577 PSI ಹುದ್ದೆಗಳಿಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ
Team Udayavani, Aug 17, 2023, 11:23 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ 577 ಪಿಎಸ್ಐ ಹುದ್ದೆಗಳಿಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ ಮಾಡಲು ಸರಕಾರ ನಿರ್ಧರಿಸಿದೆ.
ರಾಜ್ಯದಲ್ಲಿ 2020-21ರಲ್ಲಿ 545 ಹಾಗೂ 2021-22 ರಲ್ಲಿ 402 ಪಿಎಸ್ಐ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳು ವಾಗ ಹಲವು ಆರೋಪಗಳು ಕೇಳಿಬಂದಿದ್ದವು. ಒಂದೆಡೆ ಈ ಹಗರಣದ ತನಿಖೆ ನಡೆಯುತ್ತಿದ್ದು, ಇನ್ನೊಂದೆಡೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ.
ಇದರಿಂದ 1 ಸಾವಿರದಷ್ಟು ಪಿಎಸ್ಐ ಹುದ್ದೆಗಳು ಖಾಲಿ ಆಗಿದ್ದು, ಎಎಸ್ಐಗಳನ್ನೇ ಪಿಎಸ್ಐಗಳಾಗಿ ಮುಂಭಡ್ತಿ ನೀಡುವ ಮೂಲಕ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದಾಗಿ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದ್ದರು.
ಅದರಂತೆ ಈಗ ಸರಕಾರ ಆದೇಶ ಹೊರಡಿಸಿದ್ದು, ಒಟ್ಟು 577 ಪಿಎಸ್ಐ ಹುದ್ದೆಗಳನ್ನು ತಾತ್ಕಾಲಿಕವಾಗಿ 6 ತಿಂಗಳವರೆಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ ಮೂಲಕ ತುಂಬಲು ಕ್ರಮ ಕೈಗೊಂಡಿದೆ.
ಮುಂಭಡ್ತಿ ಪ್ರಕ್ರಿಯೆ ಅಲ್ಲ
ನಿಯಮ 32ರ ಅನ್ವಯ ಮಾಡಲಾಗುವ ಸ್ವತಂತ್ರ ಪ್ರಭಾರ ವ್ಯವಸ್ಥೆಯು ಕ್ರಮಬದ್ಧ ಮುಂಭಡ್ತಿ ಪ್ರಕ್ರಿಯೆ ಅಲ್ಲ. ಯಾವುದೇ ಸಂದರ್ಭದಲ್ಲಾದರೂ ಆದೇಶ ಹಿಂಪಡೆಯಬಹುದು. ನೇರ ನೇಮಕಾತಿ ಪ್ರಕ್ರಿಯೆ ನಡೆದ ಕೂಡಲೇ ಈ ವ್ಯವಸ್ಥೆ ರದ್ದಾಗಲಿದೆ. ಸ್ವತಂತ್ರ ಪ್ರಭಾರ ನಿರ್ವಹಿಸಿದ ದಿನಾಂಕದಿಂದ ಪೂರ್ವಾನ್ವಯ ಮುಂಭಡ್ತಿಗೂ ಅವಕಾಶಗಳಿಲ್ಲ. ಹಕ್ಕೊತ್ತಾಯವನ್ನೂ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.