Cincinnati Open ಟೆನಿಸ್‌; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅಲ್ಕರಾಜ್‌


Team Udayavani, Aug 18, 2023, 11:43 PM IST

Jokovik

ಸಿನ್ಸಿನಾಟಿ: ಫ್ರಾನ್ಸ್‌ನ ಗೇಲ್‌ ಮಾನ್‌ಫಿಲ್ಸ್‌ ಅವರನ್ನು ಸುಲಭದಲ್ಲಿ ಸೋಲಿಸಿದ ನೊವಾಕ್‌ ಜೊಕೋವಿಕ್‌ “ಸಿನ್ಸಿನಾಟಿ ಓಪನ್‌’ ಟೆನಿಸ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಇನ್ನೊಂದು ಪಂದ್ಯದಲ್ಲಿ ನಂ.1 ಖ್ಯಾತಿಯ ಕಾರ್ಲೋಸ್‌ ಅಲ್ಕರಾಜ್‌ ಅಮೆರಿಕದ ಟಾಮಿ ಪೌಲ್‌ ಅವರನ್ನು ಪರಾಭವಗೊಳಿಸಿದರು.

23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ಒಡೆಯನಾಗಿರುವ ನೊವಾಕ್‌ ಜೊಕೋವಿಕ್‌ 6-3, 6-2 ಅಂತರದಿಂದ ಗೇಲ್‌ ಮಾನ್‌ಫಿಲ್ಸ್‌ಗೆ ಸೋಲುಣಿಸಿದರು. ಇದರೊಂದಿಗೆ ಮಾನ್‌ಫಿಲ್ಸ್‌ ವಿರುದ್ಧ ಆಡಿದ ಎಲ್ಲ 19 ಪಂದ್ಯಗಳಲ್ಲೂ ಜೊಕೋ ಗೆದ್ದು ಬಂದಂತಾಯಿತು.

ಕ್ವಾರ್ಟರ್‌ ಫೈನಲ್‌ನಲ್ಲಿ ಜೊಕೋವಿಕ್‌ ಎದುರಾಳಿ ಅಮೆರಿಕದ ಟೇಲರ್‌ ಫ್ರಿಟ್ಜ್. ಮೊದಲ ಸೆಟ್‌ ವೇಳೆ ಸರ್ಬಿಯಾದ ಡುಸಾನ್‌ ಲಾಜೋವಿಕ್‌ ಗಾಯಾಳಾಗಿ ಹಿಂದೆ ಸರಿದ ಕಾರಣ ಟೇಲರ್‌ ಫ್ರಿಟ್ಜ್ ಅವರಿಗೆ ವಾಕ್‌ಓವರ್‌ ಲಭಿಸಿತು.

ಅಲ್ಕರಾಜ್‌ ಹೋರಾಟ
ಟಾಮಿ ಪೌಲ್‌ ವಿರುದ್ಧ ಮೇಲುಗೈ ಸಾಧಿಸಲು ಕಾರ್ಲೋಸ್‌ ಅಲ್ಕರಾಜ್‌ 3 ಸೆಟ್‌ಗಳ ಕಠಿನ ಹೋರಾಟ ನಡೆಸಬೇಕಾಯಿತು. ಇದರಲ್ಲಿ ಮೊದಲೆರಡು ಸೆಟ್‌ ಟೈ ಬ್ರೇಕರ್‌ಗೆ ವಿಸ್ತರಿಸಲ್ಪಟ್ಟಿತ್ತು. ಅಲ್ಕರಾಜ್‌ ಗೆಲುವಿನ ಅಂತರ 7-6 (8-6), 6-7 (0-7), 6-3. ಇದರೊಂದಿಗೆ ಟಾಮಿ ಪೌಲ್‌ ವಿರುದ್ಧ ಸತತ 2 ಸೋಲಿನ ಸಂಕಟದಿಂದ ಅಲ್ಕರಾಜ್‌ ಪಾರಾದರು. ಈ ತಿಂಗಳ ಆರಂಭದಲ್ಲಿ ನಡೆದ ಟೊರೊಂಟೊ ಪಂದ್ಯಾವಳಿಯಲ್ಲಿ ಅಲ್ಕರಾಜ್‌ ಅವರನ್ನು ಪೌಲ್‌ ಪರಾಭವಗೊಳಿಸಿದ್ದರು.

ಅಲ್ಕರಾಜ್‌ ಅವರ ಕ್ವಾರ್ಟರ್‌ ಫೈನಲ್‌ ಎದುರಾಳಿ ಮ್ಯಾಕ್ಸ್‌ ಪರ್ಸೆಲ್‌. ಕಾಂಗರೂ ನಾಡಿನ ಟೆನಿಸಿಗ ಸ್ವಿಜರ್ಲೆಂಡ್‌ನ‌ ಸ್ಟಾನಿಸ್ಲಾಸ್‌ ವಾವ್ರಿಂಕ ಅವರಿಗೆ 6-4, 6-2 ಅಂತರದ ಸೋಲುಣಿಸಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.