Maharashtra ಏಕನಾಥ್ ಶಿಂಧೆ ಬದಲಿಗೆ ಅಜಿತ್ ಪವಾರ್ ಸಿಎಂ ಆಗಬಹುದು:ವಾಡೆಟ್ಟಿವಾರ್
ಶಿಂಧೆ ಅವರ ಆರೋಗ್ಯ ಚೆನ್ನಾಗಿಲ್ಲ..
Team Udayavani, Aug 14, 2023, 4:28 PM IST
ಮುಂಬಯಿ: ಎನ್ಸಿಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಏಕನಾಥ್ ಶಿಂಧೆ ಅವರ ಬದಲಿಗೆ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ವಿಜಯ್ ವಾಡೆಟ್ಟಿವಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಗಡ್ಚಿರೋಲಿ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಡೆಟ್ಟಿವಾರ್, ಶಿಂಧೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮತ್ತು ನಂತರ “ಆರೋಗ್ಯದ ಆಧಾರದ ಮೇಲೆ” ಅವರ ಹುದ್ದೆ ಬದಲಾಯಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.
ಶಿಂಧೆ ಅವರ ಆರೋಗ್ಯ ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಹೇಳಿಕೆ ನೀಡಿದೆ. ಅವರು ಎರಡು ತಿಂಗಳ ಕಾಲ ಆಸ್ಪತ್ರೆಗೆ ದಾಖಲಾಗಬಹುದು ಮತ್ತು ವೈದ್ಯಕೀಯ ಆಧಾರದ ಮೇಲೆ ಅವರನ್ನು ಬದಲಾಯಿಸಬಹುದು ಎಂದು ನಾನು ಭಯಪಡುತ್ತೇನೆ. ವೈದ್ಯಕೀಯ ಕಾರಣಗಳಿಗಾಗಿ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ನಡೆಯುತ್ತಿದೆಯೇ ಎಂದು ಮಹಾರಾಷ್ಟ್ರದ ಜನರು ಕೇಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದರು.
ಗಮನಾರ್ಹವಾಗಿ, ಶಿವಸೇನಾ (ಯುಬಿಟಿ) ಮುಖವಾಣಿ ಸಾಮ್ನಾ ಕೂಡ ಶಿಂಧೆ ಅವರ “ಅನಾರೋಗ್ಯ” ಕುರಿತು ಶಾಸಕ ಶಿರ್ಸಾತ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಶಿಂಧೆ ಅವರು 24 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ, ಆದರೆ ಇದು ರಾಜ್ಯದಲ್ಲಿ ಎಲ್ಲಿಯೂ ಪ್ರತಿಫಲಿಸುವುದಿಲ್ಲ. ಯಾವಾಗಲಾದರೂ ತಮ್ಮ ಹುದ್ದೆಯನ್ನು ಕಳೆದುಕೊಳ್ಳುವ ಭಯದಿಂದ ಅವರು ನಿದ್ದೆ ಕಳೆದುಕೊಂಡಿದ್ದರೆ, ಅವರು ಹಗಲು-ಹಗಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗದು ಎಂದು ಸಾಮ್ನಾ ಸೋಮವಾರ ತನ್ನ ಸಂಪಾದಕೀಯದಲ್ಲಿ ಪ್ರಕಟಿಸಿದೆ.
“ಶಿರ್ಸಾತ್ ಅವರ ಹೇಳಿಕೆಗಳು ನಿಜವಾಗಿದ್ದರೆ, ಶಿಂಧೆ ಅವರನ್ನು ಐಸಿಯುಗೆ ಸೇರಿಸಬೇಕು ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಅಥವಾ ಅಜಿತ್ ಪವಾರ್ ಅವರನ್ನು ಭೇಟಿಯಾಗದಂತೆ ದೂರ ಇಡಬೇಕು. ಶಿಂಧೆ ಅವರನ್ನು ಮುಂಬೈ ಅಥವಾ ಥಾಣೆಯಲ್ಲಿರುವ ಒಳ್ಳೆಯ ಆಸ್ಪತ್ರೆಗೆ ದಾಖಲಿಸಬೇಕು,” ಎಂದು ಸಂಪಾದಕೀಯ ವ್ಯಂಗ್ಯವಾಗಿ ಬರೆದಿದೆ.
ಔರಂಗಾಬಾದ್ ನ ಶಿವಸೇನಾ ಸಂಸದ(ಶಿಂಧೆ ಬಣ) ಸಂಜಯ್ ಶಿರ್ಸಾತ್ ಅವರು ಸಿಎಂ ಅರೋಗ್ಯ ಸರಿಯಿಲ್ಲ ಎಂದು ಹೇಳಿಕೆ ನೀಡಿದ್ದರು. ಹೇಳಿಕೆಯನ್ನು ಸಿಎಂ ಕಚೇರಿ ಅಲ್ಲಗಳೆದಿದೆ. ಅವರಿಗೆ ಕಡಿಮೆ ರಕ್ತದೊತ್ತಡ ಇದೆ. 24*7 ಕೆಲಸ ಮಾಡುವವರು ಎಂದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಹೇಳಿದೆ.
ಕುತೂಹಲಕಾರಿಯಾಗಿ, ಶಿವಸೇನೆ-ಬಿಜೆಪಿ ಸರಕಾರದ ಭಾಗವಾಗಿರುವ ಅಜಿತ್ ಪವಾರ್ ಅವರನ್ನು ಆಗಸ್ಟ್ 10 ರ ಸುಮಾರಿಗೆ ಮುಖ್ಯಮಂತ್ರಿಯಾಗಿ ನೇಮಿಸಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್ ಕಳೆದ ತಿಂಗಳು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.