Gurugram ಧಾರ್ಮಿಕ ಕೇಂದ್ರಕ್ಕೆ ಬೆಂಕಿ ಹಚ್ಚಿ ದಾಂಧಲೆ; ಪೊಲೀಸರಿಂದ ಪಹರೆ ಮುಂದುವರಿಕೆ
ಹರಿಯಾಣದಲ್ಲಿ ಕಿಡಿಗೇಡಿಗಳಿಂದ ದುಷ್ಕೃತ್ಯ
Team Udayavani, Aug 7, 2023, 11:34 PM IST
ಗುರುಗ್ರಾಮ/ಚಂಡೀಗಢ: ಹರಿಯಾಣದ ನೂಹ್ನಲ್ಲಿ ನಡೆದ ಹಿಂಸಾಚಾರಗಳು ನಿಯಂತ್ರಣಕ್ಕೆ ಬರುತ್ತಲೇ ಗುರುಗ್ರಾಮ ಜಿಲ್ಲೆಯ ಗ್ರಾಮವೊಂದರಲ್ಲಿ ಧಾರ್ಮಿಕ ಕೇಂದ್ರದ ಮೇಲೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಅಲ್ಲಿ ಧಾರ್ಮಿಕ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದ್ದ ವಸ್ತುಗಳು ಸುಟ್ಟು ಹೋಗಿವೆ. ಜಿಲ್ಲೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಇರುವ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಜನರು ಈ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಧಾರ್ಮಿಕ ಕೇಂದ್ರಕ್ಕೆ ತಡರಾತ್ರಿ 1.30ರ ವೇಳೆಗೆ ಬೆಂಕಿ ಹಚ್ಚಲಾಯಿತು. ಸ್ಥಳೀ ಯರ ನೆರವಿನಿಂದ ಅದನ್ನು ನಿಯಂತ್ರಿ ಸಲಾಗಿದೆ ಎಂದು ಪೊಲೀಸರಿಗೆ ಸಲ್ಲಿಸಲಾ ಗಿರುವ ದೂರಿನಲ್ಲಿ ಆರೋ ಪಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ತೆರವಿಗೆ ತಡೆಯಾಜ್ಞೆ: ಇತ್ತೀಚೆಗಷ್ಟೇ ಹಿಂಸಾಕೃತ್ಯಗಳು ನಡೆದು ಸದ್ಯ ತಣ್ಣಗಾ ಗಿರುವ ಹರಿಯಾಣದ ನೂಹ್ನಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಕ್ರಮ ಕಟ್ಟಡಗಳನ್ನು ಕೆಡವಿ ಹಾಕುವ ಕೆಲಸಕ್ಕೆ ತಡೆಯಾಜ್ಞೆ ವಿಧಿಸಲಾಗಿದೆ. ಸರಕಾರದ ಈ ಕ್ರಮದ ಬಗ್ಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾ| ಜಿ.ಎಸ್.ಸಂಧಾವಲಿಯಾ ನೇತೃತ್ವದ ನ್ಯಾಯಪೀಠ ಸ್ವಯಂಪ್ರೇರಿತವಾಗಿ ವಿಚಾ ರಣೆ ನಡೆಸಿತು. ಮುಂದಿನ ಹಂತ ಗಳಲ್ಲಿ ಅಕ್ರಮ ಕಟ್ಟಡಗಳನ್ನು ತೆರವಿನ ಕಾರ್ಯಾಚರಣೆ ನಡೆಸಕೂಡದು ಎಂದು ಆದೇಶ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.