Akshay Kumar: ಸ್ವಾತಂತ್ರ್ಯ ದಿನದಂದೇ ಭಾರತದ ಪೌರತ್ವವನ್ನು ಮರಳಿ ಪಡೆದ ಅಕ್ಷಯ್‌ ಕುಮಾರ್


Team Udayavani, Aug 15, 2023, 1:10 PM IST

Akshay Kumar: ಸ್ವಾತಂತ್ರ್ಯ ದಿನದಂದೇ ಭಾರತದ ಪೌರತ್ವವನ್ನು ಮರಳಿ ಪಡೆದ ಅಕ್ಷಯ್‌ ಕುಮಾರ್

ಮುಂಬಯಿ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಕೆನಡಾ ಪೌರತ್ವವನ್ನು ತ್ಯಜಿಸಿ ಭಾರತೀಯ ಪೌರತ್ವ ಹಾಗೂ ಪಾಸ್‌ ಪೋರ್ಟ್‌ನ್ನು ಮರಳಿ ಪಡೆದುಕೊಂಡಿದ್ದಾರೆ.

ಕೆನಡಾ ಪೌರತ್ವ ಸಲ್ಲಿಸಿದ್ದು ಯಾಕೆ?:

ಬಾಲಿವುಡ್‌ ನಲ್ಲಿ ನಟಿಸಿ, ಭಾರತೀಯರ ಅಪಾರ ಅಭಿಮಾನವನ್ನು ಗಳಿಸಿರುವ ನಟ ಅಕ್ಷಯ್‌ ಕುಮಾರ್‌ ಕೆನಡಾ ದೇಶದ ಪೌರತ್ವವನ್ನು ಹೊಂದಿದ್ದರು. 90 ದಶಕದಲ್ಲಿ ಅವರ ಸಾಲು ಸಾಲ ಸಿನಿಮಾಗಳು ಸೋಲುತ್ತಿದ್ದವು. ಇದರಿಂದ ಮನನೊಂದಿದ್ದ ಅವರು ಬೇರೆ ಏನಾದರೂ ಕೆಲಸ ಮಾಡುವ ನಿಟ್ಟಿನಲ್ಲಿ ಅವರ ಸ್ನೇಹಿತರೊಬ್ಬರ ಸಲಹೆಯಂತೆ ಕೆನಡಾಕ್ಕೆ ತೆರಳಿದ್ದರು. ಆ ಬಳಿಕ ಅಲ್ಲಿನ ಪೌರತ್ವಕೆ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಅವರ ಒಂದೊಂದೇ ಸಿನಿಮಾಗಳು ಹಿಟ್ ಆಗುತ್ತಾ ಹೋಯಿತು.  ಆ ಕಾರಣದಿಂದ ಅವರು ಮತ್ತೆ ಭಾರತಕ್ಕೆ ಬಂದಿದ್ದರು. ಆದರೆ ಈ ವೇಳೆ ಅವರು ಪೌರತ್ವ ಹಾಗೂ ಪಾಸ್ ಪೋರ್ಟ್‌ ಎರಡನ್ನೂ ಬದಲಾಯಿಸಿಕೊಂಡಿರಲಿಲ್ಲ.

ವಿವಾದಕ್ಕೆ ಕಾರಣವಾಗಿದ್ದ ಸಂದರ್ಶನ: 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಸಂದರ್ಶನ ಮಾಡಿದ್ದರು. ಈ ವೇಳೆ ಅಕ್ಷಯ್‌ ಅವರ ಪೌರತ್ವದ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಇದಲ್ಲದೇ ಅನೇಕರು ಅಕ್ಷಯ್‌ ಅವರ ಭಾರತೀಯನಲ್ಲ ಎಂದು ಪ್ರಶ್ನೆ ಮಾಡಿದ್ದರು. ಈ ಕಾರಣದಿಂದ ಅಕ್ಷಯ್‌ ಕುಮಾರ್‌ 2019 ರಲ್ಲೇ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಅವರ ಪೌರತ್ವ ಹಾಗೂ ಪಾಸ್‌ ಪೋರ್ಟ್‌  ಪ್ರಕ್ರಿಯೆ ವಿಳಂಬವಾಗಿತ್ತು.

ದೇಶದ 77ನೇ ಸ್ವಾತಂತ್ರ್ಯ ದಿನದ ಶುಭ ಸಂದರ್ಭದಲ್ಲೇ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಹಾಗೂ ಪಾಸ್ ಪೋರ್ಟ್ ನ್ನು ಮರಳಿ ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಅಕ್ಷಯ್ ಅವರೇ ಹಂಚಿಕೊಂಡಿದ್ದಾರೆ. “ನನ್ನ ಹೃದಯ ಹಾಗೂ ಪೌರತ್ವ ಎರಡೂ ಹಿಂದೂಸ್ತಾನಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು ಜೈಹಿಂದ್” ಎಂದು ಬರೆದುಕೊಂಡು, ಫೋಟೋ ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕ್ಷಯ್‌ ಕೆನಡಾದ ಪೌರತ್ವ ವಿಚಾರವಾಗಿ ಸಂದರ್ಶನವೊಂದರಲ್ಲಿ“ಭಾರತವೇ ನನಗೆ ಸರ್ವಸ್ವ. ನಾನು ಗಳಿಸಿದ್ದೆಲ್ಲವೂ ಇಲ್ಲಿಂದ. ಮತ್ತು ನಾನು ಹಿಂತಿರುಗಲು ಅವಕಾಶವನ್ನು ಪಡೆದಿರುವುದು ನನ್ನ ಅದೃಷ್ಟ. ಜನರು ಏನನ್ನೂ ತಿಳಿಯದೆ ವಿಷಯಗಳನ್ನು ಹೇಳಿದಾಗ ಬೇಸರವಾಗುತ್ತದೆ” ಎಂದಿದ್ದರು.

ಸದ್ಯ ಅಕ್ಷಯ್‌ ಕುಮಾರ್‌ ಅವರ ʼಓಮೈಗಾಡ್-2”‌ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುವುದರ ಜೊತೆಗೆ ಪ್ರೇಕ್ಷಕರ ಮನಗೆದ್ದಿದೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.