Tirupati: ತಿರುಪತಿ ದೇವಸ್ಥಾನದ ಕಂಟ್ರೋಲ್ ರೂಮ್ಗೆ ಬಾಂಬ್ ಬೆದರಿಕೆ ಕರೆ; ವ್ಯಕ್ತಿ ಬಂಧನ
Team Udayavani, Aug 20, 2023, 10:42 AM IST
ಆಂಧ್ರಪ್ರದೇಶ: ಬಾಂಬ್ ಸ್ಪೋಟಿಸಿ ತಿರುಪತಿ ದೇವಸ್ಥಾನದ ಭಕ್ತರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆ.19 ರಂದು) ಬಂಧಿಸಿದ್ದಾರೆ.
ತಮಿಳುನಾಡಿನ ಸೇಲಂ ಮೂಲದ ಬಿ ಬಾಲಾಜಿ (39) ಬಂಧಿಸಲಾಗಿದೆ. ಈತ ಆಗಸ್ಟ್ 15 ರಂದು ಬೆಳಿಗ್ಗೆ 11.25 ರ ಸುಮಾರಿಗೆ ತಿರುಮಲ ತಿರುಪತಿ ದೇವಸ್ಥಾನ ಕಂಟ್ರೋಲ್ ರೂಮ್ ಗೆ ಕರೆ ಮಾಡಿ, ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ. ತಿರುಮಲ ತಿರುಪತಿ ದೇವಸ್ಥಾನದ ಅಲಿಪಿರಿಯ ಕಂಟ್ರೋಲ್ ರೂಂಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಕಂಟ್ರೋಲ್ ರೂಮ್ ನ ಲ್ಯಾಂಡ್ ಲೈನ್ ಗೆ ಕರೆ ಮಾಡಿದ್ದ ವ್ಯಕ್ತಿ, ಮಧ್ಯಾಹ್ನ 3 ಗಂಟೆಗೆ ಅಲಿಪಿರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿದ್ದು,100 ಭಕ್ತರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ವರದಿ ತಿಳಿಸಿದೆ.
ಬೆದರಿಕೆ ಕರೆಬಂದ ಕೂಡಲೇ ಎಚ್ಚೆತ್ತ ಪೊಲೀಸರು ಅಲಿಪಿರಿ ಚೆಕ್ಪೋಸ್ಟ್ನಲ್ಲಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಆದರೆ, ಭದ್ರತಾ ತಪಾಸಣೆ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ದೂರವಾಣಿ ಕರೆ ಕುರಿತು ಟಿಟಿಡಿಯ ವಿಜಿಲೆನ್ಸ್ ತಂಡ ಪೊಲೀಸರಿಗೆ ದೂರು ನೀಡಿದ ನಂತರ ಕರೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದಾದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದು, ಹುಸಿ ಬೆದರಕೆ ಕರೆ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಬಾಲಾಜಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಬಾಂಬ್ ಕರೆ ಮಾಡಿದ್ದನ್ನು ಆರೋಪಿ ಶನಿವಾರ ತಪ್ಪೊಪ್ಪಿಕೊಂಡಿದ್ದು, ಆ ಬಳಿಕ ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.