Vijayapura: ಡಿಕೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು: ಭವಿಷ್ಯ ನುಡಿದ ಯತ್ನಾಳ್


Team Udayavani, Aug 18, 2023, 6:29 PM IST

DK Shivakumar will never become Chief Minister says Basanagouda patil yatnal

ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಸೂಪರ್ ಸಿ.ಎಂ. ರೀತಿ ವರ್ತಿಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ದುರ್ಬಲಗೊಳಿಸಿ ಮುಖ್ಯಮಂತ್ರಿಯಾಗುವ ಹುನ್ನಾರ ನಡೆಸಿದ್ದಾರೆ. ಆದರೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ಬೆನ್ನಿಗೆ 15 ಶಾಸಕರಿದ್ದರೂ ಹೆಚ್ಚು ಶಾಸಕರ ಬೆಂಬಲ ಇರುವ ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಶಿವಕುಮಾರ ಸಂಚು ರೂಪಿಸುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಹೋದವರು ಮರಳಿ ಬರುತ್ತಾರೆ ಎನ್ನುವ ಹೇಳಿಕೆ ಹಿಂದೆ ಸಿದ್ದರಾಮಯ್ಯ ಶಕ್ತಿ ಕುಗ್ಗಿಸುವ ಹುನ್ನಾರ ಅಡಗಿದೆ ಎಂದು ವಿಶ್ಲೇಷಿಸಿದರು.

ಸಿದ್ಧರಾಮಯ್ಯ ಅವರ ವಿರುದ್ಧ ಇರುವ ಶಾಸಕರನ್ನು ಒಗ್ಗೂಡಿಸಿ ಇದಕ್ಕಾಗಿ ರಾಜಕೀಯವಾಗಿ ಮುಗಿಸಲು ಡಿಸಿಎಂ ದೊಡ್ಡ ಯೋಜನೆಯನ್ನೇ ಮಾಡಿದ್ದಾರೆ. ಇದಕ್ಕಾಗಿ ದೆಹಲಿಯಲ್ಲಿ ಯಾರ್ಯಾರ ಮನೆಗೆ ತಿರುಗಿ, ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಆರೋಪಿಸಿದರು.

ಶಿವಕುಮಾರ್ ಅವರಿಂದ ಏನೆಲ್ಲ ನೋವು ಅನುಭವಿಸಿದರೂ ಸಿದ್ದರಾಮಯ್ಯ ಸುಮ್ಮನಿದ್ದಾರೆ. ಈ ನೋವೇ ಅವರು ಶಿವಕುಮಾರ ಅವರಿಗೆ ಅಧಿಕಾರ ಬಿಟ್ದಟುಕೊಡದಂತೆ ಮಾಡಲಿದೆ. ನಾನೇ ಕಾಂಗ್ರೆಸ್ ಕೊನೆ ಮುಖ್ಯಮಂತ್ರಿ ಎನ್ನುವ ಸ್ಥಿತಿ ಇದ್ದು, 5 ತಿಂಗಳಾದರೂ ಸರಿ, 5 ವರ್ಷವಾದರೂ ಸರಿ ಸಿದ್ಧರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಲಿದ್ದಾರೆ. ಹೀಗಾಗಿ ಸಿ.ಎಂ. ಆಗುವ ಭಾಗ್ಯ ಶಿವಕುಮಾರಗೆ ಸಿಗುವುದಿಲ್ಲ ಎಂದು ಲೇವಡಿ ಮಾಡಿದರು.

ತನಿಖೆ ನಡೆಸಲಿ: ಒಂದೊಮ್ಮೆ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ತನಿಖೆ ನಡೆಸಲು ಈ ಸರ್ಕಾರಕ್ಕೆ ಧೈರ್ಯ ಇದೆಯೇ, ಇದ್ದರೆ 6 ತಿಂಗಳಲ್ಲಿ ತನಿಖೆ ಮುಗಿಸಲಿ. ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನು ಮಾಡಿರುವ ಆರೋಪದ ಕುರಿತು ತನಿಖೆ ಮಾಡಿದರೂ ಎದುರಿಸಲು ಸಿದ್ಧನಿದ್ದೇನೆ. ನಮ್ಮಲ್ಲಿಯೂ ಭ್ರಷ್ಟರಿದ್ದರೆ ತನಿಖೆಯಿಂದಾದರೂ ಬಿಜೆಪಿ ಸ್ವಚ್ಛಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಕಮೀಷನ್ ಪಡೆದಿತ್ತು ಎಂಬುದಕ್ಕೆ ಸಚಿವ ಎಂ.ಬಿ.ಪಾಟೀಲ ಅವರ ಬಳಿ ಆಡಿಯೋ, ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ. ಕ್ಯಾಸೆಟ್ ಕಾಲ ಹೋಗಿ ಪೆನ್‍ಡ್ರೈವ್ ಕಾಲ ಬಂದಿದೆ ಎಂದು ಛೇಡಿಸಿದರು.

ಎಂ.ಬಿ.ಪಾಟೀಲ ಅವರು ಐದು ವರ್ಷ ಸಚಿವನಾಗಿರುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಯತ್ನಾಳ್ ವಿಡಿಯೋ ನನ್ನ ಬಳಿ ಇವೆ ಬಿಡುಗಡೆ ಮಾಡುತ್ತೇನೆ ಎಂದಿರುವ ಸಚಿವ ಪಾಟೀಲ ಅವರಿಗೆ ಅಧಿಕಾರದ ಅರಳು ಮರಳು ಹಿಡಿದಿದೆ ಎಂದು ಕುಟುಕಿದರು.

ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ವೇತನ ನೀಡಲೂ ಸಾಧ್ಯವಾಗದ ದುಸ್ಥಿತಿ ಇದೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಳಿ ಪೆನ್ ಡ್ರೈವ್ ಇದೆ ಎಂದು ಬ್ಲಾಕ್‍ಮೇಲ್ ಮಾಡಿ ಬಾಯಿ ಮುಚ್ಚಿಸುವ ಬೆದರಿಕೆ ತಂತ್ರ ಬೇಡ. ಧೈರ್ಯ ಇದ್ದರೆ ಯಾರ್ಯಾರ ಡೈವ್, ಯಾರ್ಯಾರ ಪೆನ್ ಇದೆಯೋ ಬಿಡುಗಡೆ ಮಾಡಲಿ. ಯಾರ್ಯಾರದ್ದು ಏನೇನಿದೆ ಎಂಬುದು ನನಗೂ ಗೊತ್ತಿದೆ. ಇಂಥ ಹೇಳಿಕೆ ಕೊಡುವವರದ್ದು ಏನೇನಿದೆ ಎಂಬುದೂ ನನಗೆ ಗೊತ್ತಿದೆ. ಆದರೆ ನಾನು ಬ್ಲ್ಯಾಕ್ ಮೇಲ್ ಮಾಡಲಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಬಾಂಬೆ ಟೀಂ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬುದೆಲ್ಲ ಊಹಾಪೋಹ ಹಾಗೂ ಕಾಂಗ್ರೆಸ್ ನಡೆಸಿರುವ ಅಪ್ರಚಾರ. ಶಾಸಕ ಮುನಿರತ್ನ ಬಿಜೆಪಿ ಪಕ್ಷದಲ್ಲೇ ನನ್ನ ರಾಜಕೀಯ ಜೀವನ ಕೊನೆಗೊಳ್ಳಲಿದೆ ಎಂದಿದ್ದಾರೆ. ಇಂಥ ಅಪಪ್ರಚಾರದಿಂದ ಭಯ ಹುಟ್ಟಿಸಿ, ಲೋಕಸಭಾ ಚುನಾವಣೆಗೆ ವಾತಾವರಣ ವಾಮ ಮಾರ್ಗದ ಸಿದ್ಧತೆ ನಡೆಸಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಏನೇ ತಂತರ ಮಾಡಿದರೂ ಲೋಕಸಭೆ ಚುನಾವಣೆಯಲ್ಲಿ ದೇಶಕ್ಕೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ರಾಜ್ಯದಲ್ಲಿ ಬಿಜೆಪಿ ಮತ್ತೆ 25 ಸ್ಥಾನ ಗೆಲ್ಲುವುದು ಖಚಿತ. ದೇಶಕ್ಕೆ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಇಂತವರ ನಾಯಕತ್ವ ದೇಶಕ್ಕೆ ಬೇಕಿಲ್ಲ. ಭಾರತವನ್ನು ವಿಶ್ವದ ಆರ್ಥಿಕ ಬಲಿಷ್ಠ ರಾಷ್ಟ್ರಗಳಲ್ಲಿ 5ನೇ ಸ್ಥಾನಕ್ಕೆ ತಂದಿರುವ ಮೋದಿ ಅವರ ನಾಯಕತ್ವ ಬೇಕಿದ್ದು, ದೇಶದ ಮತದಾರರು ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬಿಜೆಪಿ ಮುಖಂಡ ಎಸ್.ಟಿ.ಸೋಮಶೇಖರ್ ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಶಾಸಕನಾಗಿದ್ದ ನಾನು ಪಟೇಲರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದಿದ್ದೆ. ಅಧಿಕಾರದಲ್ಲಿರುವ ನಾಯಕರನ್ನು ವಿಪಕ್ಷದವರು ಭೇಟಿ ಮಾಡುವುದು ಸಾಮಾನ್ಯ. ರಾಜಕೀಯದ ಹೊರತಾಗಿ ಭೇಟಿ ಮಾಡಿದರೆ ತಪ್ಪೇನಿದೆ ಎಂದರು.

ಬಿಜೆಪಿಗೆ ಓಟು ಹಾಕಿದವರು ರಾಕ್ಷಸರು ಎಂದು ಸುರ್ಜೆವಾಲಾ ಹೇಳಿಕೆಗೆ ತೀಕ್ಷ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ, ಸುರ್ಜೇವಾಲಾ ಭಾರತೀಯ ಮತದಾರರನ್ನು ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಸಂಸ್ಕೃತಿಯೇ ರಾಕ್ಷಸತ್ವದಿಂದ ಕೂಡಿದೆ. ಅದರ ವಂಶದ ಹಿನ್ನೆಲೆಯಲೇ ಸರಿ ಇಲ್ಲ, ಅದು ಹೈಬ್ರಿಡ್ ತಳಿಯ ರಾಕ್ಷಸ ಸಂತತಿ. ಕಾಂಗ್ರೆಸ್ ಪಕ್ಷ ಎಂಥ ಮನಸ್ಥಿತಿ ಹೊಂದಿದೆ ಎಂಬುದನ್ನು ದೇಶದ ಮತದಾರರು ಇನ್ನಾದರೂ ಅರ್ಥೈಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.