Raj B Shetty: ʼಮಾರಿʼ ಅವತಾರದ ʼಟೋಬಿʼಗೆ ಸೆನ್ಸಾರ್‌ ಬೋರ್ಡ್‌ನಿಂದ ʼಯು/ಎʼ ಸರ್ಟಿಫಿಕೇಟ್


Team Udayavani, Aug 19, 2023, 4:28 PM IST

Raj B Shetty: ʼಮಾರಿʼ ಅವತಾರದ ʼಟೋಬಿʼಗೆ ಸೆನ್ಸಾರ್‌ ಬೋರ್ಡ್‌ನಿಂದ ʼಯು/ಎʼ ಸರ್ಟಿಫಿಕೇಟ್

ಬೆಂಗಳೂರು: ರಾಜ್‌ ಬಿ ಶೆಟ್ಟಿ ಅವರ ಬಹು ನಿರೀಕ್ಷಿತ ʼಟೋಬಿʼ ಸಿನಿಮಾ ರಿಲೀಸ್‌ ಗೆ ದಿನಗಣನೆ ಆರಂಭವಾಗಿದೆ. ʼಒಂದು ಮೊಟ್ಟೆಯ ಕಥೆʼಯಲ್ಲಿ ಮುಗ್ಧನಾಗಿ ʼಗರುಡ ಗಮನ ವೃಷಭ ವಾಹನʼದಲ್ಲಿ ರಗಡ್‌ ಆದ ರಾಜ್‌ ಬಿ ಶೆಟ್ಟಿ, ಇದೀಗ ʼಮಾರಿʼ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ʼಮಾರಿಗೆ ದಾರಿʼ ಎನ್ನುತ್ತಾ ಫಸ್ಟ್‌ ಲುಕ್‌ ನಿಂದ ಗಮನ ಸೆಳೆದಿದ್ದ ʼಟೋಬಿʼ, ಇತ್ತೀಚಿಗಷ್ಟೇ ಟ್ರೇಲರ್‌ ನಿಂದ ಹೈಪ್‌ ಹೆಚ್ಚಿಸಿದೆ. “ಹರಕೆಯ ಕುರಿಯೊಂದು ತಪ್ಪಿಸಿಕೊಂಡಿದೆ, ಯಾವುದೇ ಕಾರಣಕ್ಕೂ ಕುರಿ ಮತ್ತೆ ಊರಿಗೆ ಕಾಲಿಡಬಾರದು” ಎಂದು ಆರಂಭವಾಗುವ ಟ್ರೇಲರ್, ಟೋಬಿಯ ಜಗತ್ತಿನ ಹಲವು ಮಜಲುಗಳ ಪರಿಚಯ ಮಾಡುವ ಪ್ರಯತ್ನ ಮಾಡಿದೆ.

ಟ್ರೇಲರ್‌ ವಿಭಿನ್ನವಾಗಿದ್ದು ರಾಜ್‌ ಬಿ ಶೆಟ್ಟಿ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಣಕಿದರೆ ʼಮಾರಿʼ ಆಗುವ ʼಟೋಬಿʼ ಯನ್ನು ಸೆನ್ಸಾರ್‌ ಬೋರ್ಡ್‌ ಮೆಚ್ಚಿಕೊಂಡಿದ್ದು, ಎಲ್ಲಾ ವಯೋಮನದ ಜನರು ನೋಡುವ ಸರ್ಟಿಫಿಕೇಟ್‌ ನ್ನು ಚಿತ್ರಕ್ಕೆ ನೀಡಿದೆ.

ʼಯು/ಎʼ ಪ್ರಮಾಣಪತ್ರವನ್ನು ಸೆನ್ಸಾರ್‌ ಬೋರ್ಡ್‌ ಚಿತ್ರತಂಡಕ್ಕೆ ನೀಡಿದ್ದು, ʼಮಾರಿʼಯನ್ನು ಹಿಡಿಯಲು ನೀವು ರೆಡಿಯಾ? ಎಂದು ರಾಜ್‌ ಬಿ ಶೆಟ್ಟಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡು ಪ್ರಮಾಣ ಪತ್ರದ ವಿಚಾರವನ್ನು ಹಂಚಿಕೊಂಡಿದ್ದಾರೆ.

ಈಗಾಗಲೇ ʼಟೋಬಿʼ ಗಾಗಿ ರಾಜ್‌ ಬಿ ಶೆಟ್ಟಿ ಅವರು ಹಾಕಿರುವ ಪರಿಶ್ರಮ ಸ್ಯಾಂಡಲ್‌ ವುಡ್‌ ನಲ್ಲಿ ಸದ್ದು ಮಾಡಿದೆ. ಮೂಗು ಚುಚ್ಚಿಸಿಕೊಂಡು, ರಕ್ತ ಬಂದರೂ ಅವರು ʼಟೋಬಿʼಯ ಮಾರಿ ಅವತಾರ ತಾಳಲು ಹಿಂದೆ ಸರಿದಿಲ್ಲ.

ಈ ಚಿತ್ರದ ಮೂಲಕಥೆ ಟಿ.ಕೆ ದಯಾನಂದ್‌ ಅವರದು. ರಾಜ್‌ ಬಿ ಶೆಟ್ಟಿ ರಚನೆ ಹಾಗೂ ಬಾಸಿಲ್‌ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಮಿಥುನ್‌ ಮುಕುಂದನ್‌ ಸಂಗೀತ ನಿರ್ದೇಶನ, ಪ್ರವೀಣ್‌ ಶ್ರೀಯನ್‌ ಛಾಯಾಗ್ರಹಣ – ಸಂಕಲನ ಹಾಗೂ ಅರ್ಜುನ್‌ ರಾಜ್‌ – ರಾಜಶೇಖರ್‌ ಅವರ ಸಾಹಸ ನಿರ್ದೇಶನ ಟೋಬಿ ಚಿತ್ರಕಿದೆ. ರಾಜ್‌ .ಬಿ. ಶೆಟ್ಟಿ, ಸಂಯುಕ್ತಾ ಹೊರನಾಡು, ಚೈತ್ರಾ ಆಚಾರ್‌, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್‌ ರಾಜ್‌ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

 

View this post on Instagram

 

A post shared by Raj B Shetty (@rajbshetty)

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.