Cauvery: ರಾಜಕೀಯ ಬದಿಗಿಟ್ಟು ಕಾವೇರಿ ವಿವಾದ ಬಗೆಹರಿಸಲಿ


Team Udayavani, Aug 20, 2023, 11:41 PM IST

water supply

ಜುಲೈಯಲ್ಲಿ ಬಂದ ಮಳೆ, ಆಗಸ್ಟ್‌ನಲ್ಲಿ ಕಾಣೆಯಾಗಿದ್ದು, ಸದ್ಯ ರಾಜ್ಯವೀಗ ಮಳೆ ಕೊರತೆ ಅನುಭವಿಸುತ್ತಿದೆ. ರಾಜ್ಯದ ಜಲಾಶಯಗಳಿಗೂ ಸರಿಯಾದ ಪ್ರಮಾಣದಲ್ಲಿ ನೀರು ಹರಿದುಬರದ ಕಾರಣ, ರಾಜ್ಯವೀಗ ಸಂಕಷ್ಟದ ಪರಿಸ್ಥಿತಿಯಲ್ಲಿರುವ ವಿಚಾರ ಎಲ್ಲರಿಗೂ ಗೊತ್ತಿರುವಂಥದ್ದೇ ಆಗಿದೆ. ಇಂಥ ಹೊತ್ತಿನಲ್ಲಿ ರಾಜ್ಯ ಸರಕಾರ ಸರ್ವಪಕ್ಷಗಳ ಸಭೆ ಕರೆದಿರುವುದು ಸ್ವಾಗತಾರ್ಹ ವಿಚಾರ.

ಮೊದಲಿನಿಂದಲೂ ನೆಲ,ಜಲ ಮತ್ತು ನಾಡು ವಿಚಾರದಲ್ಲಿ ರಾಜ್ಯದ ಪಕ್ಷಗಳು ರಾಜಕೀಯ ಬದಿಗಿಟ್ಟು ಕೆಲಸ ಮಾಡಿವೆ. ಇದು ಕರ್ನಾಟಕದ ಹೆಗ್ಗಳಿಕೆಯೂ ಹೌದು. ರಾಜ್ಯಕ್ಕೆ ಎದುರಾಗುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಿಗೆ ಸೇರಿ ಕುಳಿತು ಚರ್ಚೆ ಮಾಡಿ ನಿರ್ಧಾರಕ್ಕೆ ಬರುತ್ತವೆ. ಈ ಹಿಂದೆಯೂ ನಾವು ಇಂಥ ಹಲವಾರು ಸಂದರ್ಭಗಳಿಗೆ ಸಾಕ್ಷಿಯಾಗಿದ್ದೇವೆ. ಈಗ ಕಾವೇರಿ, ಮಹದಾಯಿ ಸೇರಿದಂತೆ ನದಿ ನೀರಿನ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸರ್ವಪಕ್ಷ ಸಭೆಯ ಮೊರೆ ಹೋಗಿದೆ. ಬುಧವಾರ ಈ ಸಭೆ ನಡೆಯಲಿದ್ದು, ಈ ಸಮಸ್ಯೆಗಳನ್ನು ಎದುರಿಸುವ ಮತ್ತು ನಿವಾರಿಸುವ ಬಗ್ಗೆ ಚಿಂತನೆ ನಡೆಸಲಿ ಎಂಬುದು ಎಲ್ಲರ ಆಶಯ.

ಮೊದಲೇ ಹೇಳಿದ ಹಾಗೆ, ಕಾವೇರಿ ಉಗಮ ಸ್ಥಾನವಾಗಿರುವ ಕೊಡಗು ಹಾಗೂ ಕೇರಳ ರಾಜ್ಯದಲ್ಲಿ ಈ ಬಾರಿ ಉತ್ತಮವಾಗಿ ಮಳೆಯಾಗಿಲ್ಲ. ಹೀಗಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರು ಸಮರ್ಪಕವಾಗಿ ಹರಿದು ಬಂದಿಲ್ಲ. ಕಳೆದ ವರ್ಷದ ಇದೇ ಅವಧಿಯಲ್ಲಿ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ತುಂಬಿದ್ದವು. ಆದರೆ ಈಗ ಮಳೆ ಕೊರತೆಯಿಂದಾಗಿ ಜಲಾಶಯಗಳು ತುಂಬಿಲ್ಲ.

ಈಗ ನೆರೆಯ ತಮಿಳುನಾಡು ಕಾವೇರಿ ನದಿ ನೀರಿಗಾಗಿ ಕ್ಯಾತೆ ತೆಗೆಯುತ್ತಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ದಿನವೂ 15 ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎಂಬ ಹಠ ಹಿಡಿದು, ಅದರಲ್ಲಿ ಭಾಗಶಃ ಯಶಸ್ವಿಯೂ ಆಗಿದೆ. ಇತ್ತೀಚೆಗೆ ರಾಜ್ಯದ ರೈತರ ವಿರೋಧದ ಹೊರತಾಗಿಯೂ ತಮಿಳುನಾಡಿಗೆ ನೀರು ಹರಿಸಲಾಗಿದೆ.

ಇದರ ಮಧ್ಯೆಯೇ ಸೋಮವಾರ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗಿದೆ. ಈಗಾಗಲೇ ತಮಿಳುನಾಡು ಸರಕಾರ ಸುಪ್ರೀಂ ಬಾಗಿಲು ಬಡಿದಿದ್ದು, ರಾಜ್ಯ ಸರಕಾರವೂ ಸುಪ್ರೀಂನಲ್ಲಿ ಸಮರ್ಥವಾದ ಮಂಡನೆಗೂ ತಯಾರಿ ನಡೆಸಿದೆ. ಈ ಎಲ್ಲದರ ಮಧ್ಯೆ, ಪದೇ ಪದೆ ನೀರಿನ ವಿಚಾರದಲ್ಲಿ ತಗಾದೆ ಎತ್ತುತ್ತಿರುವ ತಮಿಳುನಾಡು ಸರಕಾರಗಳಿಗೆ ಸಂಕಷ್ಟ ಸೂತ್ರದ ಅರಿವು ಮಾಡಿಸಬೇಕಾದ ಅಗತ್ಯವಂತೂ ಇದ್ದೇ ಇದೆ. ಈ ವಿಚಾರದಲ್ಲಿ ಸರಕಾರದ ನಿಲುವು ಗಟ್ಟಿಯಾಗಬೇಕಾದರೆ, ಎಲ್ಲ ಪಕ್ಷಗಳು ಒಂದಾಗುವ ಅನಿವಾರ್ಯತೆಯಂತೂ ಇದ್ದೇ ಇದೆ. ಕೇವಲ ಕಾವೇರಿಯೊಂದೇ ಅಲ್ಲ, ಮಹದಾಯಿ ವಿಚಾರದಲ್ಲೂ ಇದೇ ಒಗ್ಗಟ್ಟನ್ನು ರಾಜ್ಯದ ಪಕ್ಷಗಳು ತೋರಬೇಕಾಗಿದೆ.

ಸದ್ಯ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಆಡಳಿತವಿದ್ದು, ಕಾಂಗ್ರೆಸ್‌ ಮತ್ತು ಡಿಎಂಕೆ ರಾಷ್ಟ್ರೀಯ ಮಟ್ಟದಲ್ಲಿ ಪರಸ್ಪರ ಭಾಗೀದಾರಿ ಪಕ್ಷಗಳಾಗಿವೆ. ಈ ಎರಡೂ ಐಎನ್‌ಡಿಐಎ ಒಕ್ಕೂಟದಲ್ಲಿವೆ. ಅತ್ತ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವ ಗೋವಾದಲ್ಲಿ ಬಿಜೆಪಿ ಸರಕಾರವಿದೆ. ಹೀಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಮನಸ್ಸು ಮಾಡಿದರೆ, ಈ ವಿವಾದಕ್ಕೆ ಶಾಶ್ವತ ತೆರೆ ಎಳೆಯಬಹುದು. ಆದರೆ ಇದನ್ನು  ರಾಜಕೀಯ ವಿಚಾರವಾಗಿ ಪರಿಗಣಿಸದೇ ದೂರದೃಷ್ಟಿಯಿಂದ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು.

 

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.