Kerala: ಮದ್ಯ ಜಾಹೀರಾತು ಪ್ರಸಾರಕ್ಕೆ ಕೇರಳ ಅನುಮತಿ?
-ಸಿನಿಮಾ ವೇಳೆ ಮದ್ಯ ಜಾಹೀರಾತು ಪ್ರಸಾರ, ಶುಲ್ಕ ಕೊಟ್ಟರೆ ಎಚ್ಚರಿಕೆ ಸಂದೇಶಕ್ಕೂ ಕೊಕ್!
Team Udayavani, Aug 10, 2023, 10:31 PM IST
ತಿರುನಂತಪುರ: ಕೇರಳದಲ್ಲಿ ಇನ್ನೂ ಮುಂದೆ ಸಿನಿಮಾ ಪ್ರಸಾರದ ವೇಳೆ ಮದ್ಯ ಜಾಹೀರಾತುಗಳನ್ನು ಪ್ರಸಾರ ಮಾಡಬಹುದು. ಮಾತ್ರವಲ್ಲ ಮದ್ಯ, ತಂಬಾಕಿನ ದೃಶ್ಯ ಪ್ರಸಾರವಾಗುವ ಸಮಯದಲ್ಲಿ ಜಾಗೃತಿ ಸಂದೇಶ ಪ್ರಸಾರ ಮಾಡುವುದು ಕಡ್ಡಾಯವಲ್ಲ ಎಂಬ ನಿಯಮವೂ ಜಾರಿಯಾಗಬಹುದು! ಕೇರಳ ವಿಧಾನಸಭೆಯಲ್ಲಿ ಅಬಕಾರಿ (ತಿದ್ದುಪಡಿ) ವಿಧೇಯಕ, 2023 ಅನ್ನು ಧ್ವನಿಮತದ ಮೂಲಕ ಆಯ್ಕೆಸಮಿತಿಗೆ ಕಳುಹಿಸಲಾಗಿದೆ. ರಾಜ್ಯದ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೇರಳ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ಮುಂಗಡವಾಗಿ ಜಾಹೀರಾತುದಾರ 50,000 ರೂ. ಠೇವಣಿ ಇಟ್ಟರೆ, ಮದ್ಯ ಜಾಹೀರಾತಿಗೆ ಸರ್ಕಾರ ಅನುಮತಿ ನೀಡಲಿದೆ. ಇನ್ನೊಂದೆಡೆ, ಸಿನಿಮಾದ ನಿರ್ಮಾಪಕ ಮೊದಲೇ 50,000 ರೂ. ಠೇವಣಿ ಇಟ್ಟರೆ, ಆರೋಗ್ಯದ ಎಚ್ಚರಿಕೆಯ ಸಂದೇಶ ಇಲ್ಲದೇ ದೃಶ್ಯಗಳ ಪ್ರಸಾರಕ್ಕೆ ಅವಕಾಶ ನೀಡಲಿದೆ.
ಪ್ರಸ್ತುತ, ಸಿನಿಮಾದಲ್ಲಿ ಮದ್ಯ ಮತ್ತು ತಂಬಾಕಿನ ದೃಶ್ಯ ಪ್ರಸಾರ ಸಮಯದಲ್ಲಿ ಆರೋಗ್ಯದ ಎಚ್ಚರಿಕೆಯ ಸಂದೇಶ ಪ್ರಸಾರ ಮಾಡದಿದ್ದರೆ, ಕಾನೂನು ಉಲ್ಲಂಘನೆ ಅಡಿಯಲ್ಲಿ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಬಹುದಾಗಿದೆ. ಕೇರಳ ಸರ್ಕಾರ ತಿದ್ದುಪಡಿ ಮೂಲಕ ಈ ಶಿಕ್ಷೆಯನ್ನು ರದ್ದು ಮಾಡಲು ಮುಂದಾಗಿದೆ. ಕೇರಳ ಸರ್ಕಾರದ ಈ ಕ್ರಮಕ್ಕೆ ಕಾಂಗ್ರೆಸ್ ಶಾಸಕ ಮಾಥ್ಯೂ ಕುಜಲನಾಡನ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.