Mundgod; ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ


Team Udayavani, Aug 6, 2023, 4:24 PM IST

MUMundgod; ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಮುಂಡಗೋಡ: ಪಟ್ಟಣ ವ್ಯಾಪ್ತಿಯ ಜನನಿಬಿಡ ಪ್ರದೇಶ ಖಬರಸ್ತಾನದ (ಸ್ಮಶಾನ) ಅಕ್ಕ ಪಕ್ಕದಲ್ಲಿ ಕಳೆದ ಎರಡ್ಮೂರು ದಿನದಿಂದ ಚಿರತೆ ಓಡಾಡುತ್ತಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.

ಮುಂಡಗೋಡ ಕಲಘಟಗಿ ರಾಜ್ಯ ಹೆದ್ದಾರಿ ಮತ್ತು ಪಟ್ಟಣಕ್ಕೆ ಹತ್ತಿರ ಇರುವ ಮುಸ್ಲಿಂ ಸಮುದಾಯದ ಖಬರಸ್ತಾನ(ಸ್ಮಶಾನ) ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನ ಮತ್ತು ಬೈಕ್ ಒಡಾಡುತ್ತವೆ. ಅಲ್ಲದೆ ಹತ್ತಿರವೇ ಜನರು ವಾಸಿಸುವ ಬಡಾವಣೆಗಳು ಇದೆ. ಶನಿವಾರ ಸಂಜೆ ಹಾಲೇಶ ಎಂಬಾತನು ಖಬರಸ್ತಾನ (ಸ್ಮಶಾನ) ಕಾಂಪೌಂಡ್ ನ ಮೇಲೆ ಚಿರತೆ ಓಡಾಡುತ್ತಿರುವುದು ನೋಡಿ ತನ್ನ ಮೊಬೈಲ್‌ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಆ ಭಾಗದ ರೈತರನ್ನು ಚಿಂತೆಗೆ ಈಡುಮಾಡಿದೆ.

ಅರಣ್ಯ ಅಧಿಕಾರಿಗಳು ಭೇಟಿ: ಚಿರತೆಯೂ ಪಟ್ಟಣದ ಹತ್ತಿರವೇ ಓಡಾಡುತ್ತಿದೆ ಎಂಬ ಮಾಹಿತಿ ಸಿಕ್ಕ ತಕ್ಷಣವೇ ರವಿವಾರ ಇಲ್ಲಿನ ವಲಯ ಅರಣ್ಯಧಿಕಾರಿ ಸುರೇಶ ಕುಳ್ಳೊಳ್ಳಿ ಉಪವಲಯ ಅರಣ್ಯಧಿಕಾರಿ ಗಿರೀಶ ಕೊಳೆಕರ್ ಹಾಗೂ ಮುತ್ತು ಹಿರೇಕನಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಸ್ಥಳದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಆ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾರೆ.

ಧ್ವನಿವರ್ಧಕದ ಮೂಲಕ ಜಾಗೃತಿ: ಚಿರತೆ ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಹಳೂರ, ಮಾರಿಕಾಂಬಾ ನಗರ ಕೊಪ್ಪದ ಓಣಿ, ಪಟ್ಟಣದ ನಿವಾಸಿಗಳು ಮತ್ತು ಬೈಕ್ ಸವಾರರಿಗೆ ಚಿರತೆ ಓಡಾಡಿದ ಪ್ರದೇಶದಲ್ಲಿ ಒಬ್ಬಂಟಿಯಾಗಿ ಓಡಾಡಬಾರದು, ರಾತ್ರಿ ಸಮಯ ಆ ಪ್ರದೇಶದಲ್ಲಿ ಹೋಗಬಾರದು. ಆಕಸ್ಮಾತ್ ಹೋಗಬೇಕಾದರೆ ಗುಂಪು ಗುಂಪಾಗಿ ತೆರಳುವಂತೆ ಧ್ವನಿವರ್ಧಕದ ಮೂಲಕ ಎಚ್ಚರಿಕೆಯ ಸಂದೇಶ ನೀಡುತ್ತಿದ್ದಾರೆ.

ಈ ಹಿಂದೆ ತಾಲೂಕಿನ ಗಡಿ ಭಾಗ ಮತ್ತು ಶಿಗ್ಗಾಂವ ದುಂಡಸಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ವಡಗಟ್ಟ ಮತ್ತು ತಾಯವ್ವ ಗುಡಿಯ ಅಕ್ಕ ಪಕ್ಕದಲ್ಲಿ ವಾಹನ ಸವಾರರಿಗೆ ಚಿರತೆ ಆಗಾಗ ಪ್ರತ್ಯಕ್ಷವಾಗುತ್ತಿತ್ತು ಅಲ್ಲದೆ ಚಿರತೆಯೂ ಮುಖ್ಯ ರಸ್ತೆ ದಾಟುವುದನ್ನು ಅನೇಕರು ನೋಡಿ ಭಯ ಭೀತರಾಗಿದ್ದರು. ಇದಲ್ಲದೆ ತಾಲೂಕಿನ ಅತ್ತಿವೇರಿ ಗೌಳಿದಡ್ಡಿಯ ಹತ್ತಿರ ಗೌಳಿ ಸಮುದಾಯದ ಹಲವು ಜಾನುವಾರಗಳ ಮೇಲೆ ದಾಳಿ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

ವಲಯ ಅರಣ್ಯಧಿಕಾರಿ ಸುರೇಶ ಕುಳ್ಳೊಳ್ಳಿ ಪ್ರತಿಕ್ರಿಯಿಸಿ: ಆ ಪ್ರದೇಶದಲ್ಲಿ ಓಡಾಡಿದ ಹೆಜ್ಜೆ ಗುರುತು ಚಿರತೆಯದೆ ಆಗಿದೆ. ಮತ್ತು ಪ್ರತ್ಯಕ್ಷದರ್ಶಿ ಹಾಲೇಶ ಎಂಬಾತನಿಗೆ ಕರೆದು ಕೇಳಿದ್ದೇವೆ ಆತನು ಸಹ ನಾನು ಚಿರತೆಯನ್ನು ನೋಡಿದ್ದೇನೆ ಎಂದಿದ್ದಾನೆ. ಅಲ್ಲದೆ ವಿಡಿಯೋ ಸಹ ತೋರಿಸಿದ್ದಾನೆ. ಈಗಾಗಲೇ ಆ ಪ್ರದೇಶದಲ್ಲಿ ಚಿರತೆ ಪತ್ತೆ ಹಚ್ಚಲು ನಮ್ಮ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಜನರಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಒಟ್ಟಿನಲ್ಲಿ ಈ ಹಿಂದೆ ಗಡಿ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡು ನಾಗರಿಕರಲ್ಲಿ ಭಯ ಮೂಡಿಸುತ್ತಿತ್ತು. ಈಗ ಪಟ್ಟಣದ ಮತ್ತು ಜನದಟ್ಟಣೆ ಪ್ರದೇಶ ಹತ್ತಿರವೇ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಭಯದ ವಾತವರಣ ಸೃಷ್ಟಿ ಮಾಡಿದೆ. ಹಾಗಾಗಿ ಆದಷ್ಟೂ ಬೇಗ ಸಂಬಂಧಪಟ್ಟ ಇಲಾಖೆಯವರು ಇದನ್ನು ಸೆರೆ ಹಿಡಿದು ಜನರಲ್ಲಿ ಕಾಡುತ್ತಿರುವ ಭಯವನ್ನು ದೂರ ಮಾಡಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.