Shivamogga; ಯತ್ನಾಳ್ ಅವರು ಬಸ್ ಸ್ಟ್ಯಾಂಡಲ್ಲಿ ಗಿಣಿ ಶಾಸ್ತ್ರ ಹೇಳಲಿ…: ಮಧು ಬಂಗಾರಪ್ಪ
Team Udayavani, Aug 15, 2023, 3:07 PM IST
ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರಿಗೆ ಈ ಬಸ್ ಸ್ಟ್ಯಾಂಡ್ ನಲ್ಲಿ ಜಾಗ ಖಾಲಿಯಿದೆ. ಅಲ್ಲಿ ಗಿಣಿ ಶಾಸ್ತ್ರ ಹೇಳಲಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಸಾಕ್ಷ್ಯಾಧಾರ ನೀಡಲಿ. ಸುಮ್ಮನೆ ಆರೋಪ ಮಾಡುವುದು ಬೇಡ. ಸಿಎಂ ಸಹ ಇದನ್ನೇ ಹೇಳಿದ್ದಾರೆ ಎಂದರು.
ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಾಗ ಆಸೆ ಹಾಗೂ ಕಾರ್ಯಕ್ರಮದ ನಿರೀಕ್ಷೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಶೀಘ್ರವಾಗಿ ಈಡೇರಿಸುತ್ತಿದ್ದೇವೆ. ಆಗ ಮಾತ್ರ ಜನರು ನಮ್ಮ ಮೇಲಿಟ್ಟಿರುವ ನಂಬಿಕೆಗೆ ಬೆಲೆ ಬರುತ್ತದೆ ಎಂದರು.
ಐದು ಗ್ಯಾರಂಟಿ ಪೈಕಿ ನನಗೆ ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮಿ ಯೋಜನೆ ಹೆಚ್ಚು ಹತ್ತಿರವಾಗಿದೆ. ಹಾಗೆಯೇ ಶಕ್ತಿ ಮತ್ತು ನಿರುದ್ಯೋಗ ಭತ್ಯೆ ಸಹ ಹೆಚ್ಚು ಅರ್ಥಪೂರ್ಣವಾಗಿದೆ ಎಂದರು.
ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಗಲಿದೆ. ಕೋರ್ಟ್ ವಿಚಾರ ಬಂದಾಗ ಅಧಿಕಾರಿಗಳು ನಿಭಾಯಿಸುತ್ತಾರೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭವಾಗಿದ್ದು ಸಭೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಮೊಟ್ಟೆ ಕಾರ್ಯಕ್ರಮಕ್ಕೆ ಚಾಲನೆ: ಇದೇ 18 ರಂದು ಮಂಡ್ಯದಲ್ಲಿ ವಾರಕ್ಕೆ ಎರಡು ಸಲ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಇದರಿಂದ 60 ಲಕ್ಷ ಮಕ್ಕಳಿಗೆ ಅನುಕೂಲ ಆಗಲಿದೆ ಎಂದು ಮಾಹಿತಿ ನೀಡಿದ ಸಚಿವರು, ದೇಶದಲ್ಲಿ ಮೊದಲ ಬಾರಿಗೆ 2 ನೇ ಸಲ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಅವರನ್ನು ಫೇಲ್ ಮಾಡಿದರೆ ಒಂದು ವರ್ಷ ಕಾಯಬೇಕು. ಹಾಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದರು.
ಪಠ್ಯ ಪುಸ್ತಕ ಬದಲಾಗಿದೆ. ಎನ್ ಇಪಿ ಬದಲು ಎಸ್ ಇಪಿ ಜಾರಿಗೊಳಿಸಲಾಗುತ್ತದೆ. ಪಠ್ಯ ಪುಸ್ತಕದಲ್ಲೂ ಕೆಲ ಬದಲಾವಣೆ ತರಬೇಕಿದೆ ಎಂದರು.
ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದೆ. ಇದನ್ನು ಶಿಕ್ಷಕರ ದಿನಾಚರಣೆ ದಿನ ರಿ ಲಾಂಚ್ ಮಾಡಲಾಗುವುದು. ಈಗಾಗಲೇ 3.40 ಕೋಟಿ ಜನ ಇದಕ್ಕೆ ಸದಸ್ಯರಾಗಿದ್ದಾರೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಲೈಬ್ರರಿಗೆ ಹೆಚ್ಚು ಒತ್ತು ನೀಡಲಾಗುವುದು. ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಚ್ಚಿನ ಬೇಡಿಕೆಯಿದ್ದು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಆರಂಭಿಸಲಾಗುವುದು. ಅನುದಾನ ಪಡೆಯದ 1600 ಶಾಲೆಗಳಿವೆ ಕೆಲವೊಂದು ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ ಎಂದರು.
ಲೋಡ್ ಶೆಡ್ಡಿಂಗ್ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ, ಅಘೋಷಿತ ವಿದ್ಯುತ್ ಕಡಿತದ ಬಗ್ಗೆ ಸಾಕಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಲ ವಿದ್ಯುತ್ ಕೇಂದ್ರಗಳಲ್ಲಿ ನೀರಿನ ಕೊರತೆ ಇದೆ. ಹಾಗಾಗಿ ಕೆಲವೆಡೆ ವಿದ್ಯುತ್ ಕಡಿತವಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.