Bangalore-Chennai ಎಕ್ಸ್‌ಪ್ರಸ್‌ ಹೈವೇ ಲೋಕಾರ್ಪಣೆಗೆ ಸಜ್ಜು

ದೇಶದ ಮೊಟ್ಟ ಮೊದಲ ಹಸಿರು ಹೆದ್ದಾರಿ

Team Udayavani, Aug 18, 2023, 6:34 AM IST

chennai bangalore express

ಭಾರತ ಮಾಲಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದೇಶದ ಮೊದಲ ಹಸಿರು ಹೆದ್ದಾರಿ

ಕೋಲಾರ: ಗಂಟೆಗೆ 120 ಕಿ.ಮೀ. ವೇಗದಲ್ಲಿ ಕೇವಲ ಎರಡೂವರೆ ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈ ಮಹಾನಗರದ ತಲುಪಬಹುದಾದ ಭಾರತ ಮಾಲಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದೇಶದ ಮೊಟ್ಟ ಮೊದಲ ಹಸಿರು ಹೆದ್ದಾರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇ ಲೋಕಸಭಾ ಚುನಾವಣೆಗೂ ಮುನ್ನ ಲೋಕಾರ್ಪಣೆಗೊಳ್ಳಲು ಸಜ್ಜಾಗುತ್ತಿದೆ.

ಹಾಲಿ ಬೆಂಗಳೂರು-ಚೆನ್ನೈ ನಡುವೆ ಎರಡು ಹೆದ್ದಾರಿಗಳಿವೆ. ಹೊಸಕೋಟೆ-ಕೋಲಾರ ಮಾರ್ಗವಾಗಿರುವ ಹೆದ್ದಾರಿ 335 ಕಿ.ಮೀ. ಹಾಗೂ ಬೆಂಗಳೂರು-ಹೊಸೂರು ನಡುವೆ ಇರುವ ಹೆದ್ದಾರಿ 372 ಕಿ.ಮೀ. ದೂರ ಹೊಂದಿದ್ದು, ಹಾಲಿ ನಿರ್ಮಾಣವಾಗುತ್ತಿರುವ ಎಕ್ಸ್‌ಪ್ರಸ್‌ ಹೈವೇ 258 ಕಿ.ಮೀ. ದೂರದ್ದಾಗಿದೆ.  ಈಗ ಬೆಂಗಳೂರು-ಚೆನ್ನೈ ನಡುವೆ 6ರಿಂದ 7 ಗಂಟೆಗಳ ಪ್ರಯಾಣ ಕ್ರಮಿಸಬೇಕಾಗಿದ್ದು, ಎಕ್ಸ್‌ಪ್ರಸ್‌ ಹೈವೇಯಲ್ಲಿ ಈ ಸಮಯವನ್ನು ಕೇವಲ 2.50 ಗಂಟೆಯಿಂದ 4 ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ.

2011ರಲ್ಲಿ ಘೋಷಣೆ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌  ಯೋಜನೆಯನ್ನು 2011ರಲ್ಲಿ ರೂಪಿಸಲಾಗಿತ್ತು.  2020 ನವೆಂಬರ್‌ನಲ್ಲಿ ಒಟ್ಟು ಆರು ಕಂಪನಿಗಳಿಗೆ 10  ಪ್ಯಾಕೇಜ್‌ಗಳಲ್ಲಿ ಯೋಜನೆ ಪೂರ್ಣಗೊಳಿಸಲು ಟೆಂಡರ್‌ಒಪ್ಪಿಸಲಾಗಿತ್ತು. ಸುಮಾರು 17,930 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಗೆ ಪ್ರಧಾನಿ  ಮೋದಿಯವರು 2022 ಮೇ 26ರಂದು ಗುದ್ದಲಿ ಪೂಜೆ ನೆರವೇರಿಸಿದ್ದರು. ಮಾರ್ಚ್‌ 2024ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂಬ ಕಾಲಮಿತಿ ನೀಡಲಾಯಿತು.

ಮೂರು ರಾಜ್ಯಗಳು, ಐದು ಜಿಲ್ಲೆಗಳು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಮೂರು ರಾಜ್ಯಗಳ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ತೂರು, ರಾಣಿಪೇಟೈ ಹಾಗೂ ಕಾಂಚಿಪುರಂ ಜಿಲ್ಲೆಗಳಲ್ಲಿ ಹಾದು ಹೋಗಲಿದೆ. ಮೂರು ಹಂತಗಳಲ್ಲಿ ಕಾಮಗಾರಿ ನಿರ್ವಹಣೆ ಮಾಡಲಾಗುತ್ತಿದೆ. ಸದ್ಯಕ್ಕೆ ನಾಲ್ಕು ಲೇನ್‌ಗಳ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ 8 ಲೇನ್‌ಗಳಿಗೆ ವಿಸ್ತರಿಸಲು ಈಗಲೇ ಸ್ಥಳಾವಕಾಶ ಕಲ್ಪಿಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಶೇ.15 ರಿಂದ ಶೇ.80ರವರೆಗೆ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿದೆ.

ಹಸಿರು ಹೆದ್ದಾರಿ: ದೇಶದ ಮೊದಲ ಹಸಿರು ಹೆದ್ದಾರಿ ಎಂದು ಈ ಯೋಜನೆಯನ್ನು ಕರೆಯಲಾಗುತ್ತಿದೆ. ಯೋಜನೆಗಾಗಿ ಕೇವಲ 33 ಕಿ.ಮೀ. ಜಾಗವನ್ನು ಮಾತ್ರವೇ ಅರಣ್ಯ ಪ್ರದೇಶದಲ್ಲಿ ಬಳಸಿಕೊಳ್ಳಲಾಗಿದೆ. ಸುಮಾರು 2 ಸಾವಿರ ಮರಗಳನ್ನು ಕಡಿಯಲಾಗಿದೆ. ಇದನ್ನು ತುಂಬಲು ಹೆದ್ದಾರಿಯ ಅಕ್ಕಪಕ್ಕದಲ್ಲಿರುವ ಕೆರೆಗಳನ್ನು ಅಮೃತ ಸರೋವರ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತಿದೆ. ಅಮೃತ ಮಹೋತ್ಸವ ಪಕ್ಷಿಧಾಮಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮರಗಳನ್ನು ಹೆಚ್ಚು ಬೆಳೆಸಲು ಯೋಜಿಸಲಾಗಿದೆ.

ಹೆದ್ದಾರಿಯ ಲಾಭಗಳೇನು?

ಬೆಂಗಳೂರು-ಚೆನ್ನೈಎಕ್ಸ್‌ಪ್ರಸ್‌ ಹೈವೇಯಿಂದಾಗಿ ಎರಡೂ ನಗರ ನಡುವಿನ ವಿಮಾನಯಾನದ ಒತ್ತಡ ಕಡಿಮೆಯಾಗಲಿದೆ. ಸಂಚಾರದ ಅವಧಿ ಕಡಿಮೆಯಾಗಲಿದೆ. ಸರಕು ಸಾಗಾಣೆ ವೆಚ್ಚ ಶೇ.16 ರಷ್ಟು ಕಡಿಮೆಯಾಗಲಿದೆ. ಮೂರು ರಾಜ್ಯಗಳ ಐದು ಜಿಲ್ಲೆಗಳಲ್ಲಿ ಹೆದ್ದಾರಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದರಿಂದ ಹೆದ್ದಾರಿ ಉದ್ದಕ್ಕೂ ಆರ್ಥಿಕ ಚಟುವಟಿಕೆಗಳು ಚುರುಕುಗೊಳ್ಳಲಿದೆ. ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಸಹಕಾರಿಯಾಗಲಿದೆ. ಈಗಾಗಲೇ ಹೆದ್ದಾರಿಗೆ ಹೊಂದಿಕೊಂಡಂತೆ ಕೈಗಾರಿಕೆ  ಅರಂಭಿಸಲು ಸಿದ್ಧತೆ ನಡೆಯುತ್ತಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಕಳೆದ ವರ್ಷ ಹೆದ್ದಾರಿ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ಹೆದ್ದಾರಿಯು ಮಾರ್ಚ್‌ 2024 ರೊಳಗೆ ಲೋಕಾರ್ಪಣೆಯಾದರೂ, ಸಂಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಕ್ತಾಯವಾಗಲು ಮುಂದಿನ ವರ್ಷ ಆಗಸ್ಟ್‌ವರೆಗೂ ಕಾಯಬೇಕಾಗಬಹುದು ಎನ್ನಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇಗಾಗಿ 61 ಗ್ರಾಮಗಳ 666 ಹೆಕ್ಟೇರ್‌ ಪ್ರದೇಶವನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. 446 ಕೋಟಿ ಪರಿಹಾರ ವಿತರಿಸಲಾಗಿದೆ. ತಾಂತ್ರಿಕ ಕಾರಣಗಳಿಗಾಗಿ 108 ಕೋಟಿ ರೂ. ಪರಿಹಾರ ವಿತರಣೆ ಬಾಕಿ ಇದೆ. ಕೋಲಾರ ಜಿಲ್ಲೆಯಲ್ಲಿ ಹೈವೇಯ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

– ಶ್ರೀನಿವಾಸಶೆಟ್ಟಿ. ವ್ಯವಸ್ಥಾಪಕ, ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಸಕ್ರಮ ಪ್ರಾಧಿಕಾರ, ಎನ್‌ಎಚ್‌ಎಐ

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.