Bit: ಬಿಟ್‌ ಹಗರಣದಲ್ಲಿ “ದಿಲ್ಲಿ ಲಿಂಕ್‌”!- ಊಹೆಗೂ ನಿಲುಕದ ವ್ಯಕ್ತಿಗಳ, ಪ್ರಭಾವಿಗಳ ಹೆಸರು?

- ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಎಸ್‌ಐಟಿ

Team Udayavani, Aug 13, 2023, 6:48 AM IST

bit coin

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಬಹುಕೋಟಿ ಮೊತ್ತದ ಬಿಟ್‌ ಕಾಯಿನ್‌ ಹಗರಣದಲ್ಲಿ “ದಿಲ್ಲಿ ಲಿಂಕ್‌’ ಬಗ್ಗೆಯೂ ರಾಜ್ಯ ಪೊಲೀಸರು ಈಗ ಶಂಕೆ ವ್ಯಕ್ತಪಡಿಸಲಾರಂಭಿಸಿದ್ದು, ಈ ಪ್ರಕರಣ ಮತ್ತೂಮ್ಮೆ ರಾಜಕೀಯ ಹಂಗಾಮಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಳಕಿಗೆ ಬಂದಿದ್ದ ಬಿಟ್‌ ಕಾಯಿನ್‌ ಹಗರಣ ಭಾರೀ ಸದ್ದು ಮಾಡಿತ್ತು. ತಾನು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಮರು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌, ಚುನಾವಣಾ ಪೂರ್ವ ವಾಗ್ಧಾನದ ಪ್ರಕಾರ ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದೆ. ಎಸ್‌ಐಟಿಯ ಪ್ರಾಥಮಿಕ ತನಿಖೆಯ ಪ್ರಕಾರವೇ ಈ ಹಗರಣದ ಹೆಜ್ಜೆ ಗುರುತುಗಳು ದಿಲ್ಲಿಯವರೆಗೂ ಇದೆ ಎನ್ನಲಾಗುತ್ತಿದೆ. ಜತೆಗೆ ಸ್ಥಳೀಯ ಪ್ರಭಾವಿಗಳ ಸಂಪರ್ಕವನ್ನೂ ಶಂಕಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ಪ್ರತಿ ನಿಲುವು ತೆಗೆದುಕೊಳ್ಳುವಾಗಲೂ ತನಿಖಾ ಸಂಸ್ಥೆ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

ಪ್ರಭಾವಿಗಳ ಹೆಸರು:

ಈ ಪ್ರಕರಣದಲ್ಲಿ ಊಹೆಗೂ ನಿಲುಕದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಹೆಸರು ತಳುಕು ಹಾಕಿಕೊಂಡಿದ್ದು, ಕರ್ನಾಟಕ ಪೊಲೀಸರಿಗೆ ಸಿಕ್ಕಿ ಬಿದ್ದ ಸಂದರ್ಭದಲ್ಲಿ ಶ್ರೀಕಿ ನೀಡಿದ ಪ್ರಮಾಣೀಕೃತ ಹೇಳಿಕೆ ಈ ಹಗರಣದ ಕಾಲು ಭಾಗಕ್ಕೂ ಸಮವಲ್ಲ. ಹೀಗಾಗಿ ಪ್ರಕರಣದ ಸ್ವರೂಪ ಹಾಗೂ ವ್ಯಾಪ್ತಿ ವಿಸ್ತಾರವಾಗಿದ್ದು, ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗಳು ಈಗಲೂ ರಾಜ್ಯದ ನಡೆಯ ಮೇಲೆ ಹದ್ದಿನ ಕಣ್ಣಿಟ್ಟಿವೆ ಎಂದು ಗೃಹ ಇಲಾಖೆ ಮೂಲಗಳು ಅಭಿಪ್ರಾಯಪಟ್ಟಿವೆ. ಹೀಗಾಗಿ ಹಳೆಯ ವಿಚಾರಗಳನ್ನು ಮಾತ್ರ ಸೋರಿಕೆ ಮಾಡುತ್ತಿರುವ ಎಸ್‌ಐಟಿ ಹೊಸ ವಿಚಾರಗಳ ಗುಟ್ಟು ರಟ್ಟಾಗದಂತೆ ನೋಡಿಕೊಳ್ಳುತ್ತಿದೆ. ಒಂದು ಮೂಲದ ಪ್ರಕಾರ, ತನಿಖೆಯ ಪ್ರತಿ ಅಂಶಗಳೂ “ಮುಖ್ಯ’ ವ್ಯಕ್ತಿಗಳ ಅವಗಾಹನೆಯಲ್ಲಿದೆ. ಹೀಗಾಗಿ ದಿಲ್ಲಿ ಲಿಂಕ್‌ ಬಗ್ಗೆ ಜಾಗರೂಕ ಹೆಜ್ಜೆ ಇಡಲಾಗುತ್ತಿದೆ.

ಬಿಟ್‌ ಕಾಯಿನ್‌ ಹಗರಣದ ತನಿಖೆ ಹೇಗೆ ಅಂತ್ಯ ಕಾಣುತ್ತದೆ ಎಂದು ಈಗಲೇ ಹೇಳುವುದಕ್ಕೆ ಸಾಧ್ಯವಿಲ್ಲವಾದರೂ ಡೇಟಾ ಭದ್ರತೆ ಹಾಗೂ ಸೈಬರ್‌  ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಒಂದಿಷ್ಟು ಮಹತ್ವದ ಹೆಜ್ಜೆಗಳನ್ನು ಇಡುವುದಕ್ಕೆ ಈ ಪ್ರಕರಣ ಪ್ರೇರಣೆ ನೀಡಿದೆ. ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಐಟಿ ಕಾಯ್ದೆಯ ಹಿಂದೆಯೂ ಡೇಟಾ ಪ್ರೊಟೆಕ್ಷನ್‌ ಮಹತ್ವದ ಪಾತ್ರ ವಹಿಸಿದ್ದು, ಗೃಹ ಇಲಾಖೆಯ ಉನ್ನತ ಮೂಲಗಳ ಪ್ರಕಾರ ಶ್ರೀಕಿಯಂಥ ಸೈಬರ್‌ ವಂಚಕರೇ ಡೇಟಾ ಸಂರಕ್ಷಣೆಗಾಗಿ ಕಾಯ್ದೆ ಹಾಗೂ ನೀತಿ ರೂಪುಗೊಳ್ಳುವುದಕ್ಕೆ ಪ್ರೇರಣೆಯಾಗುತ್ತಿರುವುದು ವಿಪರ್ಯಾಸ.

ಆಕ್ಷೇಪ:

ಬಿಟ್‌ ಕಾಯಿನ್‌ ಪ್ರಕರಣದ ಬಳಿಕ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದಲ್ಲಿನ ಸೈಬರ್‌ ಸುರಕ್ಷತೆ ಬಗ್ಗೆ ಆಕ್ಷೇಪ ವ್ಯಕ್ತವಾಗಿವೆ. ಹೀಗಾಗಿ ದತ್ತಾಂಶ ಭದ್ರತಾ ಕಾಯ್ದೆಗಳ ಬಗ್ಗೆ ಪದೇ ಪದೆ ಚರ್ಚೆ ಹಾಗೂ ತಿದ್ದುಪಡಿಗಳು ನಡೆಯುತ್ತಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ಜತೆಗೆ ಡಿಜಿಟಲ್‌ ಆರ್ಥಿಕತೆ ಪ್ರಗತಿ ಕಾಣುತ್ತಿದೆ. ಆದಾಗಿಯೂ ಸೈಬರ್‌ ವಂಚನೆ ಹಾಗೂ ಡೇಟಾ ಸುರಕ್ಷತೆ ಸಮರ್ಪಕವಾಗಿಲ್ಲ ಎಂದು ಕಾರ್ಪೊರೇಟ್‌ ವಲಯಗಳಲ್ಲಿ ಆಕ್ಷೇಪ ವ್ಯಕ್ತವಾಗುತ್ತಿರುವುದರಿಂದ ಈಗ ಸೈಬರ್‌ ನೀತಿ ಹಾಗೂ ಐಟಿ ಆ್ಯಕ್ಟ್ ಜಾರಿಗೆ ಪ್ರಯತ್ನ ಆರಂಭವಾಗಿದೆ.

ಗೃಹ ಇಲಾಖೆ ಮೂಲಗಳ ಪ್ರಕಾರ, ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸೈಬರ್‌ ನೀತಿಯ ಸ್ವರೂಪ ಭವಿಷ್ಯದಲ್ಲಿ  ತಾಂತ್ರಿಕ ಜಾಗೃತಿಯ ಸ್ವರೂಪದಲ್ಲಿ ಮಾತ್ರ ನಿಲ್ಲುವುದಿಲ್ಲ. ಐಟಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ, ಎಥಿಕಲ್‌ ಹ್ಯಾಕಿಂಗ್‌, ಕೃತಕ ಬುದ್ಧಿಮತ್ತೆಯ ಸದ್ಬಳಕೆ ಮತ್ತು ನಿಯಂತ್ರಣ ಸೇರಿದಂತೆ ಹಲವು ಮಜಲುಗಳನ್ನು ಹೊಂದಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸರ್ಕಾರಿ ಸ್ವಾಮ್ಯದ ದತ್ತಾಂಶ ರಕ್ಷಣೆ, ಹೊಸದಾಗಿ ಪ್ರಾರಂಭವಾಗುವ ತಂತ್ರಾಂಶ ರಕ್ಷಣೆ, ಆನ್‌ಲೈನ್‌ ಬ್ಯಾಂಕಿಂಗ್‌, ತಾಂತ್ರಿಕ ಸಾಕ್ಷರತೆ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಹಾಗೂ ತರಬೇತಿ ನೀಡಲು ಕಾಯ್ದೆಯಲ್ಲಿ ನಿರ್ಧರಿಸಲಾಗಿದೆ. ದತ್ತಾಂಶ ಖಾಸಗೀಕರಣದ ಬಗ್ಗೆ ರಹಸ್ಯ ಸಮೀಕ್ಷೆಗಳು ಕೂಡ ಭವಿಷ್ಯದಲ್ಲಿ ನಡೆಯಲಿದೆ.

ರಾಘವೇಂದ್ರ ಭಟ್‌

 

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.