Chandrayaan-3: ಚಂದ್ರನ ಸನಿಹಕ್ಕೆ ಇಸ್ರೋ ನೌಕೆ… ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ
Team Udayavani, Aug 7, 2023, 9:25 AM IST
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯೋಜನೆ ಚಂದ್ರಯಾನ-3ರ ಮತ್ತೂಂದು ಮಜಲು ಯಶಸ್ವಿಯಾಗಿದ್ದು, ಚಂದ್ರನ ಕಕ್ಷೆ ಪ್ರವೇಶಿಸಿರುವ ಬಾಹ್ಯಾಕಾಶ ನೌಕೆ ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ಬಿಡುಗಡೆಗೊಳಿಸಿದೆ.
ಎಕ್ಸ್(ಟ್ವಿಟರ್)ನಲ್ಲಿ ಇಸ್ರೋ ಚಂದ್ರನ ಫೋಟೋವನ್ನು ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆಹಿಡಿಯಲಾದ ಫೋಟೋ ಎಂದಿದೆ.
ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ತನ್ನ ಕಕ್ಷೆ ಕಡಿತ ಕಾರ್ಯವನ್ನೂ ಯಶಸ್ವಿಯಾಗಿ ನಡೆಸಿದೆ.
“ಆಗಸ್ಟ್ 5, 2023 ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ” ಎಂದು ಮಿಷನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಿದೆ.
The Moon, as viewed by #Chandrayaan3 spacecraft during Lunar Orbit Insertion (LOI) on August 5, 2023.#ISRO pic.twitter.com/xQtVyLTu0c
— LVM3-M4/CHANDRAYAAN-3 MISSION (@chandrayaan_3) August 6, 2023
ಚಂದ್ರನ ಕಾರ್ಯಾಚರಣೆಯು ಇಲ್ಲಿಯವರೆಗೆ ಸುಗಮವಾಗಿದೆ ಮತ್ತು ವಿಕ್ರಮ್ ಲ್ಯಾಂಡರ್ ಈ ತಿಂಗಳ ಕೊನೆಯಲ್ಲಿ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಸುಗಮವಾಗಿ ಲ್ಯಾಂಡಿಂಗ್ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.
ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ಸಂಕೀರ್ಣವಾದ 41 ದಿನಗಳ ಪ್ರಯಾಣಕ್ಕಾಗಿ ಉಡಾವಣೆಯಾದ 22 ದಿನಗಳ ನಂತರ ಶನಿವಾರ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ.
ಇದನ್ನು ಓದಿ: Hydarabad: ಮಾಜಿ ನಕ್ಸಲ್ ನಾಯಕ, ಕ್ರಾಂತಿಕಾರಿ ಗೀತೆಗಳಿಗೆ ಹೆಸರಾದ ಗದ್ದರ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.