ಯದ 13 ರೈಲ್ವೇ ನಿಲ್ದಾಣಗಳು ಮೇಲ್ದರ್ಜೆಗೆ: ಪ್ರಧಾನಿ ಮೋದಿ ಚಾಲನೆ


Team Udayavani, Aug 6, 2023, 11:51 AM IST

PM Modi lays foundation stone for redevelopment of 508 railway stations across country

ಹೊಸದಿಲ್ಲಿ: ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.

ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 13 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

“ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ, ಹೊಸ ಸ್ಫೂರ್ತಿ ಮತ್ತು ಹೊಸ ಸಂಕಲ್ಪಗಳಿವೆ. ಭಾರತೀಯ ರೈಲ್ವೇ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ” ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಹೇಳಿದರು.

ಯೋಜನೆಯಡಿ ಮಂಗಳೂರಿನ ಪಡೀಲ್ ನಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ 19.32 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿಯಾಗಲಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ  ವೇದವ್ಯಾಸ ಕಾಮತ್, ಡಾ| ವೈ ಭರತ್ ಶೆಟ್ಟಿ,  ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ‌ ಕೋಟ ಶ್ರೀ ನಿವಾಸ ಪೂಜಾರಿ, ಪ್ರತಾಪ ಸಿಂಹ ನಾಯಕ್,  ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಕಾರ್ಪೋರೇಟರ್ ಶೋಭಾ ಪೂಜಾರಿ, ದಕ್ಷಿಣ ರೈಲ್ವೇಯ ಪಾಲ್ಘಾಟ್ ವಿಭಾಗದ ಡಿಆರ್ ಎಂ ಆರ್. ಮುಕುಂದ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಕೆ.ಪಿ.ರಾಯರು ನಮ್ಮ ನಡುವೆ ಇರುವ ಥಾಮಸ್‌ ಆಲ್ವ ಎಡಿಸನ್‌ ಇದ್ದಂತೆ: ಚಾರುಕೀರ್ತಿ ಮಹಾಸ್ವಾಮೀಜಿ

ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ 34.13 ಕೋಟಿ ರೂ. ಅನುದಾನದಲ್ಲಿ ಹಾಗೂ ಹರಿಹರದಲ್ಲಿ25.21 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೊತ್ತಿಗೊಳ್ಳಲಾಗುವುದು. ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಹೊಸ ನಿಲ್ದಾಣ ಕಟ್ಟಡ ನಿರ್ಮಾಣ, ಪ್ರವೇಶ ಮತ್ತು ನಿರ್ಗಮನ ಕಮಾನು, ಚರಂಡಿ ಮತ್ತು ಮಳೆ ನೀರು ಕೊಯ್ಲುವ್ಯವಸ್ಥೆ, ಪ್ಲಾಟ್‌ ಫಾಮ್‌ರ್‍ಗಳ ಅಂಚಿನಲ್ಲಿ ಟೈಲ್ಸ್‌ ಸೇರಿದಂತೆ 12 ಕಾಮಗಾರಿ ನಡೆಯಲಿದೆ. ಹರಿಹರದಲ್ಲಿಯೂ ಹೊಸ ಬುಕ್ಕಿಂಗ್‌ ಕಚೇರಿ ಮತ್ತು ವಿಶ್ರಾಂತಿ ಕೊಠಡಿಗಳ ನಿರ್ಮಾಣ, ಪ್ಲಾಟ್‌ಫಾಮ್‌ರ್‍ಗಳ ಉದ್ದಕ್ಕೂ ಚಾವಣಿ ಒದಗಿಸುವುದು ಸೇರಿದಂತೆ 12 ಕಾಮಗಾರಿಗಳು ಆರಂಭಗೊಳ್ಳಲಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.