![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 18, 2023, 2:56 PM IST
ಸಕಲೇಶಪುರ: ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ.
ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್ನು ನೋಡಲೆಂದು ಬಂದಿದ್ದ ಕವಿತಾ ಅವರನ್ನು ಮನೆ ಬಳಿ ಇದ್ದಾಗಲೇ ಕಾಡಾನೆ ಅಟ್ಟಾಡಿಸಿಕೊಂಡು ಬಂದಿದ್ದು, ಕೆಳಗೆ ಬಿದ್ದ ಕವಿತಾರ ಮೇಲೆ ಆನೆ ದಾಳಿ ಮಾಡಿತ್ತು.
ಕವಿತಾ ಅವರ ಸೊಂಟದ ಭಾಗ ತುಳಿದಿದ್ದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನಾರ್ವೇ ಮೂಲದ ಕವಿತಾ ಪತಿ ಬೈರಯ್ಯ ಇತ್ತೀಚೆಗೆ ನಿಧನ ಹೊಂದಿದ್ದರು. ಇವರಿಗೆ ಮೂವರು ಗಂಡು ಮಕ್ಕಳಿದ್ದಾರೆ.
ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸತತವಾಗಿ ಜೀವ ಹಾನಿ ಸಂಭವಿಸುತ್ತಲೇ ಇವೆ. ಕಾಡಾನೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಳೆಗಾರರ ಸಂಘಟನೆ ಮತ್ತು ರೈತ ಸಂಘಟನೆಗಳು ಆಗ್ರಹಿಸಿವೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.