Religious tourist destination ; ಮುರ್ಡೇಶ್ವರದಲ್ಲಿ ಅಗತ್ಯ ಮೂಲ ಸೌಕರ್ಯ ಮರೀಚಿಕೆ


Team Udayavani, Aug 14, 2023, 7:22 PM IST

1-fdsadd

ಭಟ್ಕಳ: ಪುರಾಣ ಪ್ರಸಿದ್ಧ ಮುರ್ಡೇಶ್ವರ ಧಾರ್ಮಿಕ ಕೇಂದ್ರವಾಗಿ ಬೆಳೆದಿದ್ದಲ್ಲದೇ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿಯೂ ಬೆಳೆದಿದೆಯಾದರೂ ಅಗತ್ಯ ಮೂಲ ಸೌಕರ್ಯ ಮಾತ್ರ ಮರೀಚಿಕೆಯಾಗಿದೆ ಎಂದು ಮುರ್ಡೇಶ್ವರ ನಾಗರೀಕ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್. ಎಸ್. ಕಾಮತ್ ಬೇಸರ ವ್ಯಕ್ತಪಡಿಸಿದ್ದಾರೆ.

ಮುರ್ಡೇಶ್ವರವು ಅನೇಕ ವರ್ಷಗಳಿಂದ ಪ್ರವಾಸಿ ಕೇಂದ್ರವಾಗಿ, ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿ ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ದೇಶ ವಿದೇಶಿಗರು ಆಗಮಿಸುತ್ತಿದ್ದರೂ ಕೂಡಾ ಮೂರ್ಡೇಶ್ವದ ಮೂಲ ಸೌಕರ್ಯ ಅಭಿವೃದ್ಧಿಗೆ ಯಾವ ಇಲಾಖೆಯೂ ಕೂಡಾ ಮನಸ್ಸು ಮಾಡಿಲ್ಲ ಎಂದು ಹೇಳಿದ ಅವರು ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿರುವ ಮುರ್ಡೇಶ್ವರಕ್ಕೆ ಬರುವ ಭಕ್ತರು, ಪ್ರವಾಸಿಗರು ಸರಕಾರದ ಕ್ರಮವನ್ನು ದೂಷಣೆ ಮಾಡುವಂತಾಗಿದೆ.

ಮುರ್ಡೇಶ್ವರದ ಮೂಲಭೂತ ಸೌಕರ್ಯಗಳನ್ನು ವೃದ್ಧಿಸಲು ಕಳೆದ 5-6 ವರ್ಷಗಳಿಂದಲೂ ಪ್ರವಾಸೋದ್ಯಮ ಇಲಾಖೆ, ಕಂದಾಯ ಇಲಾಖೆ, ಬಂದರು ಇಲಾಖೆ, ಪೋಲೀಸ್ ಇಲಾಖೆಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕೂಡಾ ಯಾವುದೇ ಇಲಾಖೆ ಗಮನ ಹರಿಸದೇ ಇರುವುದು ಸರಕಾರದ ನಿರ್ಲಕ್ಷಕ್ಕೆ ಉದಾಹರಣೆಯಾಗಿದೆ. ಸ್ಥಳೀಯವಾಗಿ ದೊರೆಯುವ ಅಗತ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸಬಹುದಾಗಿದ್ದರೂ ಕೂಡಾ ಸ್ಥಳೀಯ ಅಧಿಕಾರಿಗಳೂ ನಿರಾಸಕ್ತಿ ತೋರುತ್ತಿರುವುದು ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಇಲಾಖೆಗಳನ್ನೇ ದೂರುವುದಕ್ಕೆ ಕಾರಣವಾಗಿದೆ.

ಮುರ್ಡೇಶ್ವರದಲ್ಲಿ ಸ್ಥಳೀಯಾಡಳಿತವಾಗಲೀ, ಜಿಲ್ಲಾಡಳಿತವಾಗಲೀ ಮೂಲ ಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಯೋಗ್ಯ ಚರಂಡಿ ವ್ಯವಸ್ಥೆ, ಸೂಕ್ತ ರಸ್ತೆ ವ್ಯವಸ್ಥೆ, ದಾರಿ ದೀಪದ ವ್ಯವಸ್ಥೆ, ವಾಹನ ಪಾರ್ಕಿಂಗ್‌ಗೆ ಜಾಗಾದ ವ್ಯವಸ್ಥೆ, ಪ್ರವಾಸಿಗರಿಗೆ ನೆಮ್ಮದಿಯಿಂದ ಬಂದು ಹೋಗುವುದಕ್ಕೆ ಭದ್ರತಾ ವ್ಯವಸ್ಥೆಯನ್ನು ಕಲ್ಪಸಬೇಕಾಗಿದ್ದರೂ ಸಹ ತಮಗೆ ಸಂಬಂಧವೇ ಇಲ್ಲದಂತೆ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿರುವುದು ಮಾತ್ರ ವಿಪರ್ಯಾಸವಾಗಿದೆ. ಇದು ಆಡಳಿತ ಯಂತ್ರ ಸ್ಪಷ್ಟವಾಗಿ ಮುರ್ಡೇಶ್ವರವನ್ನು ನಿರ್ಲಕ್ಷ ಮಾಡಿರುವುದು ಕಂಡು ಬರುತ್ತದೆ.

ಮುರ್ಡೇಶ್ವರ ಅಭಿವೃದ್ಧಿಯ ಅಂಗವಾಗಿ 2016 ರಲ್ಲಿ ರಸ್ತೆ ಕಾಮಗಾರಿ ಆರಂಭವಾಯಿತಾದರೂ ಕೂಡಾ ಇನ್ನೂ ಕೂಡಾ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ, ಸರಿಯಾದ ಚರಂಡಿ ವ್ಯವಸ್ಥೆ, ದೀಪ ವ್ಯವಸ್ಥೆಯನ್ನೇ ಮಾಡಿಲ್ಲ, ರಾಷ್ಟ್ರೀಯ ಹೆದ್ದಾರಿಯಲ್ಲಿನ ಮುಖ್ಯ ದ್ವಾರದಿಂದ ದೇವಸ್ಥಾನದ ತನಕದ ರಸ್ತೆಯನ್ನು ಮೇಲ್ದರ್ಜೆಗೇರಿಸುವುದು, ಚರಂಡಿ, ಬೀದಿ ದೀಪ ಅಳವಡಿಕೆಯನ್ನು ಕೂಡಾ ಮಾಡದೇ ಅಪೂರ್ಣಗೊಳಿಸಲಾಗಿದ್ದು ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿರುವುದು ಮಾತ್ರ ನಾಗರೀಕರಿಗೆ ತೀವ್ರ ಬೇಸರ ತರಿಸಿದೆ ಎಂದೂ ಅವರು ಹೇಳಿದ್ದಾರೆ.

ಮುರ್ಡೇಶ್ವರಕ್ಕೆ ಪ್ರತಿ ತಿಂಗಳೂ ಲಕ್ಷಾಂತರ ಜನರು ಭೇಟಿ ನೀಡಿದರೂ ಕನಿಷ್ಟ ಸ್ವಚ್ಚತೆಗೆ ಯಾವುದೇ ಆದ್ಯತೆಯನ್ನು ಸ್ಥಳೀಯಾಡಳಿತ ನೀಡುತ್ತಿಲ್ಲ. ಅತ್ಯಂತ ಸುಂದರ ಕಡಲ ತೀರವೂ ಕೂಡಾ ತ್ಯಾಜ್ಯಗಳ ಗೂಡಾಗಿದ್ದು ನಿರ್ವಹಣೆಯಿಲ್ಲದೇ ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಬರುವ ಜನತೆ ನೋಡಿ ಅಣುಕಿಸುವಂತಾಗಿದೆ.

ಶ್ರೀ ಕ್ಷೇತ್ರಕ್ಕೆ ಬರುವ ಪ್ರವಾಸಿಗರು, ದಿನದ 24ಗಂಟೆಯು, ಸಂಚಾರಿ ನಿಯಮಗಳನ್ನು ಮೀರಿ, ಬೇಕಾ ಬಿಟ್ಟಿಯಾಗಿ, ರಸ್ತೆಯುದ್ದಕ್ಕೂ, ತಮ್ಮ ವಾಹನಗಳನ್ನು ನಿಲ್ಲಿಸುವುದು ನಿಲ್ಲಿಸುವುದು ಅನಿವಾರ್ಯವಾಗಿದೆ. ಸೂಕ್ತ ಪಾರ್ಕಿಂಗ್ ಜಾಗಾ ವದಗಿಸಲು ಸ್ಥಳೀಯಾಡಳಿತ ವಿಫಲವಾಗಿರುವುದೇ ಇದಕ್ಕೆ ಕಾರಣವಾಗಿದ್ದು ಇನ್ನಾದರೂ ಸ್ಥಳೀಯಾಡಳಿತ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಬೇಕಾಗಿದೆ. ಕೆಲವೊಮ್ಮೆ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಬಸ್ಸುಗಳು ಬರುವುದಕ್ಕೆ ಮತ್ತು ಹೋಗುವುದಕ್ಕೆ ಕೂಡಾ ತೊಂದರೆಯಾಗುತ್ತಿದ್ದು ಪೊಲೀಸ್ ಇಲಾಖೆ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುತ್ತ ಗಮನ ಹರಿಸಬೇಕಾಗಿದೆ. ಒಟ್ಟಾರೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸೊಧ್ಯಮ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಮೂಲಭೂತ ಸೌಕರ್ಯ ವೃದ್ಧಿಸಲು ಕ್ರಮ ಕೈಗೊಳ್ಳಬೇಕಾಗಿದೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.