Alappuzha ; ಏಕಾಏಕಿ ಕಾರು ಸ್ಪೋಟಗೊಂಡು ಯುವಕ ಮೃತ್ಯು
Team Udayavani, Aug 7, 2023, 5:51 PM IST
ಅಲಪ್ಪುಳ: ಇಲ್ಲಿಗೆ ಸಮೀಪದ ಮಾವೇಲಿಕ್ಕಾರದಲ್ಲಿ ಕಾರು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಕಾರಣ 35 ವರ್ಷದ ವ್ಯಕ್ತಿಯೊಬ್ಬರು ಕಾರಿನೊಳಗೆ ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯರಾತ್ರಿಯ ನಂತರ (ಸೋಮವಾರ 12.30) ಕಾರು ಮನೆಯ ಕಾಂಪೌಂಡ್ಗೆ ಪ್ರವೇಶಿಸುತ್ತಿದ್ದಂತೆಯೇ ಏಕಾಏಕಿ ಸ್ಫೋಟಗೊಂಡಿದ್ದು ಕೃಷ್ಣ ಪ್ರಕಾಶ್ ಹೊರ ಬರಲಾಗದೆ ಸುಟ್ಟು ಕರಕಲಾಗಿದ್ದಾರೆ.
ಮೃತ ಕೃಷ್ಣ ಪ್ರಕಾಶ್ ಅವಿವಾಹಿತನಾಗಿದ್ದು, ಸಹೋದರನೊಂದಿಗೆ ವಾಸಿಸುತ್ತಿದ್ದರು. ಮಾವೇಲಿಕ್ಕರ ಪಟ್ಟಣದಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಮೋಟಾರು ವಾಹನ ಇಲಾಖೆಯ ಅಧಿಕಾರಿಗಳು ಕಾರನ್ನು ಪರಿಶೀಲಿಸಿದ್ದು, ಸ್ಫೋಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನುವುದನ್ನು ತಳ್ಳಿಹಾಕಿದ್ದಾರೆ. ಕಾರನ್ನು ಪರೀಕ್ಷಿಸಿದ ನಂತರ, ಬೆಂಕಿ ಹೊತ್ತಿಕೊಂಡ ಬಳಿಕ ವಾಹನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸುಳಿವುಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರಿನ ಇಂಜಿನ್ ಭಾಗಕ್ಕೆ ಬೆಂಕಿ ತಗುಲಿದ ಬಗ್ಗೆ ವರದಿಯಾಗಿಲ್ಲ. ಕಾರಿನ ಹಿಂಬದಿ ಸುಟ್ಟು ಕರಕಲಾಗಿದೆ. ಕಾರಿನ ಮುಂಭಾಗದಲ್ಲಿದ್ದ ಫ್ಯೂಸ್ ಘಟಕದ ಬಗ್ಗೆ ಯಾವುದೇ ಪ್ರಮುಖ ದೂರು ವರದಿಯಾಗಿಲ್ಲ, ಅದರ ಬ್ಯಾಟರಿಗೆ ಪರಿಣಾಮ ಬೀರಿಲ್ಲ.
ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.