Team India ಇಬ್ಬರು ಸ್ಟಾರ್ ಬ್ಯಾಟರ್ ಗಳು ಇನ್ನು ಬೌಲಿಂಗ್ ಮಾಡುತ್ತಾರೆ…: ಕೋಚ್ ಮಾಂಬ್ರೆ
Team Udayavani, Aug 12, 2023, 6:03 PM IST
ಫ್ಲೋರಿಡಾ: ಯುವ ಪ್ರತಿಭೆಗಳಿಗೆ ಮಣೆ ಹಾಕುತ್ತಿರುವ ಭಾರತ ತಂಡವು ಅರೆಕಾಲಿಕ ಬೌಲಿಂಗ್ ಮಾಡುವ ಬ್ಯಾಟರ್ ಗಳನ್ನು ಎದುರು ನೋಡುತ್ತಿದೆ.ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರ ಬ್ಯಾಟಿಂಗ್ ಪರಾಕ್ರಮ ಎಲ್ಲರಿಗೂ ತಿಳಿದಿದೆ. ಇವರಿಬ್ಬರೂ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಅಮೋಘ ಪದಾರ್ಪಣೆ ಮಾಡಿದ್ದಾರೆ. ಜೈಸ್ವಾಲ್ ಅಗ್ರ ಕ್ರಮಾಂಕದಲ್ಲಿ ಪ್ರಭಾವ ಬೀರಿದರೆ, ತಿಲಕ್ ವರ್ಮಾ ಮಧ್ಯಮ ಕ್ರಮಾಂಕದಲ್ಲಿ ಟಿ 20 ಸರಣಿಯಲ್ಲಿ ಸಾಕಷ್ಟು ಭರವಸೆ ತೋರಿಸಿದ್ದಾರೆ. ಆದರೆ ಇದೀಗ ಅವರಿಂದ ಬೌಲಿಂಗ್ ಮಾಡಿಸಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಯೋಚಿಸುತ್ತಿದೆ.
ಸ್ಪಿನ್ ಬೌಲಿಂಗ್ ಮಾಡುವ ಅರೆಕಾಲಿಕ ಬೌಲರ್ ಗಳಾಗಿ ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಬಳಸಲು ಯೋಚಿಸಲಾಗುತ್ತಿದೆ. ಅವರ ಬೌಲಿಂಗ್ ಸಾಮರ್ಥ್ಯದ ಮೇಲೆ ತಂಡವು ಕೆಲಸ ಮಾಡುತ್ತಿದೆ. ಶೀಘ್ರದಲ್ಲೇ ಅವರು ತಲಾ ಒಂದು ಓವರ್ ಬೌಲಿಂಗ್ ಮಾಡುತ್ತಾರೆ ಎಂದು ಭಾರತೀಯ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿದ್ದಾರೆ.
“ತಿಲಕ್ ಮತ್ತು ಯಶಸ್ವಿ ಅಂಡರ್ 19 ದಿನಗಳಿಂದಲೂ ಬೌಲಿಂಗ್ ಮಾಡುವುದನ್ನು ನಾನು ನೋಡಿದ್ದೇನೆ. ಅವರು ಉತ್ತಮ ಬೌಲರ್ ಗಳಾಗಲು ಸಮರ್ಥರಾಗಿದ್ದಾರೆ. ಅವರು ಈ ಮಟ್ಟದಲ್ಲಿ ಕೆಲಸ ಮಾಡಬಹುದು. ಈ ರೀತಿಯ ಆಯ್ಕೆಗಳು ಸಿಕ್ಕಾಗ ನಮಗೆ ಅನುಕೂಲವಾಗುತ್ತದೆ. ಅವರು ಶೀಘ್ರದಲ್ಲೇ ಬೌಲ್ ಮಾಡುವುದನ್ನು ನಾವು ನೋಡುತ್ತೇವೆ, ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ. ಇದು ಸಮಯ ತೆಗೆದುಕೊಳ್ಳುತ್ತದೆ. ಶೀಘ್ರದಲ್ಲೇ, ಅವರು ಕನಿಷ್ಠ ಒಂದು ಓವರ್ ಬೌಲಿಂಗ್ ಮಾಡುವುದನ್ನು ನಾವು ನೋಡುತ್ತೇವೆ” ಎಂದು ಪಾರಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದನ್ನೂ ಓದಿ:Misbehaving: ಗೋವಾದ ಪಬ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣ: ಡಿಐಜಿ ಸಸ್ಪೆಂಡ್
ಅಮೆರಿಕದ ಫ್ಲೋರಿಡಾದಲ್ಲಿ ಶನಿವಾರ ನಡೆಯಲಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಭಾರತ ಕಳೆದ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿತ್ತು. ಏಳು ವಿಕೆಟ್ಗಳಿಂದ ಗೆದ್ದು, ಸರಣಿಯನ್ನು 2-1 ನೊಂದಿಗೆ ಜೀವಂತವಾಗಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.