Child Day Care Centre: ಕರಾವಳಿಯಲ್ಲಿ 55 “ಕೂಸಿನ ಮನೆ’


Team Udayavani, Aug 9, 2023, 9:10 AM IST

tdy-4

ಸಾಂದರ್ಭಿಕ ಚಿತ್ರ

ಮಂಗಳೂರು: ನಗರ ಪ್ರದೇಶಗಳಲ್ಲಿ ಈಗಾಗಲೇ ಹೆಚ್ಚು ಪ್ರಚಲಿತದಲ್ಲಿರುವ, ದುಡಿಯುವ ಮಹಿಳೆಯರಿಗೆ ಅವರ ಶಿಶುಗಳನ್ನು ನೋಡಿಕೊಳ್ಳುವಂತಹ “ಚೈಲ್ಡ್‌ ಡೇ ಕೇರ್‌ ಸೆಂಟರ್‌’ ಮಾದರಿಯ “ಶಿಶುಪಾಲನಾ ಕೇಂದ್ರ’ಗಳು ಇನ್ನು ಮುಂದೆ ಗ್ರಾಮೀಣ ಭಾಗದಲ್ಲೂ ಆರಂಭವಾಗಲಿವೆ.

ಕೆಲಸಕ್ಕೆ ತೆರಳುವ ಗ್ರಾಮೀಣ ತಾಯಂದಿರ ಅನುಕೂಲಕ್ಕಾಗಿ ಮತ್ತು ಶಿಶುಗಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷೆಗಾಗಿ “ಕೂಸಿನ ಮನೆ’ ಎಂಬ ಹೆಸರಿನಲ್ಲಿ ರಾಜ್ಯದಲ್ಲಿ ಒಟ್ಟು 4 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಈ ಕೇಂದ್ರಗಳು ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆ. 15ರೊಳಗೆ ರಾಜ್ಯದ ಒಂದು ಸಾವಿರ ಗ್ರಾಮಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭಿಸುವ ಗುರಿ ಹೊಂದಲಾಗಿದೆ.

ಕರಾವಳಿಯಲ್ಲಿ 55 ಕೇಂದ್ರ:

ಆರಂಭಿಕ ಹಂತದಲ್ಲಿ ಅತೀ ಹೆಚ್ಚು ಆವಶ್ಯಕತೆ ಇರುವ ಜಿಲ್ಲೆಗಳಲ್ಲಿ ಕೇಂದ್ರ ರಚಿಸಲು ರಾಜ್ಯ ಸರಕಾರ ಉದ್ದೇಶಿಸಿದೆ. ಬಹುತೇಕ ಉತ್ತರ ಕರ್ನಾಟಕ ಭಾಗದಲ್ಲಿ ನಿರ್ಮಾಣವಾಗಲಿದೆ. ಆದ್ದರಿಂದ ಮೊದಲ ಹಂತದ ಅನುಷ್ಠಾನದಲ್ಲಿ ದ.ಕ. ಉಡುಪಿ ಜಿಲ್ಲೆಗಳು ಸ್ಥಾನ ಪಡೆದಿಲ್ಲ. ಎರಡು ಮೂರನೇ ಹಂತದಲ್ಲಿ ಕರಾವಳಿಯಲ್ಲೂ ಕೇಂದ್ರಗಳು ಆರಂಭವಾಗಲಿದ್ದು, ಈಗಾಗಲೇ ದ.ಕ. ಜಿಲ್ಲೆಗೆ 33 ಕೇಂದ್ರ ಸ್ಥಾಪನೆ ಮತ್ತು ಉಡುಪಿ ಜಿಲ್ಲೆಯಲ್ಲಿ 22 ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಗುರಿ ನೀಡಲಾಗಿದೆ.

ಏನಿದು “ಕೂಸಿನ ಮನೆ’?:

ಆರಂಭದಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಮಹಿಳಾ ಕೂಲಿ ಕಾರ್ಮಿಕರಿಗೆ ಅವರ ಸಣ್ಣ ಮಕ್ಕಳನ್ನು ಬೆಳಗ್ಗಿನಿಂದ ಸಂಜೆ ವರೆಗೆ ಬಿಡಲು ಎಂದು ಮೊದಲು ಯೋಜನೆ ರೂಪಿಸಲಾಗಿತ್ತು. ಬಳಿಕ ಗ್ರಾಮದ ಎಲ್ಲ ಮಹಿಳೆಯರಿಗೂ ಇದನ್ನು ವಿಸ್ತರಿಸಲಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದಿದ್ದರೆ ಈ ಕೇಂದ್ರಗಳಲ್ಲಿ ಬಿಟ್ಟು ಕೆಲಸಕ್ಕೆ ಹೋಗಬಹುದಾಗಿದೆ. ಇವು ಅಂಗನವಾಡಿಗಿಂತ ತುಸು ಭಿನ್ನವಾಗಿದ್ದು, ಅಂಗನವಾಡಿಯಲ್ಲಿ ಮೂರ್ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳನ್ನು ಸೇರಿಸಲಾಗುತ್ತದೆ. ಆದರೆ ಇದು ಹಾಲುಣಿಸುವ ಒಂದು ವರ್ಷ-ಎರಡು ವರ್ಷದ ಮಕ್ಕಳಿಗೆ ಸಂಬಂಧಿಸಿದ್ದು. ನರೇಗಾ ಜಾಬ್‌ ಕಾರ್ಡ್‌ ಹೊಂದಿರುವ ಮಹಿಳೆಯೇ ಇಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳಿಗೆ ಬೇಕಾದ ಪೌಷ್ಟಿಕ ಆಹಾರವನ್ನೂ ಒದಗಿಸಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಸರಕಾರದ ಸೂಚನೆ ಏನು?:

ಶಿಶಿಪಾಲನೆಗೆ ಯೋಗ್ಯ ಇರುವಂತಹ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸರಕಾರಿ ಕಟ್ಟಡಗಳನ್ನು ಗುರುತಿಸಿ ಕೇಂದ್ರ ನಿರ್ಮಿಸಬೇಕು ಎಂದು ಸರಕಾರ ಸೂಚಿಸಿದ್ದು, ಮುಖ್ಯವಾಗಿ ಅಂಗನವಾಡಿ, ಶಾಲೆ ಕಟ್ಟಡ, ಸಮುದಾಯ ಕಟ್ಟಡ, ಉಪಯೋಗವಿಲ್ಲದ ಉತ್ತಮ ಸ್ಥಿತಿಯಲ್ಲಿರುವ ಸರಕಾರಿ ಕಟ್ಟಡ ಕೇಂದ್ರಗಳನ್ನು ಗುರುತಿಸಲು ಸೂಚಿಸಿದೆ. ಕನಿಷ್ಠ 300 ಚ.ಅಡಿ.ವಿಸ್ತೀರ್ಣ ಹೊಂದಿರುವ ಕಟ್ಟಡ ಗಾಳಿ, ಬೆಳಕು, ರ್‍ಯಾಂಪ್‌ ಹೊಂದಿರುವುದು ಕಡ್ಡಾಯ.

“ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸರಕಾರಿ ಕಟ್ಟಡಗಳನ್ನು ಗುರುತಿಸುವಂತೆ ಸರಕಾರದಿಂದ ಸೂಚನೆ ಬಂದಿದೆ. ಉಡುಪಿಯಲ್ಲಿ ಹೆಚ್ಚುವರಿ ಸ್ಥಳಾವಕಾಶ ಇರುವಂತಹ 22 ಅಂಗನವಾಡಿ ಕೇಂದ್ರದ ಕಟ್ಟಡಗಳನ್ನು ಗುರುತಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ  ಉತ್ತಮ ಕಟ್ಟಡವನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.– ಕಿಶನ್‌ ರಾವ್‌, ವಿಜಯಶ್ಯಾಮ,ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿಗಳು, ದ.ಕ-ಉಡುಪಿ

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.