KSCA Maharaja Trophy: ಪದಾರ್ಪಣೆ ಪಂದ್ಯದಲ್ಲಿ ಶಿವಮೊಗ್ಗ ತಂಡಕ್ಕೆ ಜಯ

ಮಂಗಳೂರು ಡ್ರ್ಯಾಗನ್ಸ್‌  ವಿರುದ್ಧ 9 ರನ್‌ ಜಯ

Team Udayavani, Aug 14, 2023, 11:14 PM IST

KSCA Maharaja Trophy: ಪದಾರ್ಪಣೆ ಪಂದ್ಯದಲ್ಲಿ ಶಿವಮೊಗ್ಗ ತಂಡಕ್ಕೆ ಜಯ

ಬೆಂಗಳೂರು: ಇದೇ ಮೊದಲ ಬಾರಿ ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿಯಲ್ಲಿ ಕಣಕ್ಕಿಳಿದ ಶಿವಮೊಗ್ಗ ಲಯನ್ಸ್‌- ಮಂಗ ಳೂರು ಡ್ರ್ಯಾಗನ್ಸ್‌ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದವು. ಇಬ್ಬರ ಪೈಕಿ ಗೆದ್ದಿದ್ದು ಶಿವಮೊಗ್ಗ ಲಯನ್ಸ್‌ ತಂಡ.

ಮೊದಲು ಬ್ಯಾಟಿಂಗ್‌ ಮಾಡಿದ ಶಿವಮೊಗ್ಗ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದು ಕೊಂಡು 176 ರನ್‌ ಗಳಿಸಿತು. ಇದಕ್ಕೆ ಉತ್ತರ ನೀಡಲು ಹೊರಟ ಮಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಶಿವಮೊಗ್ಗ 9 ರನ್‌ಗಳ ಜಯ ಸಾಧಿಸಿತು.

ಶಿವಮೊಗ್ಗ ಪರ ನಾಯಕ ಶ್ರೇಯಸ್‌ ಗೋಪಾಲ್‌ ಉತ್ತಮ ಬ್ಯಾಟಿಂಗ್‌ ನಡೆಸಿದರು. ಅಭಿನವ್‌ ಮನೋಹರ್‌ ಸ್ಫೋಟಕ ಆಟವಾಡಿದರು. ಶ್ರೇಯಸ್‌ 32 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್‌ ಸಹಿತ 46 ರನ್‌ ಗಳಿಸಿದರು. ಮನೋಹರ್‌ 25 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್‌ ಸಿಡಿಸಿದರು. ಇಬ್ಬರ ಪೈಕಿ ಮನೋಹರ್‌ ಆಟ ಬಿರುಸಾಗಿತ್ತು. ಇದು ತಂಡದ ಮೊತ್ತವನ್ನು ಏರಿಸಲು ನೆರವಾಯಿತು. ರೋಹನ್‌ ಕದಮ್‌, ನಿಹಾಲ್‌ ಉಲ್ಲಾಳ್‌ ಕ್ರಮವಾಗಿ 27, 28 ರನ್‌ ಗಳಿಸಿದರು.

ಮಂಗಳೂರು ತಂಡದ ಮಧ್ಯಮ ವೇಗದ ಬೌಲರ್‌ ಎಂ.ಜಿ.ನವೀನ್‌ ಶಿವಮೊಗ್ಗವನ್ನು ನಿಯಂತ್ರಿಸಲು ಬಲವಾದ ಯತ್ನ ನಡೆಸಿದರು. ಕೇವಲ 19 ರನ್ನಿಗೆ 4 ವಿಕೆಟ್‌ ಪಡೆದ ಅವರು, ಕೊನೆಯ ಓವರ್‌ನಲ್ಲಿ 2 ವಿಕೆಟ್‌ ಕಿತ್ತರು. ಉಳಿದ ಬೌಲರ್‌ಗಳಿಗೆ ಯಶಸ್ಸು ಸಿಗಲಿಲ್ಲ.

ಇದಕ್ಕೆ ಉತ್ತರಿಸಲು ಹೊರಟ ಮಂಗಳೂರು ಪರ ಕೆ.ಸಿದ್ಧಾರ್ಥ 46, ಅನಿರುದ್ಧ ಜೋಷಿ 50 ರನ್‌ ಗಳಿಸಿದರು. ಇಬ್ಬರೂ ಉತ್ತಮವಾಗಿಯೇ ಆಡಿದರೂ, ಉಳಿದವರು ಆ ಮಟ್ಟದಲ್ಲಿ ಮಿಂಚಲಿಲ್ಲ. ಶಿವಮೊಗ್ಗ ಬೌಲಿಂಗ್‌ನಲ್ಲಿ ಸಂಘಟಿತ ಯಶಸ್ಸು ಸಾಧಿಸಿತು.

ಹುಬ್ಬಳ್ಳಿಗೆ 7 ವಿಕೆಟ್‌ ಜಯ
ಸೋಮವಾರ ನಡೆದ 2ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್‌ 7 ವಿಕೆಟ್‌ಗಳಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಗುಲ್ಬರ್ಗ 19.3 ಓವರ್‌ಗಳಲ್ಲಿ 138 ರನ್ನಿಗೆ ಆಲೌಟಾಯಿತು. ಹುಬ್ಬಳ್ಳಿ ಪರ ಮನ್ವಂತ್‌ ಕುಮಾರ್‌ (3), ಕೆ. ವಿದ್ವತ್‌ (2), ಲಾವಿಶ್‌ ಕೌಶಲ್‌ (2) ಉತ್ತಮ ಬೌಲಿಂಗ್‌ ನಡೆಸಿದರು. ಇದನ್ನು ಬೆನ್ನತ್ತಿದ ಹುಬ್ಬಳ್ಳಿ 15.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು 141 ರನ್‌ ಗಳಿಸಿತು. ತಂಡದ ಪರ ಲವ್ನಿàತ್‌ ಸಿಸೋಡಿಯ 61, ಕೃಷ್ಣನ್‌ ಶ್ರೀಜಿತ್‌ 47 ರನ್‌ ಸಿಡಿಸಿದರು.

 

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.