ಶಿರಸಿ: ಪ್ರಾತಃ-ಸಂಧ್ಯಾಕಾಲದ ಪೂಜೆ-ಪಠಣದಿಂದ ಸಮೃದ್ಧಿ


Team Udayavani, Aug 16, 2023, 6:05 PM IST

ಶಿರಸಿ: ಪ್ರಾತಃ-ಸಂಧ್ಯಾಕಾಲದ ಪೂಜೆ-ಪಠಣದಿಂದ ಸಮೃದ್ಧಿ

ಶಿರಸಿ: ಪ್ರತಿಯೊಬ್ಬರು ದಿನವೂ ಸಂಧ್ಯಾ ಕಾಲದಲ್ಲಿ ಪೂಜೆ, ಸ್ತೋತ್ರ ಪಠಣ, ಪ್ರಾಣಾಯಾಮ, ಯೋಗಾಸನ ಮಾಡಬೇಕು. ಇದರಿಂದ ವ್ಯವಹಾರ, ಆರೋಗ್ಯ ಎಲ್ಲವೂ ಪ್ರಗತಿಯಾಗುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧಿಶರಾದ ಜಗದ್ಗುರು
ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು.

ಸ್ವರ್ಣವಲ್ಲೀಯಲ್ಲಿ ಚಾತುರ್ಮಾಸ್ಯ ವೃತಾಚರಣೆಯ ಹಿನ್ನೆಲೆಯಲ್ಲಿ ಚಿನ್ನಾಪುರ ಸೀಮೆಯ ಮೇಲ್ತರ್ಪು, ಕೆಳತರ್ಪಿನ ಶಿಷ್ಯ ಭಕ್ತರು ಸಲ್ಲಿಸಿದ ಗುರು ಸೇವೆ ಸ್ವೀಕರಿಸಿ ಆಶೀರ್ವಚನ ನುಡಿದರು.

ಸಂಧ್ಯಾ ಕಾಲದಲ್ಲಿ ದೇವರ ಪೂಜೆ, ಸ್ತೋತ್ರ ಪಠಣ, ಸಹಸ್ರನಾಮ, ಪ್ರಾಣಾಯಾಮ, ಯೋಗಾಸನ ಮಾಡದೇ ಇರುವದೇ ಬಹಳಷ್ಟು ಜನರ ಆರೋಗ್ಯ ಹಾಳಾಗಲು ಕಾರಣ. ಪ್ರತಿದಿನ ಮುಂಜಾನೆ ಮತ್ತು ಸಂದ್ಯಾಕಾಲದಲ್ಲಿ ಪ್ರಾಣಾಯಾಮ, ಆಸನ, ಪೂಜೆ ಮಾಡಬೇಕು ಎಂದರು.

ಸೂರ್ಯೋದಯ, ಸೂರ್ಯಾಸ್ತದ ಕಾಲವೇ ಸಂಧ್ಯಾ ಕಾಲಗಳು. ಇವು ದೇವರ ಪೂಜೆ, ಜಪ, ಅನುಷ್ಠಾನಕ್ಕೆ ಪ್ರಶಸ್ತವಾದ ಕಾಲ. ಈ ವೇಳೆಯಲ್ಲಿ ಯಾವುದೇ ಅನುಷ್ಠಾನ ಮಾಡಿದರೂ ಹೆಚ್ಚು ಫಲ. ಮನಸ್ಸು ದೇವರಲ್ಲಿ ಏಕಾಗೃತೆಗೊಳ್ಳುವುದು ಸಂಧ್ಯಾ ಕಾಲದಲ್ಲಿ ಹೆಚ್ಚು. ಒಂದೊಂದು ಕಾಲವು ಈ ದೇಹದ ಮೇಲೆ ಬೇರೆ ಬೇರೆ ಪರಿಣಾಮ ಉಂಟು ಮಾಡುತ್ತದೆ. ಅದು ಮನಸ್ಸಿನ ಪರಿವರ್ತನೆಗೂ ಕಾರಣವಾಗುತ್ತದೆ. ಸಂಧ್ಯಾ ಕಾಲದಲ್ಲಿ ಏಕಾಗೃತೆಗೆ ಅನುಕೂಲ ಇರುತ್ತದೆ. ಆದ್ದರಿಂದಲೇ ಸಂಧ್ಯಾ ವಂದನೆ ಎಂಬುದು ಬಂದಿದೆ ಎಂದು ವಿವರಿಸಿದರು.

ಬೆಳಗಿನ ಪೂಜೆ ಇಡೀ ದಿನದ ವ್ಯವಹಾರದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ನಮ್ಮ ಮನಸ್ಥಿತಿ ಉತ್ತಮವಾಗಿರುತ್ತದೆ. ವ್ಯವಹಾರ ಮಾಡಲು ಚುರುಕು ತನ ಬರುತ್ತದೆ. ನೀವು ಹೇಳುವಂತೆ  ಒಳ್ಳೆಯ ಮೂಡ್‌ ಬಂದಿರುತ್ತದೆ. ಹಗಲಿನ ಪ್ರಯೋಜನಕ್ಕಿಂತ ಅಮೂಲ್ಯ ಪ್ರಯೋಜನ ಸಂಧ್ಯಾ ಕಾಲದ ಅನುಷ್ಠಾನದಿಂದ ಆಗಲಿದೆ. ಉತ್ತಮವಾದ ನಿದ್ದೆ ಬರುತ್ತದೆ. ನಿದ್ದೆ ಸಮರ್ಪಕವಾಗಿ ಬಾರದೇ ಇದ್ದರೆ ಮಾನಸಿಕ, ದೈಹಿಕ ಸಮಸ್ಯೆಗಳು ಆಗುತ್ತದೆ. ನಿದ್ರಾ ಹೀನತೆ ತಪ್ಪಲು ಸಂಜೆಯ ಸಂಧ್ಯಾ ಕಾಲದ ಜಪಾನುಷ್ಠಾನ ನೆರವಾಗುತ್ತದೆ. ಇದು ನಿದ್ದೆ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಪ್ರತಿಯೊಂದು ಜೀವಿಗಳ ಮನಸ್ಸೂ ಗಾಢ ನಿದ್ರೆಯಲ್ಲಿ ಪರಮಾತ್ಮನ ಸಾನ್ನಿಧ್ಯಕ್ಕೆ ಹೋಗುತ್ತವೆ. ಗಾಢ ನಿದ್ದೆಗೆ ಸಂಧ್ಯಾ ಕಾಲದ ದೇವರ ಧ್ಯಾನ ನೆರವಾಗುತ್ತದೆ. ದಿನದ 24 ಗಂಟೆಯಲ್ಲಿ 6 ಗಂಟೆ ನಿದ್ದೆ ಬಂದರೆ ಸಾಕು. ಅದರಲ್ಲಿ 2 ತಾಸಾದರೂ ಗಾಢವಾದ ನಿದ್ದೆ ಬೇಕು. ಆ ನಿದ್ದೆಗೆ ಹೋಗದೇ ಇದ್ದರೆ ಮಾನಸಿಕ-ದೈಹಿಕ ಆರೋಗ್ಯ ಹದಗೆಡುತ್ತದೆ. ಗಾಢ ನಿದ್ದೆಗೆ ಹೋಗಲು ಸಂಧ್ಯಾ ಕಾಲದ ದೇವರ ಧ್ಯಾನ, ಸ್ಮರಣೆ ಮಾಡಬೇಕು. ಈ ಪ್ರಯೋಜನದ ಅನುಭವ ಎಲ್ಲರಿಗೂ ಬರಬೇಕು. ಆರೋಗ್ಯ, ವ್ಯವಹಾರದ ಉನ್ನತಿ ಎಲ್ಲರಲ್ಲೂ ಆಗಬೇಕು ಎಂದು ಆಶಿಸಿದರು.

ಈ ವೇಳೆ ದತ್ತಾತ್ರೇಯ ಹೆಗಡೆ ಕಣ್ಣಿಪಾಲ್‌, ನಾರಾಯಣ ಹೆಗಡೆ ಬೀಗಾರ, ತಿಮ್ಮಣ್ಣ ಭಟ್ಟ ನಡಿಗೆಮನೆ, ರವೀಂದ್ರ ಕೋಮಾರ್‌ ಸೂತ್ರೆಮನೆ, ಶ್ರೀಪಾದ ಭಟ್ಟ ಕಳಚೆ, ಆರ್‌.ಎಸ್‌.ಹೆಗಡೆ ಭೈರುಂಬೆ ಇತರರು ಇದ್ದರು.

ದೇವರಿಗೆ ಪೂಜೆ ಆಗಲಿ ಪೂಜೆ ಮಾಡಬೇಕಲ್ಲಾ ಎಂದು ಮಾಡಬೇಡಿ. ಮನಸ್ಸಿನಲ್ಲಿ ಶ್ರದ್ಧೆ, ಏಕಾಗೃತೆ, ಶಾಂತಿಯಿಂದ ದೇವರ ಪೂಜೆ ಮಾಡಬೇಕು. ದೇವರಿಗೆ ಪೂಜೆ ಎಂದರೆ ನೋಡುವವರಿಗೆ ಕಂಡರಾಯಿತು ಎಂಬಂತೆ ಆಗಬಾರದು.
ಸ್ವರ್ಣವಲ್ಲೀ ಶ್ರೀ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.