Karnataka: ತನಿಖಾ ವರದಿ ಬರುವ ತನಕ ಬಿಲ್ ಪಾವತಿ ಇಲ್ಲ: ಡಿಕೆಶಿ
Team Udayavani, Aug 10, 2023, 10:07 PM IST
ಬೆಂಗಳೂರು: ಬಿಬಿಎಂಪಿ ಬಿಲ್ ಬಾಕಿಗೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಬಿಸಿಬಿಸಿ ಚರ್ಚೆ ನಡೆದಿದ್ದು, ತನಿಖಾ ವರದಿ ಬರುವವರೆಗೂ ಬಿಲ್ ಪಾವತಿ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಾಗಿ ಹೇಳಿದ್ದಾರೆ ಎನ್ನಲಾಗಿದೆ.
ಈ ವಿವಾದವನ್ನು ಮುಂದುವರಿಸಿದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಪಕ್ಷಕ್ಕೆ ಸಮಸ್ಯೆಯಾಗಬಹುದು ಎಂದು ಬೆಂಗಳೂರು ನಗರದ ಕೆಲವು ಸಚಿವರು ಕಳವಳ ವ್ಯಕ್ತಪಡಿಸಿದರು ಎನ್ನಲಾಗಿದೆ. ಗುತ್ತಿಗೆದಾರರಲ್ಲಿ ಕಾಂಗ್ರೆಸ್ ಪರವಾಗಿರುವವರೂ ಇದ್ದಾರೆ. ಹೀಗಾಗಿ ಈ ವಿವಾದವನ್ನು ಮತ್ತಷ್ಟು ಕಾಲ ಮುಂದುವರಿಸುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.
ಆದರೆ ಇದಕ್ಕೆ ಒಪ್ಪದ ಡಿ.ಕೆ.ಶಿವಕುಮಾರ್, ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಕುರಿತು ಅಧಿಕಾರಿಗಳ ತಂಡ ತನಿಖೆ ಆರಂಭಿಸಿದೆ. ಇನ್ನೊಂದು ತಿಂಗಳಲ್ಲೇ ವರದಿ ಬರಲಿದೆ. ಬಳಿಕ ಬಿಜೆಪಿ ಸರಕಾರದ ಬಂಡವಾಳ ಬಯಲಾಗುತ್ತದೆ. ಅದನ್ನು ಜನರ ಮುಂದಿಡಬೇಕು. ಬಿಬಿಎಂಪಿ ಚುನಾವಣೆಯಲ್ಲಿ ಈ ಅಂಶವನ್ನು ಜನರ ಗಮನಕ್ಕೆ ತರಲೂ ತೀರ್ಮಾನಿಸಲಾಗಿದೆ. ಹೀಗಾಗಿ ಯಾವುದೇ ಒತ್ತಡಕ್ಕೆ ಮಣಿಯುವುದು ಬೇಡ ಎಂದು ಸ್ಪಷ್ಟ ನಿಲುವು ವ್ಯಕ್ತಪಡಿಸಿದರು ಎನ್ನಲಾಗಿದೆ.
ವಿಪಕ್ಷಗಳು ಒಂದಿಲ್ಲೋಂದು ವಿಷಯ ಇಟ್ಟುಕೊಂಡು ಸರಕಾರದ ಮೇಲೆ ಮುಗಿಬೀಳುತ್ತಿದ್ದು, ಅವರಿಗೆ ಸರಿಯಾದ ರೀತಿಯಲ್ಲಿ ತಿರುಗೇಟು ನೀಡಬೇಕು. ಗುತ್ತಿಗೆದಾರರ ಕಮಿಷನ್ ಆರೋಪ ವಿಚಾರ, ಕೃಷಿ ಸಚಿವರ ವಿರುದ್ಧದ ಪತ್ರ, ಶಾಸಕರ ಸಹಿ ಸಂಗ್ರಹ ಮತ್ತು ಅಧಿಕಾರಿಗಳ ವರ್ಗಾವಣೆ ಹೀಗೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಅನೌಪಚಾರಿಕ ಚರ್ಚೆ ನಡೆಯಿತು ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕಾಪ್ರಹಾರಕ್ಕೆ ಮೃದು ಧೋರಣೆ ತಾಳದೆ ರಾಜಕೀಯವಾಗಿ ತಿರುಗೇಟು ಕೊಡಬೇಕು. ಕೃಷಿ ಇಲಾಖೆ ಅಧಿಕಾರಿಗಳ ದೂರು ಮತ್ತು ರಾಜಭವನದ ಪ್ರತಿಕ್ರಿಯೆಯ ಬೆಳವಣಿಗೆಯಲ್ಲಿ ತನಿಖೆ ನಡೆದಿದ್ದು, ಪತ್ರವನ್ನು ಮೂರನೇ ವ್ಯಕ್ತಿ ಬರೆದಿ¨ªಾರೆ. ರಾಜಭವನವನ್ನು ಈ ವಿಷಯದಲ್ಲಿ ಬಳಸಿಕೊಳ್ಳಲಾಗಿದೆ. ಈಗ ಪತ್ರದ ಬಗ್ಗೆ ತನಿಖೆ ನಡೆದಿದ್ದು, ಬಹುತೇಕ ಅದು ನಕಲಿಯಾಗಿದೆ. ಈ ಅಂಶವನ್ನು ಜನರ ಮುಂದಿಟ್ಟು ಜೆಡಿಎಸ್ ಬಣ್ಣ ಬಯಲು ಮಾಡಬೇಕು ಎಂದು ಸಚಿವರಿಗೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.