![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Aug 10, 2023, 5:36 PM IST
ಹೊಸದಿಲ್ಲಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಡಿಎಂಕೆ ಆರೋಪಗಳಿಗೆ ಲೋಕಸಭೆಯಲ್ಲಿ ಗುರುವಾರ ತಿರುಗೇಟು ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‘ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಸೀರೆ ಎಳೆದ ವಿಚಾರವನ್ನು ಪ್ರಸ್ತಾವಿಸಿದರು.
ಸರಕಾರದ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ವಿಪಕ್ಷಗಳ ವಿರುದ್ಧ ಕಿಡಿ ಕಾರಿದರು.
ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕುರಿತು ಡಿಎಂಕೆ ನಾಯಕಿ ಕನಿಮೊಳಿ ಅವರ ಟೀಕೆಗೆ ತಿರುಗೇಟು ನೀಡಿ “ಮಹಿಳೆಯರ ವಿರುದ್ಧದ ಅಪರಾಧ ಎಲ್ಲಿಯೇ ಆಗಲಿ, ಮಣಿಪುರವೋ, ರಾಜಸ್ಥಾನ ಅಥವಾ ದೆಹಲಿಯಾಗಲಿ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಆದರೆ ಅದರಲ್ಲಿ ಯಾವುದೇ ರಾಜಕೀಯ ಇರಬಾರದು” ಎಂದು ಹೇಳಿದರು.
ಪ್ರತಿಭಟನಾನಿರತ ಡಿಎಂಕೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಿರ್ಮಲಾ ಅವರು ”ನೀವು ಕೌರವ ಸಭೆಯ ಬಗ್ಗೆ ಮಾತನಾಡುತ್ತಿದ್ದೀರಿ, ದ್ರೌಪದಿಯ ಬಗ್ಗೆ ಮಾತನಾಡುತ್ತಿದ್ದೀರಿ, ಡಿಎಂಕೆ ಜಯಲಲಿತಾ ಅವರನ್ನು ಮರೆತಿದೆಯೇ? ನಂಬಲಾಗುತ್ತಿಲ್ಲ” ಎಂದರು.
ಮಾರ್ಚ್ 25, 1989 ರಂದು ತಮಿಳುನಾಡು ವಿಧಾನಸಭೆಯಲ್ಲಿ ಜಯಲಲಿತಾ ಅವರ ಸೀರೆಯನ್ನು ಎಳೆದ ಘಟನೆಯನ್ನು ನೆನಪಿಸಿದರು. ವಿರೋಧ ಪಕ್ಷದ ನಾಯಕಿಯಾಗಿದ್ದಾಗ, ಡಿಎಂಕೆ ಸದಸ್ಯರು ಗಲಾಟೆ ಮಾಡಿದ್ದರು, ನಕ್ಕರು. ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಮರಳುತ್ತೇನೆ ಎಂದು ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಿದರು. ಎರಡು ವರ್ಷಗಳ ನಂತರ ಅವರು ಮತ್ತೆ ಮುಖ್ಯಮಂತ್ರಿಯಾದರು” ಎಂದರು.
ಕೇಂದ್ರವು ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಹಣಕಾಸು ಸಚಿವೆ, ”ಪ್ರಧಾನಮಂತ್ರಿ ಅವರು ಸಿಲಪತಿಕಾರಂ ಅವರ ಸ್ಫೂರ್ತಿಯನ್ನು ಉತ್ಸಾಹದಲ್ಲಿ ಜಾರಿಗೆ ತರುತ್ತಿದ್ದಾರೆ” ಎಂದರು.
ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿ, “ಸೆಂಗೊಲ್ ನ್ಯಾಯದ ಸಂಕೇತವಾಗಿ ಹೊಸ ಸಂಸತ್ತಿನಲ್ಲಿ ಸ್ಥಾಪಿಸಲಾದ ರಾಜದಂಡವಾಗಿದೆ. ಅದನ್ನು ಮರೆತು ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿತ್ತು. ಅದು ತಮಿಳರಿಗೆ ಮಾಡಿದ ಅವಮಾನ ಅಲ್ಲವೇ” ಎಂದು ಪ್ರಶ್ನಿಸಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.