Mudhol: ಸಂಸ್ಕಾರಯುತ ಬದುಕಿಗೆ ಶರಣರ ವಚನ ದಾರಿದೀಪ

ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಬದುಕು ಸಾರ್ಥಕಮಯವಾಗುತ್ತದೆ

Team Udayavani, Aug 19, 2023, 3:02 PM IST

Mudhol: ಸಂಸ್ಕಾರಯುತ ಬದುಕಿಗೆ ಶರಣರ ವಚನ ದಾರಿದೀಪ

ಮುಧೋಳ: ಪ್ರಸ್ತುತ ದಿನಮಾನದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಶರಣರು ಜೀವನದಲ್ಲಿ ನಡೆ-ನುಡಿಯನ್ನು ಒಂದಾಗಿಸಿ ಕೊಂಡವರು. ಶರಣರ ನಡೆ-ನುಡಿ ಇಂದಿನ ಸಮಾಜದ ಜನತೆಗೆ ಆದರ್ಶಪ್ರಿಯವಾಗಿದ್ದು ಎಲ್ಲರ ಬದುಕನ್ನು ರೂಪಿಸಿಕೊಳ್ಳುವಲ್ಲಿ ಶರಣರ ವಚನಗಳು ದಾರಿದೀಪವಾಗಿವೆ ಎಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಮುಧೋಳ ತಾಲೂಕಾ ಘಟಕದ ಅಧ್ಯಕ್ಷ ಡಾ| ಸಿದ್ದಣ್ಣ ಬಾಡಗಿ ಹೇಳಿದರು.

ನಗರದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಮುಧೋಳ ತಾಲೂಕು ಘಟಕದ ಸಹಯೋಗದೊಂದಿಗೆ ಕಾಲೇಜಿನ  ಸಭಾ ಭವನದಲ್ಲಿ ವಿದ್ಯಾರ್ಥಿನಿಯರಿಗಾಗಿ
ಆಯೋಜಿಸಲಾಗಿದ್ದ ವಚನ ಕಂಠಪಾಠ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ| ಮಲ್ಲಿಕಾರ್ಜುನ ಹಿರೇಮಠ, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಾದಿ ಶರಣರ ವಚನಗಳಲ್ಲಿ ಜೀವನಕ್ಕೆ ಬೇಕಾಗುವ ಮೌಲ್ಯಗಳು ಇವೆ. ಇಂತಹ ವಚನಗಳನ್ನು
ಓದುವುದರ ಮೂಲಕ ಅವುಗಳ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಬದುಕು ಸಾರ್ಥಕಮಯವಾಗುತ್ತದೆ ಎಂದರು.

ವಚನ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶ್ವನಾಥ ಮುನವಳ್ಳಿ ಅತಿಥಿ ಸ್ಥಾನವಹಿಸಿ ಮಾತನಾಡಿ 12ನೇ ಶತಮಾನದ ವಚನ ಸಾಹಿತ್ಯ ಸಮಾಜದ ಏಳ್ಗೆಯನ್ನು, ಸರ್ವರ ಉದ್ಧಾರ ಬಯಸಿದ್ದು ಅವರ ವಚನಗಳು ಜೀವನೌಷಧಿ ಇದ್ದಂತೆ ಎಂದರು.

ನಿರ್ಣಾಯಕರಾಗಿದ್ದ ಪ್ರೊ| ವ್ಹಿ.ಎಂ. ಕಿತ್ತೂರ ಮಾತನಾಡಿ ವಚನಕಾರರ ವಚನಗಳ ತತ್ವ-ಸಿದ್ಧಾಂತದ ಸಾಧ್ಯತೆಗಳನ್ನು ತಿಳಿಸಿ, ವಚನ ಕಂಠಪಾಠ ಸ್ಪರ್ಧೆಯ ನಿರ್ಣಾಯಕ ತತ್ವಗಳನ್ನು ಹೇಳಿದರು. ಕನ್ನಡ ವಿಭಾಗ ಮತ್ತು ಕನ್ನಡ ಸಂಘದ ಮುಖ್ಯಸ್ಥ ಪ್ರೊ|ಎನ್‌.ಎನ್‌.ಬಾರಕೇರ ಮಾತನಾಡಿದರು. ವಿದ್ಯಾರ್ಥಿನಿಯರಿಂದ ವಚನ ಕಂಠಪಾಠ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವಚನ ಕಂಠಪಾಠ ಸ್ಪರ್ಧೆಯಲ್ಲಿ ರಾಧಾ ಕೊಳ್ಳಣ್ಣವರ, ಶಿಲ್ಪಾ ಯಡಹಳ್ಳಿ, ನಿಂಗಮ್ಮ ಪರೀಟ ಈ ವಿದ್ಯಾರ್ಥಿನಿಯರು ಕ್ರಮವಾಗಿ
ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡರು. ಪ್ರೊ| ಬಿ.ಎನ್‌.ಬಾರಕೇರ ಸ್ವಾಗತಿಸಿದರು. ಪ್ರೊ| ಎಂ.ಎಸ್‌.ಕತ್ತಿ ವಂದಿಸಿದರು.

ಪ್ರೊ| ಕೆ.ಎಲ್‌.ಗುಡಿಮನಿ ನಿರೂಪಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಸ್ಪರ್ಧಾಳುಗಳು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.