ಆ. 18ರಿಂದ ಐರ್ಲೆಂಡ್‌ ವಿರುದ್ಧದ T-20 ಸರಣಿ ಆರಂಭ: ನೆಟ್‌ನಲ್ಲಿ ಬುಮ್ರಾ ಬೌಲಿಂಗ್‌ ಅಭ್ಯಾಸ


Team Udayavani, Aug 16, 2023, 11:08 PM IST

bumrah

ಡಬ್ಲಿನ್‌: ಸುಮಾರು 11 ತಿಂಗಳ ಬಳಿಕ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಬುಧವಾರ ನೆಟ್‌ನಲ್ಲಿ ಬೌಲಿಂಗ್‌ ಅಭ್ಯಾಸದಲ್ಲಿ ಪಾಲ್ಗೊಂಡರು. ತೀವ್ರತೆ ಮತ್ತು ಕೌಶಲದಿಂದ ಬೌಲಿಂಗ್‌ ಮಾಡಿ ಗಮನ ಸೆಳೆದರು.

ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಬುಮ್ರಾ ಅವರು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಧವಾರ ಡಬ್ಲಿನ್‌ಗೆ ಬಂದ ಬಳಿಕ ತಂಡದ ಸದಸ್ಯರೆಲ್ಲರೂ ಅಭ್ಯಾಸಕ್ಕೆ ಇಳಿದರು.

29ರ ಹರೆಯದ ಬುಮ್ರಾ 2022ರ ಸೆಪ್ಟಂಬರ್‌ನಲ್ಲಿ ಭಾರತ ಪರ ಕೊನೆಯ ದಾಗಿ ಪಂದ್ಯವನ್ನಾಡಿದ್ದರು. ಆಬಳಿಕ ಬೆನ್ನುನೋವಿ ನಿಂದಾಗಿ ತಂಡದಿಂದ ಹೊರಗುಳಿದಿದ್ದರು. ಬೆನ್ನುನೋವಿ ಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ತನ್ನ ಫಿಟ್‌ನೆಸ್‌ ಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಈ ಕೂಟ ದಲ್ಲಿ ಆಡುತ್ತಿದ್ದಾರಲ್ಲದೇ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಮ್ರಾ ಅವರಂತೆ ಗಾಯದಿಂದ ಚೇತರಿಸಿ ಕೊಂಡಿರುವ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಈ ಕೂಟದಲ್ಲಿ ಆಡುತ್ತಿದ್ದಾರೆ.

ಭಾರತ ಮತ್ತು ಐರ್ಲೆಂಡ್‌ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಡಬ್ಲಿನ್‌ನಲ್ಲಿ ನಡೆಯಲಿದೆ. ಈ ಪಂದ್ಯಗಳು ಅನುಕ್ರಮವಾಗಿ ಆ. 18, 20 ಮತ್ತು 23ರಂದು ನಡೆಯಲಿದೆ.

ಜಿತೇಶ್‌ ಶರ್ಮ ಆಯ್ಕೆ ?
ಐರ್ಲೆಂಡ್‌ ವಿರುದ್ಧದ ಸರಣಿಗೆ ತಂಡದಲ್ಲಿ ಜಿತೇಶ್‌ ಶರ್ಮ ಇರುವ ಕಾರಣ ಸಂಜು ಸ್ಯಾಮ್ಸನ್‌ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಕಷ್ಟವೆಂದು ಹೇಳಲಾಗಿದೆ. ಈ ಸರಣಿಯಲ್ಲಿ ಅವರ ನಿರ್ವಹಣೆಯ ಆಧಾರದಲ್ಲಿ ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆ ಆಯ್ಕೆಗಾರರು ನಿರ್ಧರಿಸುವ ಸಾಧ್ಯತೆಯಿದೆ.

ವೆಸ್ಟ್‌ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳಲ್ಲಿ ಕೇವಲ 12, 7 ಮತ್ತು13 ರನ್‌ ಗಳಿಸಿರುವ ಸ್ಯಾಮ್ಸನ್‌ ಅವರು ಸಮಸ್ಯೆಯನ್ನು ತಂದೊಡ್ಡಿದ್ದಾರೆ. ಅವರ ಈ ಕಳಪೆ ನಿರ್ವಹಣೆಯಿಂದ ಜಿತೇಶ್‌ ವಿಕೆಟ್‌ಕೀಪಿಂಗ್‌ ಕರ್ತವ್ಯವನ್ನು ಪಡೆದರೂ ಯಾವುದೇ ಆಶ್ಚರ್ಯವಿಲ್ಲ. ಬಿರುಸಿನ ಬ್ಯಾಟಿಂಗ್‌ ನಡೆಸುವ ಜಿತೇಶ್‌ ಐರ್ಲೆಂಡ್‌ ವಿರುದ್ಧ ಆಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಭ್‌ಸಿಮ್ರಾನ್‌ ಸಿಂಗ್‌ ಅವರಿಗಿಂತ 29ರ ಹರೆಯದ ಜಿತೇಶ್‌ ಮುಂಬರುವ ಏಷ್ಯನ್‌ ಗೇಮ್ಸ್‌ಗೆ ಭಾರತದ ಮೊದಲ ಆಯ್ಕೆಯ ವಿಕೆಟ್‌ಕೀಪರ್‌ ಆಗಿದ್ದಾರೆ.
ರುತುರಾಜ್‌ ಗಾಯಕ್ವಾಡ್‌ ಮತ್ತು ಯಶಸ್ವಿ ಜೈಸ್ವಾಲ್‌ ಅವರು ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಯಿದೆ. ವೆಸ್ಟ್‌ಇಂಡೀಸ್‌ ವಿರುದ್ಧ ಪದಾರ್ಪಣೆಗೈದ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿರುವ ತಿಲಕ್‌ ವರ್ಮ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಸೂರ್ಯಕುಮಾರ್‌ ಯಾದವ್‌ ಅವರ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆಂದು ಖಚತವಾಗಿಲ್ಲ. ಸಾಮ್ಯನ್‌ ಆಡುವ ಸಾಧ್ಯತೆಯಿದೆ. ಆದರೆ ಶಿವಂ ದುಬೆ ಕೂಡ ಸ್ಪರ್ಧೆಯಲ್ಲಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.