Police Canteen: ಪೊಲೀಸ್ ಕ್ಯಾಂಟೀನ್ಗಳಲ್ಲಿ ಜೈಲು ಉತ್ಪನ್ನಗಳ ಮಾರಾಟ!
ರಾಜ್ಯದ ಕೆಎಸ್ಆರ್ಪಿ, ಸಿಎಆರ್, ಡಿಎಆರ್ ಕ್ಯಾಂಟೀನ್ನಲ್ಲಿ ಮಾರಾಟಕ್ಕೆ ಇಲಾಖೆ ಅಸ್ತು
Team Udayavani, Aug 8, 2023, 11:57 AM IST
ಬೆಂಗಳೂರು: ಕಾರಾಗೃಹಗಳನ್ನು ಸುಧಾರಣಾ ಕೇಂದ್ರಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಒತ್ತು ಕೊಡುತ್ತಿರುವ ಸರ್ಕಾರ ಕೈದಿಗಳ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸುತ್ತಿದ್ದು, ಅದರ ಭಾಗವಾಗಿ ಇದೀಗ ಜೈಲಿನ ಉತ್ಪನ್ನಗಳನ್ನು ಪೊಲೀಸ್ ಇಲಾಖೆಯ ಕ್ಯಾಂಟೀನ್ಗಳಲ್ಲಿ ಮಾರಾಟಕ್ಕೆ ಅಸ್ತು ಎಂದಿದೆ.
ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಪೆಟ್ರೋಲ್ ಬಂಕ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಿದ್ದ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಇದೀಗ ಜೈಲಿನ ಉತ್ಪನ್ನಗಳನ್ನು ಪೊಲೀಸ್ ಇಲಾಖೆಯ ಕ್ಯಾಂಟಿನ್ಗಳಲ್ಲಿ ಮಾರಾಟಕ್ಕೆ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದೆ.
ಅದರಂತೆ ಕಾರಾಗೃಹಗಳಲ್ಲಿ ತಯಾರಾಗುವ ಟಿ-ಶರ್ಟ್, ಬೇಕರಿ ತಿನಿಸುಗಳು ಸೇರಿ ಇತರೆ ಉತ್ಪನ್ನಗಳನ್ನು ಕೆಎಸ್ಆರ್ಪಿ ಕ್ಯಾಂಟೀನ್ಗಳು ಹಾಗೂ ಇತರೆ ಎಲ್ಲ ಪೊಲೀಸ್ ಕ್ಯಾಂಟೀನ್ಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ನೀಡಿದೆ.
ಈಗಾಗಲೇ ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್(ಐಓಸಿ) ಜತೆ ಒಡಂಬಡಿಕೆ ಮಾಡಿಕೊಂಡು ಪೆಟ್ರೋಲ್ ಬಂಕ್ಗಳ ಸ್ಥಾಪನೆಗೆ ನೀಲನಕ್ಷೆ ಸಿದ್ಧಪಡಿಸಿ, ಈ ಮೂಲಕ ಇಲಾಖೆ ಮತ್ತು ಸಜಾಬಂಧಿಗಳ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದೆ.
ಈ ಬೆನ್ನಲ್ಲೇ ಕಾರಾಗೃಹದ ಬೇಕರಿ, ಕೈಮಗ್ಗ ಹಾಗೂ ಕಬ್ಬಿಣ ಉಪಕರಣಗಳ ತಯಾರಿಕಾ ಘಟಕ, ರಾಸಾಯನಿಕ ಘಟಕ, ಮುದ್ರಣಾಲಯ ಹಾಗೂ ಇತರೆ ಘಟಕದಲ್ಲಿ ಉತ್ಪಾದಿಸುವ ವಸ್ತುಗಳ ಮಾರಾಟಕ್ಕೆ ಈ ಹಿಂದೆ ಕಾರಾಗೃಹ ಮುಖ್ಯಸ್ಥರಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದರು.
ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಪೊಲೀಸ್ ಇಲಾಖೆ, ಕೆಎಸ್ಆರ್ಪಿ, ಸಿಎಆರ್, ಡಿಎಆರ್ ಕ್ಯಾಂಟೀನ್ಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ಕಾಲ ಸಂಗ್ರಹಿಸಿ ಇಡಬಹುದಾದ ಬೇಕರಿಯ ಬ್ರೇಡ್, ರಸ್ಕ್, ಖಾರ ಮತ್ತು ಸಿಹಿ ಬೆಣ್ಣೆ ಬಿಸ್ಕೆಟ್ಗಳು ಸೇರಿ ಆರೇಳು ರೀತಿಯ ತಿನಿಸುಗಳು ಹಾಗೂ ಕೈಮಗ್ಗದ ಶರ್ಟ್ಗಳು (ಅರ್ಥ ತೋಳಿನ, ಪೂರ್ಣ ತೋಳಿನ) ಟಿ-ಶರ್ಟ್, ಟವಲ್, ಲುಂಗಿ, ಬೆಡ್ಶೀಟ್ಗಳು, ಕರವಸ್ತ್ರಗಳು, ಫಿನಾಯಿಲ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಕಾರಾಗೃಹ ಇಲಾಖೆಗೆ ಆದಾಯ ಹೆಚ್ಚಳವಾಗಿದೆ.
ಇದೇ ವೇಳೆ ಜೈಲಿನಲ್ಲಿ ತಯಾರಿಸುವ ಕಬ್ಬಿಣದ ಉಪಕರಣಗಳಾದ ಫರ್ನಿಚರ್ಗಳಿಗೆ ಕೋರ್ಟ್ ಗಳಿಂದ ಉತ್ತಮ ಬೇಡಿಕೆ ಇದ್ದು, ಅವುಗಳನ್ನು ಬೇಡಿ ಕೆಗೆ ಅನುಗುಣವಾಗಿ ತಯಾರಿಸಿ ಮಾರಾಟ ಮಾಡ ಲಾಗುತ್ತಿದೆ. ಜತೆಗೆ ಕೆಲ ಆಸ್ಪತ್ರೆಗಳಿಗೆ ಬೇಕಾಗುವ ಕಬ್ಬಿಣದ ಬೆಡ್ಗಳು ಮತ್ತು ಪಕ್ಕದಲ್ಲಿ ಔಷಧಿಗಳು ಇಡುವ ಫರ್ನಿಚರ್ಗಳನ್ನು ಮಾರಾಟ ಮಾಡಲಾ ಗುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಕೆಎಸ್ಆರ್ಪಿಯಲ್ಲೂ ಬೇಕರಿಗಳಿವೆ. ಆದರೆ, ಎಲ್ಲ ಉತ್ಪನ್ನಗಳನ್ನು ತಯಾರಿಸುವುದಿಲ್ಲ. ತಮ್ಮ ತಯಾರಿಸದ ಆಹಾರ ಪದಾರ್ಥಗಳನ್ನು ಬೇಡಿಕೆಗೆ ಅನುಸಾರವಾಗಿ ಪಡೆಯಲಾಗಿದೆ. ಜತೆಗೆ ಡಿಎಆರ್ ಮತ್ತು ಸಿಎಆರ್ ಕ್ಯಾಂಟೀನ್ಗಳಲ್ಲಿ ಎಲ್ಲ ಉತ್ಪನ್ನಗಳ ಮಾರಲಾಗುತ್ತಿದೆ. ಹೆಚ್ಚಾಗಿ ಶರ್ಟ್ಗಳು, ಕರವಸ್ತ್ರ, ಫಿನಾಯಿಲ್, ಟಿ-ಶರ್ಟ್ಗಳಿಗೆ ಉತ್ತಮ ಬೇಡಿಕೆ ಇದೆ ಎಂದು ಕೆಎಸ್ಆರ್ಪಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.
– ಮೋಹನ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.