CCB ಗೇ “ಬಿಟ್‌’ ಉರುಳು!

- ಬಿಟ್‌ಕಾಯಿನ್‌ ಹಗರಣ: ಸಿಸಿಬಿ ವಿರುದ್ಧವೇ ಎಸ್‌ ಐಟಿ ಎಫ್ಐಆರ್‌

Team Udayavani, Aug 12, 2023, 6:31 AM IST

bit coin

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್‌ ಹಗರಣವು ಹೊಸ ತಿರುವು ಪಡೆದಿದ್ದು, ಈ ಹಿಂದೆ ತನಿಖೆ ನಡೆಸಿದ್ದ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ತನಿಖಾಧಿಕಾರಿಗಳೇ ಸಾಕ್ಷ್ಯ ನಾಶ ಮಾಡಿರುವುದು ವಿಶೇಷ ತನಿಖಾ ದಳ (ಎಸ್‌ಐಟಿ)ದ ತನಿಖೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ತನಿಖಾಧಿಕಾರಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಅಧಿಕಾರಿಗಳಿಗೆ ಎಸ್‌ಐಟಿ ವಿಚಾರಣೆ ಭೀತಿ ಎದುರಾಗಿದೆ.

ಹಗರಣದಲ್ಲಿ ಸಿಸಿಬಿ ತನಿಖಾಧಿಕಾರಿಗಳು ಇಲ್ಲದಿದ್ದ ಕಡತಗಳನ್ನು ಸೃಷ್ಟಿಸಿ ಸಾಕ್ಷ್ಯಾಧಾರ ತಿರುಚುವ, ಸಾಕ್ಷ್ಯ ನಾಶಪಡಿಸುವ ಮೂಲಕ ಅಪರಾಧಿಕ ದುರುಪಯೋಗ, ಅವುಗಳ ಸಾಕ್ಷಿಗಳ ಮೌಲ್ಯವನ್ನು ಅಪಮೌಲ್ಯಗೊಳಿಸಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್‌)ದ ವರದಿಯಿಂದ ಬಹಿರಂಗಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಸಿಬಿ ಕೈಗೆತ್ತಿಕೊಂಡ ಬಳಿಕವೇ ಸಾಕ್ಷ್ಯಗಳನ್ನು ತಿರುಚಿರುವುದು ಗೊತ್ತಾಗಿದೆ.

ಎಫ್ಐಆರ್‌ನಲ್ಲಿ ಏನಿದೆ?
ಎಸ್‌ಐಟಿ ತನಿಖಾ ತಂಡದ ಅಧಿಕಾರಿ ಹಾಗೂ ಸಿಐಡಿ ಡಿವೈಎಸ್‌ಪಿ ಕೆ. ರವಿಶಂಕರ್‌ ನೀಡಿರುವ ದೂರಿನ ಆಧಾರದ ಮೇಲೆ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸಿಸಿಬಿ ತನಿಖಾಧಿಕಾರಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಹಿಂದಿನ ಸಿಸಿಬಿ ತನಿಖಾಧಿಕಾರಿಗಳು ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಎಲೆಕ್ಟ್ರಾನಿಕ್‌ ಉಪಕರಣಗಳಾದ ಮೊಬೈಲ್‌, ಲ್ಯಾಪ್‌ಟಾಪ್‌, ಕಂಪ್ಯೂಟರ್‌ಗಳು, ಹಾರ್ಡ್‌ಡಿಸ್ಕ್ಗಳು, ಪೆನ್‌ ಡ್ರೈವ್‌ ಮತ್ತಿತರ ವಸ್ತುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದರು. ಜು. 19ರಂದು ಎಫ್ಎಸ್‌ಎಲ್‌ ನೀಡಿದ ವರದಿಯನ್ನು ಎಸ್‌ಐಟಿ ತಂಡ ಪರಿಶೀಲಿಸಿತ್ತು.

2020ರ ನ. 9ರಂದು ವಶಪಡಿಸಿಕೊಂಡಿದ್ದ ಎರಡು ಪೆನ್‌ಡ್ರೈವ್‌ಗಳನ್ನು 2020 ನ. 11ರಂದು ಮಿರರ್‌ ಇಮೇಜ್‌ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಅಮಾನತುಪಡಿಸಿರುವ ಮೂಲ ಆರ್ಟಿಕಲ್‌ನಲ್ಲಿಯೇ ಹೆಚ್ಚುವರಿಯಾಗಿ ಕಡತಗಳು ಸೃಷ್ಟಿಯಾಗಿರುವುದು ಪತ್ತೆಯಾಗಿದೆ. ಒಂದು ಹಾರ್ಡ್‌ ಡಿಸ್ಕ್ ಮತ್ತು ಒಂದು ಆ್ಯಪಲ್‌ ಮ್ಯಾಕ್‌ಬುಕ್‌ಗಳನ್ನು 2020ರ ನ. 17ರಂದು ಜಪ್ತಿ ಮಾಡಿ 2020ರ ನ. 22ರಿಂದ ಡಿ. 11ರ ನಡುವೆ ಮಿರರ್‌ ಇಮೇಜ್‌ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಆದರೆ 2020ರ ನ. 18ರಿಂದ ನ. 21ರ ನಡುವೆ ಮೂಲ ಆರ್ಟಿಕಲ್‌ನಲ್ಲಿಯೇ ಹೆಚ್ಚುವರಿಯಾಗಿ ಕಡತ ಸೃಷ್ಟಿಯಾಗಿರುವ ಅಂಶ ಎಫ್ಎಸ್‌ಎಲ್‌ ವರದಿಯಿಂದ ತಿಳಿದುಬಂದಿದೆ.

ಈ ಅಪರಾಧಿಕ ಕೃತ್ಯಗಳು 2020ರ ನ. 9ರಿಂದ 2020ರ ಡಿ. 16ರ ನಡುವೆ ಬೆಂಗಳೂರಿನ ಸಿಸಿಬಿ ಕಚೇರಿ ಹಾಗೂ ಇತರೆಡೆಗಳಲ್ಲಿ ನಡೆದಿರುವುದು ದಾಖಲಾತಿಗಳ ಪರಿಶೀಲನೆಯಿಂದ ತಿಳಿದುಬಂದಿದೆ. ಈ ರೀತಿಯಾಗಿ ಅಮಾನತುಪಡಿಸಿದ ದಿನಾಂಕ ಹಾಗೂ ಸಮಯದ ಅನಂತರ ಹಿಂದಿನ ಸಿಸಿಬಿ ತನಿಖಾಧಿಕಾರಿಗಳು, ಇತರ ಪೊಲೀಸ್‌ ಅಧಿಕಾರಿಗಳು ಮತ್ತು ಇತರರು ಒಳಸಂಚು ನಡೆಸಿ, ಯಾವುದೋ ದುರುದ್ದೇಶದಿಂದ ಕಾನೂನುಬದ್ಧವಾಗಿ ವಶಪಡಿಸಿಕೊಂಡು ತಮ್ಮ ಸುಪರ್ದಿಯಲ್ಲಿದ್ದ ಡಿಜಿಟಲ್‌ ಉಪಕರಣಗಳಲ್ಲಿ ಅಮಾನತುಪಡಿಸಿದ್ದ ಸಮಯದಲ್ಲಿ ಇಲ್ಲದೆ ಇದ್ದ ಕಡತಗಳನ್ನು ಸೃಷ್ಟಿಸಿ ಸಾಕ್ಷ್ಯಾಧಾರಗಳನ್ನು ತಿರುಚುವ, ಸಾಕ್ಷ್ಯ ನಾಶಪಡಿಸುವುದರ ಮೂಲಕ ಅಪರಾಧಿಕ ದುರುಪಯೋಗ ಹಾಗೂ ಅವುಗಳ ಸಾಕ್ಷಿಗಳ ಮೌಲ್ಯವನ್ನು ಅಪಮೌಲ್ಯಗೊಳಿಸಿದ ಅಪರಾದ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಅಪರಾಧ ಎಸಗಿರುವ ಸಿಸಿಬಿ ಹಿಂದಿನ ತನಿಖಾಧಿಕಾರಿಗಳು ಹಾಗೂ ಇತರ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಎಫ್ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ.

ಮುಂದೇನು?
2020ರಲ್ಲಿ ಬಿಟ್‌ಕಾಯಿನ್‌ ತನಿಖೆ ನಡೆಸಿದ ಸಿಸಿಬಿ ತನಿಖಾಧಿಕಾರಿಗಳು, ಯಾವ ಹಿರಿಯ ಐಪಿಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆದಿದೆ, ಬಿಟ್‌ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಕೊಟ್ಟ ಹೇಳಿಕೆಗೂ ಸಿಸಿಬಿ ಸೃಷ್ಟಿಸಿರುವ ಕಡತಗಳಿಗೆ ಲಿಂಕ್‌ ಇದೆಯೇ, ಸಿಸಿಬಿ ತನಿಖಾಧಿಕಾರಿಗಳು ಯಾರ ಪ್ರಭಾವಕ್ಕೆ ಒಳಗಾಗಿ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕುತ್ತಿದೆ. ಎಫ್ಎಸ್‌ಎಲ್‌ ವರದಿ ಕಂಡು ದಂಗಾದ ಎಸ್‌ಐಟಿ ಅಧಿಕಾರಿಗಳು ಈಗ ಬಿಟ್‌ಕಾಯಿನ್‌ ಹಗರಣ ಬೆಳಕಿಗೆ ಬಂದ ಬಳಿಕ ನಡೆದ ತನಿಖೆಗಳ ಬಗ್ಗೆ ಸಮಗ್ರ ದಾಖಲೆ ಕಲೆ ಹಾಕುವಲ್ಲಿ ನಿರತರಾಗಿದ್ದಾರೆ. ಶೀಘ್ರದಲ್ಲೇ ಸಂಬಂಧಪಟ್ಟ ಸಿಸಿಬಿ ಅಧಿಕಾರಿಗಳಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.