ಕಲುಷಿತ ನೀರಿನ ಘಟನೆ: FSL ವರದಿ ಕುರಿತು ಮರು ತನಿಖೆಗೆ ಸೂಚನೆ
Team Udayavani, Aug 6, 2023, 9:37 PM IST
ಚಿತ್ರದುರ್ಗ: ಕಲುಷಿತ ನೀರಿನ ಘಟನೆ ಕುರಿತು ನಿಖರವಾದ ವರದಿ ಇನ್ನೂ ಬಂದಿಲ್ಲ. ಒಂದೆರಡು ದಿನಗಳಲ್ಲಿ ಬರಲಿದ್ದು, ನಂತರ ಕಠಿಣ ಕ್ರಮ ಆಗಬೇಕಿದೆ. ಮೊದಲ ದಿನವೇ ಇಬ್ಬರನ್ನು ಅಮಾನತು ಮಾಡಲು ಕಾರ್ಯದರ್ಶಿಗೆ ಹೇಳಿದ್ದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಭಾನುವಾರ ಕವಾಡಿಗರಹಟ್ಟಿಯಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದ ಕುರಿತು ಗಂಭೀರ ತನಿಖೆ ಆರಂಭವಾಗಿದೆ. ತನಿಖೆ ನಂತರ ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆ ಆಗಲಿದೆ. ಬೇರೆ ಯಾವುದೇ ವಾರ್ಡ್ನಲ್ಲಿ ಸಮಸ್ಯೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ಎಫ್ಎಸ್ಎಲ್ ವರದಿ ಕುರಿತು ಮರು ತನಿಖೆ ನಡೆಸುವಂತೆ ತಿಳಿಸುತ್ತೇನೆ. ಈ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು. ಅಮಾನತು ಮಾಡುವುದರಿಂದ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ತನಿಖಾ ವರದಿ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಪರಿಹಾರವಾಗಿ ಈಗಾಗಲೇ ಹತ್ತು ಲಕ್ಷ ರೂ. ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ಹೆಚ್ಚಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಕವಾಡಿಗರಹಟ್ಟಿ ಪ್ರಕರಣದ ಸಮಗ್ರ ತನಿಖೆಯಾಗಲಿ: ರವಿ
ಚಿತ್ರದುರ್ಗ: ಕವಾಡಿಗರಹಟ್ಟಿ ದುರಂತಕ್ಕೆ ಕಲುಷಿತ ಅಥವಾ ವಿಷಪೂರಿತ ನೀರು ಕಾರಣವೋ ಗೊತ್ತಿಲ್ಲ. ಆದರೆ ಒಂದು ಪ್ರದೇಶದಿಂದ ಇಷ್ಟೊಂದು ಜನ ಆಸ್ಪತ್ರೆಗೆ ದಾಖಲಾಗಿ, ಐವರು ಮೃತರಾಗುವವರೆಗೆ ಜಿಲ್ಲಾಡಳಿತ ಮೈಮರೆಯಬಾರದಿತ್ತು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ಭಾನುವಾರ ನಗರದ ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಸಮಗ್ರ ತನಿಖೆ ಆಗಬೇಕು.
ಸಂತ್ರಸ್ತರ ಜತೆ ಮಾತನಾಡಿದ್ದೇನೆ. ಮೃತರ ಕುಟುಂಬಕ್ಕೆ ಬಹಳ ಒತ್ತಡದ ನಂತರ ಚೆಕ್ ವಿತರಣೆ ಮಾಡಲಾಗಿದೆ. 25 ಲಕ್ಷ ರೂ. ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಜಿಲ್ಲಾಡಳಿತ ಹಾಗೂ ನಗರಸಭೆ ನಿರ್ಲಕ್ಷéದಿಂದ ಈ ದುರಂತ ಆಗಿದೆ ಎನ್ನುವುದು ಜನರ ಭಾವನೆಯಾಗಿದೆ. ಮೃತರ ಕುಟುಂಬದಲ್ಲಿರುವ ವಿದ್ಯಾವಂತರಿಗೆ ಸರ್ಕಾರ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ಎಲ್ಲಿಯೂ ಇಂತಹ ಘಟನೆ ಮರುಕಳಿಸದಂತೆ ಮುಂದೆ ಎಚ್ಚರಿಕೆ ವಹಿಸಬೇಕು. ಜಿಲ್ಲಾ ಸರ್ವೇಕ್ಷಣಾ ಘಟಕದ ವರದಿಯಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಸರ್ಕಾರ ಇಷ್ಟಕ್ಕೆ ಸುಮ್ಮನಾಗದೆ ಎಲ್ಲ ಕಡೆಗಳಲ್ಲಿ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿಗೆ ಬರುವಂತಹ ದಾರಿದ್ರ ಬರುವುದು ಬೇಡ. ದಾರಿದ್ರ ಯಾರಿಗೂ ಒಳ್ಳೆಯದಲ್ಲ. ಅಂತಹ ಸ್ಥಿತಿ ಕುಮಾರಸ್ವಾಮಿ ಅವರಿಗಂತೂ ಬೇಡವೇ ಬೇಡ.
– ಸಿ.ಟಿ. ರವಿ, ಬಿಜೆಪಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.