Belapu: ದಾಖಲೆಯ 10ನೇ ಬಾರಿಗೆ ಬೆಳಪು ಗ್ರಾ.ಪಂ. ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆ

ಉಪಾಧ್ಯಕ್ಷರಾಗಿ ಶೋಭಾ ಭಟ್ ಆಯ್ಕೆ

Team Udayavani, Aug 17, 2023, 3:34 PM IST

tdy-17

ಕಾಪು: ಬೆಳಪು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ, ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಐಕಳಭಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಉಪಾಧ್ಯಕ್ಷರಾಗಿ ಶೋಭಾ‌ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಳಪು ಗ್ರಾ.ಪಂ. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 11 ಸದಸ್ಯ ಬಲದ ಬೆಳಪು ಗ್ರಾ.ಪಂ. ನಲ್ಲಿ 8 ಮಂದಿ ಗ್ರಾಮಾಭಿವೃದ್ಧಿ ಸಮಿತಿ ಸದಸ್ಯರು, 2 ಎಸ್.ಡಿ.ಪಿ.ಐ, 1 ಪಕ್ಷೇತರ ಸದಸ್ಯರಿದ್ದಾರೆ.

ಗ್ರಾಮಾಭಿವೃದ್ಧಿ ಸಮಿತಿಯ ಮೂಲಕವಾಗಿ ತನ್ನ 20ನೇ ವಯಸ್ಸಿನಲ್ಲೇ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಜಯ ಸಾಧಿಸಿದ್ದ ಅವರು, ಕಳೆದ 32 ವರ್ಷಗಳಿಂದ ಗ್ರಾ. ಪಂ. ಸದಸ್ಯರಾಗುತ್ತಾ ಬರುತ್ತಿದ್ದಾರೆ. ಇದರಲ್ಲಿ 27 ವರ್ಷಗಳಿಂದ ಅವಿರೋಧವಾಗಿ ಗ್ರಾ.ಪಂ. ಸದಸ್ಯರಾಗಿ  ಆಯ್ಕೆಯಾಗುತ್ತಿದ್ದು 27 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಗ್ರಾಮವನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಿದ್ದಾರೆ. ಈ ಬಾರಿ ದಾಖಲೆಯ ಹತ್ತನೇ ಸಲದ ಅಧ್ಯಕ್ಷರಾಗುವ ಮೂಲಕ ದೇವಿಪ್ರಸಾದ್ ಶೆಟ್ಟಿ ಅವರು ತಮ್ಮ ಹೊಸ ದಾಖಲೆಯನ್ನು ಬರೆದಿದ್ದಾರೆ‌.

ತೋಟಗಾರಿಕಾ ಇಲಾಖೆಯ ನಿಧೀಶ್ ಹೊಳ್ಳ ಚುನಾವಣಾಧಿಕಾರಿಯಾಗಿದ್ದು, ಪಿಡಿಒ ಪ್ರವೀಣ್ ಡಿ. ಸೋಜ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಬೆಳಪು ಗ್ರಾಮವನ್ನು ದೇವಿಪ್ರಸಾದ್ ಶೆಟ್ಟಿ ಅವರು ಅತ್ಯಂತ ಮಾದರಿ ಗ್ರಾಮವನ್ನಾಗಿ ರೂಪಿಸಿದ್ದಾರೆ. ಇದೀಗ ದಾಖಲೆಯ ಹತ್ತನೇ ಬಾರಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗುವ ಮೂಲಕ ರಾಜ್ಯದಲ್ಲೇ ಹೊಸ ಚರಿತ್ರೆಯನ್ನು ಬರೆದಿದ್ದಾರೆ. ಈ ಹಿಂದೆ ಅವರು ಅಧ್ಯಕ್ಷರಾಗಿದ್ದಾಗ ಮುಖ್ಯಮಂತ್ರಿ ಅಂದಿನ ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರಿಂದ ಶಿಲಾನ್ಯಾಸಗೊಂಡಿದ್ದ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು ಇದೀಗ ಅದರ ಉದ್ಘಾಟನೆಯ ಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ಯವರಿಗೆ ಒದಗಿ ಬಂದಿದೆ. ಬೆಳಪು ಗ್ರಾಮದಲ್ಲಿ ಬಾಕಿ ಉಳಿದಿರುವ ಸುಮಾರು ಶೇ. 15 ರಷ್ಟು ಅಭಿವೃದ್ಧಿ ಕೆಲಸವನ್ನು ನಡೆಸುವ ಮೂಲಕ ಶೇ. 100 ರಷ್ಟು ಅಭಿವೃದ್ಧಿ ಹೊಂದಿದ ಗ್ರಾಮವಾಗಿ ಬೆಳಕು ಗ್ರಾಮವು ಮೂಡಿಬರಲಿ ಎಂದು ಶುಭ ಹಾರೈಸಿದರು.

ನೂತನ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ಬೆಳಪು ಗ್ರಾಮವನ್ನು ಶೈಕ್ಷಣಿಕ, ಕೈಗಾರಿಕೆ, ಪ್ರವಾಸೋದ್ಯಮ ಸಹಿತವಾಗಿ ಎಲ್ಲಾ ಮಾದರಿಯಲ್ಲೂ ಅಭಿವೃದ್ಧಿ ಪಡಿಸುವ ಗುರಿಯೊಂದಿಗೆ ಹಿಂದಿನಿಂದಲೂ ಕೆಲಸ ಮಾಡಿಕೊಂಡು ಬಂದಿದ್ದೇವೆ. ಮುಂದೆಯೂ ಅದನ್ನು ಮುಂದುವರಿಸಿತ್ತೇವೆ. ಇಲ್ಲಿನ ಅಭಿವೃದ್ಧಿಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಸಹಕಾರ ಸ್ಮರಣೀಯ. ಕಾಪು ಕ್ಷೇತ್ರದ ಹಾಲಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಸಂಸದೆ ಶೋಭಾ ಕರಂದ್ಲಾಜೆ ಅವರ ಮಾರ್ಗದರ್ಶನದಲ್ಲಿ ಬೆಳಪು ಗ್ರಾಮವನ್ನು ಇನ್ನಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು. ಪ್ರಗತಿಯಲ್ಲಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಥಮ ಆದ್ಯತೆ ನೀಡಲಾಗುವುದು. ತಿಂಗಳೊಳಗೆ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಿ, ಬೆಳಪು ಗ್ರಾಮವನ್ನು ಸಂಪೂರ್ಣ ಕಸಮುಕ್ತ ಗ್ರಾಮವನ್ನಾಗಿಸುವ ಗುರಿ ಹೊಂದಲಾಗಿದೆ ಎಂದರು.

ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ತಾ.ಪಂ. ಮಾಜಿ ಉಪಾಧ್ಯಕ್ಷ ಯು.ಸಿ. ಶೇಖಬ್ಬ, ಕಾಂಗ್ರೆಸ್ ಮುಖಂಡರು, ಗ್ರಾ.ಪಂ. ಸದಸ್ಯರು ನೂತನ ಅಧ್ಯಕ್ಷ – ಉಪಾಧ್ಯಕ್ಷರನ್ನು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.