london ಸಾರೀ ವಾಕಥಾನ್‌ ನಲ್ಲಿ ಭಾರತೀಯ ಉಡುಗೆಯ ಮೆರುಗು: ದೇಸೀ ಸೀರೆಯಲ್ಲಿ ನೀರೆಯರ ಸೊಬಗು


Team Udayavani, Aug 12, 2023, 3:12 PM IST

ಸಾರೀ ವಾಕಥಾನ್‌ ನಲ್ಲಿ ಭಾರತೀಯ ಉಡುಗೆಯ ಮೆರುಗು: ದೇಸೀ ಸೀರೆಯಲ್ಲಿ ನೀರೆಯರ ಸೊಬಗು

ಭಾರತದ ವಿಧವಿಧದ ಸೀರೆಗಳನ್ನುಟ್ಟ ಭಾರತೀಯ ಮಹಿಳೆಯರು ಲಂಡನ್‌ ನ ಟ್ರಾಫಾಲ್ಗರ್‌ ಸ್ಕ್ವೇರ್‌ ನಲ್ಲಿ ಹೆಜ್ಜೆ ಹಾಕಿ ಆಕರ್ಷಿಸಿ, ಸಂಭ್ರಮಿಸಿದ್ದರು. ಕೈಮಗ್ಗ ದಿನಾಚರಣೆಯ ಅಂಗವಾಗಿ ಬ್ರಿಟಿಷ್‌ ವುಮೆನ್‌ ಇನ್‌ ಸಾರೀಸ್‌ ಸಂಸ್ಥೆಯು “ಸಾರೀ ವಾಕಥಾನ್‌’ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

1905ರ ಆಗಸ್ಟ್‌ 7ರಂದು ಕಲ್ಕತ್ತಾ (ಇಂದಿನ ಕೊಲ್ಕತ್ತಾ) ಪುರಸಭೆಯಲ್ಲಿ ಪ್ರಾರಂಭವಾದ ಸ್ವದೇಶಿ ಚಳುವಳಿಯನ್ನು ಭಾರತದಲ್ಲಿ ಪ್ರತೀ ವರ್ಷವೂ ರಾಷ್ಟ್ರೀಯ ಕೈಮಗ್ಗ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನಾಚರಣೆಯ ಅಂಗವಾಗಿ ಬ್ರಿಟನ್‌ ನಲ್ಲಿ ನೆಲೆಸಿರುವ ಭಾರತದ 21 ರಾಜ್ಯಗಳ ಸುಮಾರು 500ಕ್ಕೂ ಹೆಚ್ಚು ಭಾರತೀಯ ನಾರಿಯರು ತಮ್ಮ ತಮ್ಮ ರಾಜ್ಯದ ವಿಶಿಷ್ಟ ಕೈಮಗ್ಗಗಳ ಸೀರೆಗಳಲ್ಲಿ, ಲಂಡನ್‌ನ ಪ್ರಮುಖ ಸ್ಥಳಗಳಾದ ಟ್ರಾಫಾಲ್ಗರ್‌ ಸ್ಕ್ವೇರ್‌, 10 ಡೌನಿಂಗ್‌ ಸ್ಟ್ರೀಟ್‌, ಪಾರ್ಲಿಮೆಂಟ್‌ ಸ್ಕ್ವೇರ್‌ ಗಳಲ್ಲಿ ಈ  “ಸೀರೆ ನಡಿಗೆ’ ಕಾರ್ಯಕ್ರಮದಲ್ಲಿ  ಪಾಲ್ಗೊಂಡರು. ಭಾರತದ ವಿವಿಧ ಪ್ರಾಂತಗಳ ಪ್ರಾದೇಶಿಕ ಕೈಮಗ್ಗಗಳ ಕಲೆಗಾರಿಕೆಯನ್ನು ಪ್ರತಿನಿಧಿಸುವ, ಪ್ರದರ್ಶಿಸುವ “ಸಾರೀ ವಾಕಾಥಾನ್‌” ಅಂದರೆ “ಸೀರೆ ನಡಿಗೆ’ಯು ಎಲ್ಲರ ಮನ ಸೆಳೆದಿತ್ತು. ಪುಟ್ಟ ಪುಟ್ಟ ಮನೆಗಳಲ್ಲಿ ಚಿಕ್ಕಚಿಕ್ಕ ಚರಕದಿಂದ ಹೊರಹೊಮ್ಮಿದ ನೂಲು, ಕೈಮಗ್ಗಗಳ ರಂಗು ರಂಗುರಂಗಿನ ಸೀರೆ ನೀರೆಯರ ಅಂದ ಹೆಚ್ಚಿಸಿತ್ತು.

ನಮ್ಮ ದೇಶದ ವಿವಿಧ, ವಿಭಿನ್ನ, ವಿಶಿಷ್ಟ ನೇಯ್ಗೆಯನ್ನು ವಿಶ್ವದಾದ್ಯಂತ ಪ್ರಚುರ ಪಡಿಸಿ ನಮ್ಮ ದೇಶದ ಪರಂಪರೆಯನ್ನು ಪ್ರಪಂಚಕ್ಕೆ ತೋರಿಸುವ ಉದ್ದೇಶದಿಂದ ಲಂಡನ್‌ನಲ್ಲಿ ನೆಲೆಸಿರುವ ಡಾ| ದೀಪ್ತಿ ಜೈನ್‌ “ಬ್ರಿಟಿಷ್‌ ವುಮೆನ್‌ ಇನ್‌ ಸಾರೀಸ್‌’  (ಬಿ.ಡಬ್ಲ್ಯು.ಐ.ಎಸ್‌) ಎಂಬ ಸೇವಾ ಸಂಸ್ಥೆಯನ್ನು ಹುಟ್ಟು ಹಾಕಿದರು. ಆಧುನಿಕ ಸ್ತ್ರೀ ಇಂದು ಸೀರೆಯಲ್ಲಿ ಮರೆಯಾಗಿ ಉಳಿಯದೆ ವಿವಿಧ ರಂಗಗಳಲ್ಲಿ ತನ್ನ ಬಾಹುಗಳನ್ನು ಚಾಚಿ ಯಶಸ್ಸನ್ನು ಕಾಣುತ್ತಿದ್ದಾಳೆ. ದೇಶದ ಸಂಸ್ಕೃತಿಯಲ್ಲಿ ಮಿಳಿತವಾಗಿರುವ ಸೀರೆ, ಸ್ತ್ರೀ ಶಕ್ತಿ ಮತ್ತು ನೇಯ್ಗೆ ಕೈಗಾರಿಕೆಯ ಅರಿವು ಮೂಡಿಸಲು ಈ ಬ್ರಿಟಿಷ್‌ ವುಮೆನ್‌ ಇನ್‌ ಸಾರೀಸ್‌ ಸಂಸ್ಥೆಯು  “ಇನ್‌ಸ್ಪೈರಿಂಗ್‌  ಇಂಡಿಯನ್‌ ವುಮೆನ್‌’ ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತದ ವಿವಿಧ ರಾಜ್ಯಗಳ 58 ಸಂಯೋಜಕಿಯರ ಬೆಂಬಲದೊಂದಿಗೆ “ಸೀರೆ ನಡಿಗೆ’ ಎಂಬ ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ್ದು ವಿಶೇಷ.

ಈ ಸೀರೆ ನಡಿಗೆ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಸುಮಾರು 40 ಕನ್ನಡದ ಕಣ್ಮಣಿಯರು ವಯಸ್ಸಿನ ಭೇದವಿಲ್ಲದೆ ನಾಡಿನ ವಿವಿಧ ವಿಭಿನ್ನ ಕೈಮಗ್ಗಗಳಲ್ಲಿ ತಯಾರಾದ ಸೀರೆಗಳನ್ನು  ಉಟ್ಟುಕೊಂಡು ನೋಡುಗರ ಮನಸೆಳೆದರು.

ಒಂದೊಂದು ಸೀರೆಯ ನೆರಿಗೆಯಲ್ಲಿ, ಸೆರಗಿನಲ್ಲಿ ಒಂದೊಂದು ಕಥನವಿದೆ, ಇತಿಹಾಸವಿದೆ, ಬೆವರಿದೆ, ಹೋರಾಟವಿದೆ ಮತ್ತು ವಾತ್ಸಲ್ಯವೂ ಇದೆ. ಇತಿಹಾಸದ ಪುಟ ಕೆದಕಿದರೆ ನಮ್ಮ ಉತ್ತರ ಕರ್ನಾಟಕದ ಇಳಕಲ್‌ ಸೀರೆಯ ನೇಯ್ಗೆ 8ನೇ ಶತಮಾನದಿಂದ ಪ್ರಾರಂಭವಾಗಿ ಇಂದಿಗೂ ತನ್ನ ವೈಭವವನ್ನು ಉಳಿಸಿಕೊಂಡಿದೆ. ಹಾಗೆಯೇ ಗುಳೆದಗುಡ್ಡ ಖಣದ ಸೀರೆ, ಶಹಾಪುರ ಸೀರೆ, ಮೈಸೂರು ರೇಶ್ಮೆ ಸೀರೆ, ಉಡುಪಿ ಸೀರೆ, ಕಸೂತಿ ಸೀರೆ, ಗೋಮಿ ತೆನಿ ಸೀರೆ, ಮೊಳಕಾಲ್ಮೂರು ಸೀರೆ, ಲಂಬಾಣಿ ಸೀರೆಗಳು ಶತಮಾನಗಳಷ್ಟು ಪ್ರಾಚೀನವಾದರೂ ಏನೆಲ್ಲ ಏರಿಳಿತ ಕಂಡರೂ ಜಗ್ಗದೇ ಕುಗ್ಗದೇ ತನ್ನ ವೈಶಿಷ್ಟ್ಯವನ್ನು ಕಳೆದುಕೊಳ್ಳದೇ ಸಮಯದ ಜತೆಗೆ ಹೆಜ್ಜೆ ಹಾಕುತ್ತಿವೆ. ನಮ್ಮ ನಾಡಿನ ವಿವಿಧ ಕೈಮಗ್ಗಗಳ ಸೀರೆಗಳ ಅರಿವು ಮೂಡಿಸಲು ನಮ್ಮ ದೇಶದ ನೇಕಾರರನ್ನು ಪ್ರೋತ್ಸಾಹಿಸಲು ಅಂದು ಕನ್ನಡತಿಯರು ಭೌಗೋಳಿಕ ಸೂಚಕ ಹೊಂದಿರುವ ಇಂತಹ ಸೀರೆಗಳನ್ನು ಉಟ್ಟು ಹೆಮ್ಮೆಯಿಂದ ಉಬ್ಬಿದರು. ದಾರಿಯುದ್ದಕ್ಕೂ ನೆರೆದಿದ್ದ ಪ್ರೇಕ್ಷಕರು ಈ ನಡಿಗೆಗೆ ಉತ್ಸಾಹದಿಂದ, ಉಲ್ಲಾಸದಿಂದ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಸಂಯೋಜಕಿಯರಾದ ಸರಿತಾ ರಾಹುಲ್‌, ನಿವೇದಿತಾ ದೇವರಾಜ್‌, ಮೀರಾ ಜಗದೀಶ್‌ ಹಾಗೂ ಕನ್ಯಾ ಕೆ.ಟಿ.ಯವರು 40 ಕನ್ನಡತಿಯರನ್ನು ಒಟ್ಟುಗೂಡಿಸಿ ಕರ್ನಾಟಕವನ್ನು ಪ್ರತಿನಿಧಿಸಿ ಈ  “ಸೀರೆ ನಡಿಗೆ’ಯನ್ನು ಯಶಸ್ವಿಗೊಳಿಸಿದರು.  ಅಮೂಲ್ಯ ಹೆಚ್‌.ಸಿ., ನಿಖೀತಾ ಭಟ್‌ ಮತ್ತು ಅಶ್ವಿ‌ನಿ ಮಠದ್‌ ಸಹಕರಿಸಿದರು.

ಲಂಡನ್‌ನ ಪಾರ್ಲಿಮೆಂಟ್‌ ಸ್ಕ್ವೇರ್‌ನಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆಯ ಬಳಿ ಭಾರತದ ರಾಷ್ಟ್ರಗೀತೆ ಜನಗಣ ಮನ ಪ್ರತಿಧ್ವನಿಸಿತು. ಅನಂತರ ಕನ್ನಡತಿಯರು “ಬಾರಿಸು ಕನ್ನಡ ಡಿಂಡಿಮವ’ ಹಾಡಿಗೆ ಹೆಜ್ಜೆ ಹಾಕಿ ಕರ್ನಾಟಕದ ಕಂಪನ್ನು ವಿದೇಶದಲ್ಲಿಯೂ ಪಸರಿಸಿದರು. ಈ ಸೀರೆನಡಿಗೆ ಭಾರತದ ಹೈಕಮಿಷನ್‌ನ ನಂದಿತಸಾಹು ಸಾಕ್ಷಿಯಾದರು. ಭಾರತದ ಮೂಲೆ ಮೂಲೆಗಳಿಂದ ಬಂದು ಈ ಆಂಗ್ಲ ದೇಶದಲ್ಲಿ ನೆಲೆಸಿರುವ ನಮ್ಮ ನೀರೆಯರು ತಮ್ಮ ತವರು ದೇಶದ ನೇಕಾರರ ಕೈಮಗ್ಗಗಳಲ್ಲಿ ಅರಳಿದ ಸುಂದರ ಸೊಬಗಿನ ಸೀರೆಗಳನ್ನು ಉಟ್ಟು ಲಂಡನ್‌ನ ದಾರಿಗಳಲ್ಲಿ  ಹೆಜ್ಜೆ ಹಾಕುತ್ತ ಇಂದಿನ ಪೀಳಿಗೆಗೆ ಮತ್ತು ಅಲ್ಲಿಯ ನಾಗರಿಕರಿಗೆ ನೇಕಾರರ ಜೀವನದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.