POLITICS: ಇಂದು BJP ಕೋರ್ ಕಮಿಟಿ ಸಭೆ- ಲೋಕಸಭೆ ಚುನಾವಣೆ ಕಾರ್ಯತಂತ್ರ
Team Udayavani, Aug 21, 2023, 5:31 AM IST
ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಸೂಕ್ತ ಸಾರಥಿ ಇಲ್ಲದೆ ಬಸವಳಿದಿರುವ ರಾಜ್ಯ ಬಿಜೆಪಿ ಘಟಕ “ಆಪರೇಷನ್ ಹಸ್ತ’ದ ಸಾಧ್ಯತೆ ಹೆಚ್ಚಿರುವ ಬೆನ್ನಲ್ಲೇ ಸೋಮವಾರ ಮಹತ್ವದ ಕೋರ್ ಕಮಿಟಿ ಸಭೆ ಕರೆದಿದೆ. ಲೋಕಸಭಾ ಚುನಾವಣೆ ತಂತ್ರಗಾರಿಕೆ ಸಹಿತ ಅನೇಕ ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆಯ ಬಳಿಕ ಮೊದಲ ಬಾರಿಗೆ ನಡೆಯುತ್ತಿರುವ ಕೋರ್ ಕಮಿಟಿ ಸಭೆ ಇದು. ಸೋಮವಾರ ಬೆಳಗ್ಗೆ 11 ಗಂಟೆಗೆ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ನಡೆಯಲಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಮತ್ತು ಕೋರ್ ಕಮಿಟಿಯ ಹಾಲಿ ಎಲ್ಲ ಸದಸ್ಯರು ಭಾಗವಹಿಸಲಿದ್ದಾರೆ.
ಆ. 23ರಂದು ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಇದರ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಮತ್ತೂಮ್ಮೆ ಚರ್ಚಿಸಲಾಗುತ್ತದೆ. ಜತೆಗೆ ಲೋಕಸಭಾ ಚುನಾವಣ ತಯಾರಿ ಬಗ್ಗೆ ಪ್ರಸ್ತಾವವಾಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆಪರೇಷನ್ ಹಸ್ತದ ಭಯ ಪಕ್ಷವನ್ನು ಕಾಡುತ್ತಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ಹಾಗೂ ಕಾಂಗ್ರೆಸ್ನ ತಂತ್ರಗಾರಿಕೆಗೆ ತಿರುಗೇಟು ನೀಡುವ ಬಗ್ಗೆ ಚರ್ಚೆಯಾಗಲಿದೆ.
ಸಂಧಾನ?
ಈ ನಡುವೆ ಕೆಲವು ಲೋಕಸಭಾ ಸದಸ್ಯರು ಹಾಗೂ ಶಾಸಕರ ಮಧ್ಯೆ ಸೃಷ್ಟಿಯಾಗಿರುವ ವೈಮನಸ್ಸು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂಬ ಭಯ ರಾಜ್ಯ ನಾಯಕರನ್ನು ಕಾಡುತ್ತಿದೆ. ಹೀಗಾಗಿ ಸಂಧಾನ ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದಾರೆ. ಬೀದರ್, ಮೈಸೂರು, ದಾವಣಗೆರೆ ಸೇರಿ ಐದಾರು ಲೋಕಸಭಾ ಕ್ಷೇತ್ರಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಂಧಾನಕ್ಕೆ ಮುಂದಾಗಿದ್ದಾರೆ.
ಕೋರ್ ಕಮಿಟಿ ಸಭೆ ಬಳಿಕ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಅವರನ್ನು ಪಕ್ಷದ ಕಚೇರಿಗೆ ಬರುವಂತೆ ಜೋಷಿ ಕರೆ ನೀಡಿದ್ದಾರೆ. ಇಬ್ಬರನ್ನು ಜತೆಗೆ ಕುಳ್ಳಿರಿಸಿ ಸಂಧಾನ ನಡೆಸುವ ಬಗ್ಗೆ ಜೋಷಿ ಯೋಜನೆ ರೂಪಿಸಿದ್ದು, ಮಾತುಕತೆ ಬಳಿಕ ಕೇಂದ್ರಕ್ಕೆ ವರದಿ ಕಳುಹಿಸುವ ಸಾಧ್ಯತೆ ಇದೆ. ಆದರೆ ಮೂಲಗಳ ಪ್ರಕಾರ ಖೂಬಾ-ಚೌಹಾಣ್ ಮಧ್ಯೆ ಪರಸ್ಪರ ಮುಖ ನೋಡದಂಥ ವಾತಾವರಣ ಸೃಷ್ಟಿಯಾಗಿದ್ದು, ಯಾರಾದರೊಬ್ಬರು ಸಭೆಗೆ ಗೈರಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.