Chitradurga: ಜಲಮೂಲ ಸ್ವತ್ಛತೆ ಪಾಠ ಹೇಳಿ ಕೊಟ್ಟ ಕವಾಡಿಗರಹಟ್ಟಿ ದುರಂತ


Team Udayavani, Aug 11, 2023, 12:00 AM IST

water supply

ಚಿತ್ರದುರ್ಗ: ಕುಡಿಯುವ ನೀರಿನ ಮೂಲಗಳ ಬಗ್ಗೆ ಪ್ರತಿಯೊಬ್ಬರೂ ಸದಾ ಜಾಗೃತರಾಗಿರಬೇಕು, ಕಾಲ ಕಾಲಕ್ಕೆ ಸ್ವತ್ಛಗೊಳಿಸಬೇಕು, ಮನೆಗಳಲ್ಲಿ ನೀರು ಉಪಯೋಗಿಸುವಾ ಗಲೂ ಬಹಳ ಎಚ್ಚರಿಕೆ ವಹಿಸಬೇಕು ಎನ್ನುವ ಸ್ಪಷ್ಟ ಪಾಠ ಹೇಳಿ ಕೊಟ್ಟ ಪ್ರಕರಣ ಚಿತ್ರದುರ್ಗದ ಕವಾಡಿಗರಹಟ್ಟಿ ಕಲುಷಿತ ನೀರಿನ ದುರಂತ.

ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿದ್ದು, ಬರೋಬ್ಬರಿ 214 ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಮೃತಪಟ್ಟವರಲ್ಲಿ ಇಬ್ಬರ ಮರಣೋತ್ತರ ಪರೀಕ್ಷೆ ವರದಿ ಹಾಗೂ ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಅನೇಕರ ವರದಿಗಳನ್ನು ಆರೋಗ್ಯ ಇಲಾಖೆ ಪರಿಶೀಲಿಸಿದೆ. ಮೂವರ ವರದಿಯಲ್ಲಿ ಕಾಲರಾ ಹರಡುವ ಸೂಕ್ಷ್ಮಾಣು ಪತ್ತೆಯಾಗಿದೆ. ಜು.30 ಹಾಗೂ 31ರಂದು ಕವಾಡಿಗರಹಟ್ಟಿ ದಲಿತ ಕಾಲನಿಯ ನಾಲ್ಕು ಬೀದಿಗಳಲ್ಲಿ ಸರಬರಾಜಾದ ನೀರಿನಿಂದ ಈ ದುರಂತ ಸಂಭವಿಸಿದೆ. ಆರಂಭದ ನಾಲ್ಕು ದಿನ ಇದೇ ನಾಲ್ಕು ಬೀದಿಯ ನಿವಾಸಿಗಳೇ ಆಸ್ಪತ್ರೆಗೆ ದಾಖ ಲಾಗುತ್ತಿದ್ದರು. ಆದರೆ ಆ.6ರ ಅನಂತರ ಪಕ್ಕದ ಬೀದಿಗಳಲ್ಲೂ ವಾಂತಿ-ಭೇದಿ ಲಕ್ಷಣ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ವಾಂತಿ-ಭೇದಿ ಮೂಲ ಪತ್ತೆ ಮಾಡುವಲ್ಲಿ ಪರಿಣತಿ ಹೊಂದಿರುವ ಉಡುಪಿಯ

ಡಾ| ಪ್ರಶಾಂತ್‌ ಭಟ್‌ ಅವರಿಂದ ತನಿಖೆ ಮಾಡಿಸುತ್ತಿದೆ. ರಾಜ್ಯದ ವಿವಿಧ ವೈದ್ಯರ ತಂಡ ಅಧ್ಯಯನ ನಡೆಸುತ್ತಿದೆ. ಕವಾಡಿಗರಹಟ್ಟಿಯ ನೀರಿನ ಮೂಲ, ವಾಂತಿ-ಭೇದಿಗೆ ನೀರು ಕಾರಣವೇ ಅಥವಾ ಬೇರೆ ಯಾವುದಾದರೂ ಪದಾರ್ಥ ಕಾರಣವೇ ಎನ್ನುವ ಎಲ್ಲ ಅಂಶಗಳ ಆಯಾಮದಲ್ಲೂ ತನಿಖೆ ನಡೆಯುತ್ತಿದ್ದು, ವರದಿ ಬರಬೇಕಿದೆ.
ಸ್ಥಳೀಯರ ಅನುಮಾನವೇ ಬೇರೆ: ಈ ಪ್ರಕರಣದಲ್ಲಿ ಕವಾಡಿಗರಹಟ್ಟಿಯ ಪರಿಶಿಷ್ಟ ಜಾತಿಯ ಕಾಲನಿಯ ಜನರಲ್ಲಿ ಬೇರೆಯದ್ದೇ ಅನುಮಾನ ಮೂಡಿದೆ. ಈ ಗ್ರಾಮದಲ್ಲಿ ಸವರ್ಣೀಯ ಜಾತಿಗೆ ಸೇರಿದ ಯುವತಿಯನ್ನು ದಲಿತ ಯುವಕ ಕರೆದೊಯ್ದು ಮದುವೆಯಾಗಿದ್ದ. ಈ ದ್ವೇಷಕ್ಕೆ ವಿಷ ಬೆರೆಸಲಾಗಿದೆ ಎಂದು ಬಲವಾಗಿ ಆರೋಪಿ ಸಲಾಗುತ್ತಿದೆ. ಆದರೆ ಇದಕ್ಕೆ ಪೂರಕ ಸಾಕ್ಷಾÂಧಾರ ಅಥವಾ ನೀರಿನ ಪರೀಕ್ಷೆಯಲ್ಲಿ ಅಂತಹ ವಿಷಕಾರಿ ಅಂಶಗಳು ಪತ್ತೆಯಾಗದಿರುವುದು ಸಮಾಧಾನಕರ ಸಂಗತಿ. ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣ ಇಲಾಖೆಯಿಂದ ಮಾಡಿದ ನೀರಿನ ಪರೀಕ್ಷೆಯಲ್ಲಿ ಕಾಲರಾ ಅಂಶ ಮಾತ್ರ ಪತ್ತೆಯಾಗಿದೆ. ಜತೆಗೆ ಈ ನೀರು ಕುಡಿಯಲು ಯೋಗ್ಯವಾಗಿಲ್ಲ. ಕಲುಷಿತವಾಗಿದೆ ಎನ್ನುವ ವರದಿ ಲಭ್ಯವಾಗಿದೆ.

ಇನ್ನು ಪೊಲೀಸ್‌ ಇಲಾಖೆ ವಿಷಕಾರಿ ಅಂಶ ಬೆರೆತಿರಬ ಹುದೇ ಎನ್ನುವ ಅನುಮಾನದಲ್ಲಿ ನೀರು, ಮೃತರ ಮಲದ ಮಾದರಿಗಳನ್ನು ಎಫ್‌ಎಸ್‌ಎಲ್‌ ಪ್ರಯೋಗಾಲ ಯಕ್ಕೆ ರವಾನೆ ಮಾಡಿತ್ತು. ಈ ವರದಿ ಕೂಡ ಬಹಿರಂ ಗವಾಗಿದ್ದು, ನೀರಿನಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್‌ ತಿಳಿಸಿದ್ದಾರೆ.

ನೀರಿನ ಟ್ಯಾಂಕ್‌-ಪೈಪ್‌ಲೈನ್‌ ಸ್ವತ್ಛತೆಗೆ ಸೂಚನೆ
ಕವಾಡಿಗರಹಟ್ಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಇಡೀ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಎಲ್ಲ ಕುಡಿಯುವ ನೀರಿನ ಮೂಲಗಳನ್ನು ಸ್ವತ್ಛಗೊಳಿಸಬೇಕು, ಪೈಪ್‌ಲೈನ್‌ ಮಾರ್ಗವನ್ನು ಪರಿಶೀಲಿಸಿ ಸರಿಪಡಿಸಬೇಕು. ನಿಯಮಿತವಾಗಿ ನೀರಿನ ಟ್ಯಾಂಕ್‌ಗಳನ್ನು ಸ್ವತ್ಛಗೊಳಿಸಲು ಪ್ರತ್ಯೇಕ ಏಜೆನ್ಸಿ ನೇಮಿಸಿ ಸೂಕ್ತ ದಾಖಲೆ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ನೀಡಿದ್ದಾರೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.