Bribery: ಲಂಚದ ಪತ್ರ: ಕೃಷಿ ಅಧಿಕಾರಿಗಳ ವಿಚಾರಣೆ
Team Udayavani, Aug 10, 2023, 11:43 PM IST
ಮಂಡ್ಯ: ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ಸಹಾಯಕ ಕೃಷಿ ನಿರ್ದೇಶಕರು ಬರೆದಿದ್ದಾರೆ ಎನ್ನಲಾದ ದೂರು ಅರ್ಜಿಯ ಕುರಿತ ವಿಚಾರಣೆ ಗುರುವಾರವೂ ಮುಂದುವರಿದಿದ್ದು, ಸಿಐಡಿ ತಂಡ ಕೃಷಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಗುರುವಾರವೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ಉಪನಿರ್ದೇಶಕರು ಸಹಿತ ಜಿಲ್ಲೆಯ ಏಳು ಸಹಾಯಕ ಕೃಷಿ ನಿರ್ದೇಶಕರನ್ನು ಕರೆಸಿ ಊಟಕ್ಕೂ ಬಿಡದೆ ಸು ದೀರ್ಘ ನಾಲ್ಕು ಗಂಟೆ ವಿಚಾರಣೆ ನಡೆಸಿದರು. ಸಿಐಡಿ ಅ ಧಿಕಾರಿಗಳ ಡ್ರಿಲ್ಗೆ ಕೃಷಿ ಅ ಧಿಕಾರಿಗಳು ಸುಸ್ತಾಗಿದ್ದಾರೆ.
ಕೃಷಿ ಅಧಿಕಾರಿಗಳ ತನಿಖೆ ನಡೆಸಿದ ಸಿಐಡಿ ಪೊಲೀಸರು ಅನಂತರ ಜಂಟಿ ಕೃಷಿ ನಿರ್ದೇಶಕ, ಉಪ ನಿರ್ದೇಶಕ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು. ಅಧಿಕಾರಿಗಳು ಮೊಬೈಲ್ನೊಂದಿಗೆ ಯಾರೊಂದಿಗೆ ಸಂಪರ್ಕದಲ್ಲಿದ್ದರು, ವಾಟ್ಸಾಪ್ ಮೂಲಕ ಸಂಪರ್ಕದಲ್ಲಿದ್ದರೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಯಿತು. ಪರಿಶೀಲನೆ ಬಳಿಕ ಮೊಬೈಲ್ಗಳನ್ನು ಅ ಧಿಕಾರಿಗಳಿಗೆ ಮರಳಿಸಲಾಯಿತು.
ಅಂಚೆ ಸಿಬಂದಿ ವಿಚಾರಣೆ
ಮೈಸೂರಿನ ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿಯಿಂದ ದೂರು ಅರ್ಜಿ ಹೋಗಿರುವ ಹಿನ್ನೆಲೆಯಲ್ಲಿ ಅಂಚೆ ಕಚೇರಿಯ ಸಿಬಂದಿಯನ್ನು ವಿಚಾರಣೆ ಮಾಡಲಾಯಿತು. ಮೈಸೂರಿನಿಂದ ಮಂಡ್ಯದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆಸಿಕೊಂಡ ಸಿಐಡಿ ಅ ಧಿಕಾರಿಗಳು ಕೆಲವು ತಾಸು ವಿಚಾರಣೆ ನಡೆಸಿದರು. ಅನಂತರ ಪತ್ರವೊಂದಕ್ಕೆ ಸಿಬಂದಿಯಿಂದ ಸಹಿ ಹಾಕಿಸಿಕೊಂಡು ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.