Devanahalli: ದೇವನಹಳ್ಳಿಯಲ್ಲಿ ವಾಹನ “ಗುಜರಿ ಅಂಗಡಿ”
- ರಾಜ್ಯದ ಮೊದಲ ಗುಜರಿ ಅಂಗಡಿ ಒಂದು ತಿಂಗಳಲ್ಲಿ ಆರಂಭ
Team Udayavani, Aug 11, 2023, 5:48 AM IST
ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲವೇ ವಾರಗಳಲ್ಲಿ ರಾಜ್ಯದ ಮೊದಲ “ನೋಂದಾಯಿತ ವಾಹನಗಳ ಗುಜರಿ ಅಂಗಡಿ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ತಲೆಯೆತ್ತಲಿದೆ. ಇದರೊಂದಿಗೆ ರಾಜ್ಯದಲ್ಲಿರುವ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕುವ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯಲಿದೆ.
ಮಹೀಂದ್ರ ಸಿರೊ ಕೇಂದ್ರದ ಸಾರ್ವಜನಿಕ ಉದ್ದಿಮೆ ಎಂಎಸ್ಟಿಸಿ ಲಿ., ಸಹಯೋಗದಲ್ಲಿ ಸುಮಾರು ಮೂರು ಎಕ್ರೆ ಜಾಗದಲ್ಲಿ ವಾಹನಗಳ ಗುಜರಿ ಕೇಂದ್ರ ತಲೆಯೆತ್ತಲಿದೆ. ಸರಕಾರದ ಮಟ್ಟದಲ್ಲಿ ಈ ಸಂಬಂಧದ ಬಹುತೇಕ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕೆಲವು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವಂತೆ ಕಂಪೆನಿಗೆ ಸೂಚಿಸಲಾಗಿದೆ. ಒಟ್ಟಾರೆ ಇನ್ನೊಂದು ತಿಂಗಳಲ್ಲಿ ಈ ಕೇಂದ್ರ ಅಸ್ತಿತ್ವಕ್ಕೆ ಬರಲಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಕೇಂದ್ರದ ಗುಜರಿ ನೀತಿಯನ್ನು ಜಾರಿಗೊಳಿಸಲು ರಾಜ್ಯವೂ ಮುಂದಾಗಿದೆ. ಅದರಂತೆ 15 ವರ್ಷ ಮೀರಿದ ಎಲ್ಲ ಪ್ರಕಾರದ ನೋಂದಾಯಿತ ವಾಹನಗಳನ್ನು ಗುಜರಿಗೆ ಹಾಕುವ ಪೂರಕ ಸೌಲಭ್ಯ ಕೇಂದ್ರ ತೆರೆಯಲು ಆನ್ಲೈನ್ ಮೂಲಕ ಸಾರಿಗೆ ಇಲಾಖೆ ಈ ಹಿಂದೆಯೇ ಅರ್ಜಿ ಆಹ್ವಾನಿಸಿತ್ತು. ಮೂರು ಕಂಪೆನಿಗಳು ಮುಂದೆ ಬಂದಿವೆ. ಈ ಪೈಕಿ ಮಹೀಂದ್ರ ಸಿರೊ ಈಗಾಗಲೇ ಬಹುತೇಕ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಿತ್ಯ ಸುಮಾರು 500 ವಾಹನಗಳನ್ನು ಗುಜರಿಗೆ ಹಾಕುವ ಸಾಮರ್ಥ್ಯ ಹೊಂದಿದೆ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ (ಪ್ರವರ್ತನ) ಸಿ. ಮಲ್ಲಿಕಾರ್ಜುನ “ಉದಯವಾಣಿ’ಗೆ ತಿಳಿಸಿದರು.
ವರ್ಷಾಂತ್ಯದಲ್ಲಿ 3 ಕೇಂದ್ರಗಳು ಅಸ್ತಿತ್ವಕ್ಕೆ?
ಕೇಂದ್ರದ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಅಂದಾಜು 16 ಲಕ್ಷ ಅವಧಿ ಮೀರಿದ ನೋಂದಾಯಿತ ವಾಹನಗಳಿವೆ. ಇದರಲ್ಲಿ ಸರಕಾರಿ ವಾಹನಗಳು ಅಂದಾಜು 15 ಸಾವಿರ ಇದ್ದು, ಹಂತಹಂತವಾಗಿ ಗುಜರಿಗೆ ಹಾಕುವ ಪ್ರಕ್ರಿಯೆ ನಡೆಯಲಿದೆ. ಉತ್ತರ ಭಾರತದಲ್ಲಿ ಈಗಾಗಲೇ ಗುಜರಿ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದೆ. ದಕ್ಷಿಣ ಭಾರತದಲ್ಲಿ ಬಹುಶಃ ಆಂಧ್ರಪ್ರದೇಶದ ಬಳಿಕ ಕರ್ನಾಟಕವೇ ಎರಡನೇ ಕೇಂದ್ರ ಆಗಲಿದೆ ಎಂದು ಅವರು ಹೇಳಿದರು.
ಕಡ್ಡಾಯ ಅಲ್ಲ
15 ವರ್ಷ ಮೀರಿದ ವಾಹನಗಳನ್ನು ಸ್ಕ್ರಾಪ್ಗೆ ಹಾಕುವುದು ಕಡ್ಡಾಯ ಅಲ್ಲ. ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಇಚ್ಛಿಸಿದಲ್ಲಿ ಅದರಲ್ಲಿರುವ ಸ್ಟ್ರೀಲ್ ಭಾಗಗಳನ್ನು ತೂಕದ ಲೆಕ್ಕದಲ್ಲಿ ಪಡೆದು, ವಾಹನ ಮಾಲಕರಿಗೆ ಹಣ ಪಾವತಿಸಲಾಗುತ್ತದೆ. ಜತೆಗೆ ಠೇವಣಿ ಪ್ರಮಾಣಪತ್ರ ನೀಡಲಾಗುತ್ತದೆ. ಹೊಸ ವಾಹನ ಖರೀದಿಸುವಾಗ ಅದನ್ನು ತೋರಿಸಿದರೆ, ಹಳೆಯ ವಾಹನದ ತೆರಿಗೆಯಲ್ಲಿ ಸಾರಿಗೆಯೇತರ ವಾಹನಕ್ಕೆ ಶೇ. 25ರಷ್ಟು ಹಾಗೂ ಸಾರಿಗೆ ವಾಹನಕ್ಕೆ ಶೇ. 15ರಷ್ಟು ವಿನಾಯಿತಿ ದೊರೆಯಲಿದೆ.
ಗುಜರಿಗೆ ಹಾಕುವ ವಾಹನಗಳ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣ ಇರಬಾರದು, ಸಂಚಾರ ನಿಯಮ ಉಲ್ಲಂಘನೆಯ ದಂಡ ಬಾಕಿ ಇರಬಾರದು ಎಂಬ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಗುಜರಿಗೆ ಹಾಕಿದ ವಾಹನದ ಚೇಸಿಸ್ ಸಂಖ್ಯೆಯನ್ನು ಆರು ತಿಂಗಳ ಕಾಲ ಇಡಲಾಗುತ್ತದೆ. ಜತೆಗೆ ಸಾðéಪ್ ಆದ ವಾಹನಗಳ ಭೌತಿಕ ದಾಖಲೆಗಳನ್ನು ಎರಡು ವರ್ಷಗಳ ಮಟ್ಟಿಗೆ ಇಟ್ಟುಕೊಳ್ಳಲಾಗುತ್ತದೆ. ಬಳಿಕ ಅವೆಲ್ಲವೂ ಡಿಜಿಟಲೀಕರಣಗೊಳ್ಳಲಿವೆ.
ಕೊಪ್ಪಳ, ಕೊರಟಗೆರೆಯಲ್ಲೂ ಸ್ಥಾಪನೆ
ಮುಂದಿನ ಮೂರು ತಿಂಗಳಲ್ಲಿ ತುಮಕೂರಿನ ಕೊರಟಗೆರೆ ಹಾಗೂ ಕೊಪ್ಪಳದಲ್ಲಿ ಕೂಡ ಗುಜರಿ ಕೇಂದ್ರಗಳು ಬರಲಿವೆ. ಈ ಸಂಬಂಧದ ಪ್ರಸ್ತಾವನೆಗಳು ಸರಕಾರದ ವಿವಿಧ ಹಂತಗಳಲ್ಲಿವೆ. ಸದ್ಯಕ್ಕೆ ಇವೆರಡಕ್ಕೂ ಪ್ರಾಥಮಿಕ ಅನುಮತಿ ನೀಡಿದ್ದು, ಇದರಿಂದ ಕಂಪೆನಿಗಳು ಅಗತ್ಯ ಯಂತ್ರೋಪಕರಣಗಳನ್ನು ಹಾಕಿಕೊಳ್ಳಲು ಅನುಕೂಲ ಆಗಲಿದೆ ಎಂದು ಸಿ. ಮಲ್ಲಿಕಾರ್ಜುನ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theft; ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.