RSS: ವಿಚ್ಛಿದ್ರಕಾರಿ ಶಕ್ತಿಗಳ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು: ಮೋಹನ್ ಭಾಗವತ್
Team Udayavani, Aug 16, 2023, 12:02 AM IST
ಬೆಂಗಳೂರು: ಜಗತ್ತನ್ನು ಜ್ಞಾನದ ಬೆಳಕಿನತ್ತ ಕೊಂಡೊಯ್ಯಲು ಸಮರ್ಥವಾಗಿರುವ ಭಾರತಕ್ಕೆ ಅಡ್ಡಿಯಾಗಿರುವ ವಿಚ್ಛಿದ್ರಕಾರಿ ಶಕ್ತಿಗಳಿಂದ ನಾವು ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಡಾ| ಮೋಹನ್ ಭಾಗವತ್ ಕರೆ ನೀಡಿದರು.
ಬೆಂಗಳೂರಿನ ಬಸವನಗುಡಿಯಲ್ಲಿ ರುವ ವಾಸವಿ ಸಭಾಂಗಣದಲ್ಲಿ ಸಮರ್ಥ ಭಾರತ ವತಿಯಿಂದ ಆಯೋಜಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತವನ್ನು ಸ್ವತಂತ್ರಗೊಳಿಸಲು ನಮ್ಮ ಪೂರ್ವಿಕರು 1857ರಿಂದಲೂ ಹೋರಾಡಿದ್ದಾರೆ. 90 ವರ್ಷಗಳ ಹೋರಾಟದ ಅನಂತರ 1947ರ ಆ. 15ರಂದು ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಎಂಬುದೊಂದು ನಿರಂತರ ಪ್ರಕ್ರಿಯೆ ಎಂದು ವ್ಯಾಖ್ಯಾನಿಸಿದರು.
ಭಾರತ ಎನ್ನುವ ಶಬ್ದದಲ್ಲಿರುವ ಭಾ ಅಕ್ಷರವು ಬೆಳಕನ್ನು ಸೂಚಿಸುತ್ತದೆ. ನಾವು ಸೂರ್ಯನನ್ನು ಆರಾಧಿಸುವವರಾದ್ದರಿಂದ ಇದನ್ನು ಭಾರತ ಎಂದು ಕರೆಯಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಸೂರ್ಯನ ಆರಾಧನೆ ಮಾಡುವುದು ಅತ್ಯಂತ ಅರ್ಥಪೂರ್ಣ ಆಚರಣೆ. ಜಗತ್ತನ್ನು ಬೆಳಗುವುದಕ್ಕಾಗಿ ಭಾರತವು ಸ್ವತಂತ್ರವಾಯಿತು. ಈ ದೇಶದಲ್ಲಿ ಹುಟ್ಟಿದ ಮಾನವರು ತಮ್ಮ ನಡಾವಳಿ ಮೂಲಕ ಇಡೀ ಜಗತ್ತಿನ ಸರ್ವ ಮಾನವರಿಗೂ ಶಿಕ್ಷಣವನ್ನು ನೀಡಬಲ್ಲರು. ಇದು ಸ್ವತಂತ್ರ ಶಬ್ದದ ನಿಜವಾದ ಅರ್ಥ. ಈ ನಿಜ ಅರ್ಥದಲ್ಲಿ ಎಲ್ಲರೂ ಬದುಕಬೇಕು ಎಂದರು.
ಆರೆಸ್ಸೆಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಉಪಸ್ಥಿತರಿದ್ದರು. ಯೋಗ ವಿಜ್ಞಾನಿ ಡಾ| ಎಸ್.ಎನ್. ಓಂಕಾರ್ ಅವರು ಸೂರ್ಯ ನಮಸ್ಕಾರದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.