ಕಾಶ್ಮೀರದ ಪೂಂಚ್ನಲ್ಲಿ ಭಯೋತ್ಪಾದಕನ ಹತ್ಯೆ: ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Team Udayavani, Aug 7, 2023, 8:44 AM IST
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ಸೋಮವಾರ ವಿಫಲಗೊಳಿಸಿದೆ. ಪರಿಣಾಮ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಜಿಲ್ಲೆಯ ದೆಗ್ವಾರ್ ಸೆಕ್ಟರ್ನಲ್ಲಿ ಭಯೋತ್ಪಾದಕರು ಒಳನುಸುಳಲು ಯತ್ನಿಸುವ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ಎಚ್ಚರಿಕೆ ನೀಡಿದರೂ ಇದನ್ನು ಧಿಕ್ಕರಿಸಿ ಮುನ್ನುಗ್ಗುತಿದ್ದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ ಎಂದು ಸೇನಾ ಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಪಾಕಿಸ್ತಾನದ ಕಡೆಯಿಂದ ನಿಯಂತ್ರಣ ರೇಖೆಯೊಳಗೆ ನುಸುತ್ತಿದ್ದ ಇಬ್ಬರು ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಯಲ್ಲಿ ನಡೆದಿದ್ದು ಈ ವೇಳೆ ಓರ್ವ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟರೆ ಇನ್ನೋರ್ವನಿಗೆ ಗುಂಡೇಟು ತಗುಲಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಕಳೆದ ಕೆಲ ದಿನಗಳಿಂದ ಗಡಿ ಭಾಗದಲ್ಲಿ ಒಳನುಸುಳುವಿಕೆ ಘಟನೆಗಳು ನಡೆಯುತ್ತಿದ್ದು ಸೇನಾ ಪಡೆ ಗಡಿ ಭಾಗದಲ್ಲಿ ಒಳನುಸುಳುವವರಿಗೆ ತಕ್ಕ ಪಾಠ ಕಲಿಸುತ್ತಿದೆ.
ಇದನ್ನು ಓದಿ: Morocco ಭೀಕರ ರಸ್ತೆ ಅಪಘಾತ: 24 ಮಂದಿ ಮೃತ್ಯು, ಹಲವು ಮಂದಿಗೆ ಗಾಯ
Army & Kupwara police in a joint #operation foiled an #infilitration bid by neutralising a #terrorist on #LoC in Amrohi area of #Tangdhar Sector. Incriminating materials, arms & ammunition recovered. Search operation in progress. Further details shall follow.@JmuKmrPolice
— Kashmir Zone Police (@KashmirPolice) August 6, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.