Mangaluru ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಅನುಷ್ಠಾನ ಹಂತದಲ್ಲಿ ಕರಾವಳಿಯ 8 ಯೋಜನೆ


Team Udayavani, Aug 21, 2023, 7:00 AM IST

Mangaluru ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಅನುಷ್ಠಾನ ಹಂತದಲ್ಲಿ ಕರಾವಳಿಯ 8 ಯೋಜನೆ

ಮಂಗಳೂರು: ಗ್ರಾಮಾಂತರ ಭಾಗದ ನೀರಿನ ಸಮಸ್ಯೆ ಪರಿಹಾರಕ್ಕಾಗಿ “ಬಹು ಗ್ರಾಮ ಕುಡಿಯುವ ನೀರಿನ ಯೋಜನೆ’ಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಹಾಗೂ ಉಡುಪಿ ಜಿಲ್ಲೆಯಲ್ಲಿ 2 ಯೋಜನೆ ಅನುಷ್ಠಾನ ಭಾಗ್ಯದಲ್ಲಿದೆ.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದಿಂದ ದ.ಕ. ಜಿಲ್ಲೆಯ ಕಿನ್ನಿಗೋಳಿ, ಮಳವೂರು, ಕರೋಪಾಡಿ, ಸಂಗಬೆಟ್ಟು, ಮಾಣಿ, ಸರಪಾಡಿ ಹಾಗೂ ನರಿಕೊಂಬು ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಂಡಿದೆ. ಈ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಇದೇ ಸ್ವರೂಪದಲ್ಲಿ ಹೊಸತಾಗಿ ಮೂಡುಬಿದಿರೆ, ಉಳಾಯಿಬೆಟ್ಟು ಹಾಗೂ ಇಳಂತಿಲದಲ್ಲಿ ಯೋಜನೆಯ ಪ್ರಾರಂಭಿಕ ಕಾಮಗಾರಿ ಆರಂಭಗೊಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕಾರ್ಕಳ, ಹೆಬ್ರಿ, ಕಾಪು ತಾಲೂಕಿಗೆ ಒಳಪಟ್ಟ ಹೊಸ ಯೋಜನೆ ಅನುಷ್ಠಾನ ಹಂತದಲ್ಲಿದೆ.

ಟೆಂಡರ್‌ ಹಂತದ 3 ಯೋಜನೆ
ದ.ಕ. ಜಿಲ್ಲೆಯ ಅಲಂಕಾರು ಹಾಗೂ ಇತರ 299 ಜನವಸತಿಗಳಿಗೆ (ಕಡಬ ತಾಲೂಕಿನ 203, ಪುತ್ತೂರು ತಾಲೂಕಿನ 53 ಹಾಗೂ ಬೆಳ್ತಂಗಡಿ ತಾಲೂಕಿನ 44) 230 ಕೋ.ರೂ ಅಂದಾಜಿನಲ್ಲಿ ಕುಮಾರಧಾರ ನದಿಗೆ ಅಡ್ಡಲಾಗಿ ಶಾಂತಿಮೊಗರುವಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಬಂಟ್ವಾಳ ತಾಲೂಕಿನ ಅಳಕೆ ಮತ್ತು ಇತರ 123 ಜನವಸತಿ, ಪುತ್ತೂರು ತಾಲೂಕಿನ 319, ಕಡಬ ತಾಲೂಕಿನ 51 ಹಾಗೂ ಸುಳ್ಯ ತಾಲೂಕಿನ 243 ಜನವಸತಿಗಳಿಗೆ ಸೇರಿ 780 ಕೋ.ರೂ. ಅಂದಾಜಿನಲ್ಲಿ ನೇತ್ರಾವತಿ ನದಿಗೆ ‌ ಕಾಗೆಕಾನ ಗ್ರಾಮದ ಸಮೀಪ ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆ ಇದಾಗಿದೆ. ಹಾಗೂ ಕಡಬ ತಾಲೂಕಿನ ಕುಟ್ರಾಪ್ಪಾಡಿ ಮತ್ತು ಇತರ 131 ಜನವಸತಿ ಪ್ರದೇಶಗಳಿಗೆ 102 ಕೋ.ರೂ ವೆಚ್ಚದಲ್ಲಿ ಗುಂಡ್ಯ ನದಿಗೆ ಕೊಲ್ಯದಕಟ್ಟೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆ ಟೆಂಡರ್‌ ಹಂತದಲ್ಲಿದೆ.

ಅನುಷ್ಠಾನ ಹಂತದಲ್ಲಿ 5 ಯೋಜನೆ
ಈ ಮಧ್ಯೆ, ಈಗಾಗಲೇ ಆರಂಭವಾಗಿರುವ ಬೆಳ್ತಂಗಡಿ ತಾಲೂಕಿನ ಇಳಂತಿಲ ಹಾಗೂ ಇತರ 209 ಜನವಸತಿಗಳಿಗೆ 176 ಕೋ.ರೂ ಅಂದಾಜಿನಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೇತ್ರಾವತಿ ನದಿಗೆ ಪೆರ್ನೆ ಗ್ರಾಮದ ಬಿಳಿಯೂರು ಬಳಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜಿಸಲಾಗಿದೆ. ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ 132 ಜನವಸತಿ ಪ್ರದೇಶಗಳಿಗೆ 91 ಕೋ.ರೂ ವೆಚ್ಚದಲ್ಲಿ ಕೈಗೆತ್ತಿಕೊಂಡ ಉಳಾಯಿಬೆಟ್ಟು ಯೋಜನೆಯೂ ಶೇ.10 ಪ್ರಗತಿಯಲ್ಲಿದೆ. ಇನ್ನು, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನ 583 ಜನವಸತಿ ಪ್ರದೇಶಕ್ಕೆ 183 ಕೋ.ರೂ ವೆಚ್ಚದಲ್ಲಿ ನೀರುಣಿಸುವ ಯೋಜನೆ ಶೇ.50ರಷ್ಟು ಪೂರ್ಣವಾಗಿದೆ.

ಉಡುಪಿಗೆ 2 ಬಹು ಗ್ರಾಮ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ 788 ಗ್ರಾಮೀಣ ಜನವಸತಿ ಹಾಗೂ ಬೈಂದೂರು ಪಡುವರಿ ಹಾಗೂ ಯಡ್ತರೆ ಪಟ್ಟಣದ ಜನವಸತಿಗೆ 613 ಕೋ.ರೂ. ಯೋಜನೆಯಲ್ಲಿ ಕುಡಿಯುವ ನೀರು ಒದಗಿಸುವುದು ಹಾಗೂ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 1904 ಜನವಸತಿ ಪ್ರದೇಶಗಳಿಗೆ 1600 ಕೋ.ರೂ ಅಂದಾಜು ವೆಚ್ಚದ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಬಹು ಗ್ರಾಮ “ಬಹು ವೇಗ’ ಪಡೆಯಲಿ!
ಇತ್ತೀಚಿನ ವರ್ಷಗಳಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆ ನೀರಿನ ಸಮಸ್ಯೆ ಎದುರಿಸುತ್ತಿದೆ. ನೇತ್ರಾವತಿ ಸಹಿತ ಇತರ ನದಿಗಳು ವರ್ಷದಿಂದ ವರ್ಷಕ್ಕೆ ಸೊರಗುತ್ತಿವೆ. ಗ್ರಾಮಾಂತರ ಭಾಗದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ, ಎರಡು ಜಿಲ್ಲೆಯ ಗ್ರಾಮಾಂತರ ಭಾಗದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಬಹು ಗ್ರಾಮ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಎರಡೂ ಯೋಜನೆಗಳು ಅನುಷ್ಠಾನ ಹಂತ ಮಾತ್ರ ಕುಂಟುತ್ತ ಸಾಗುತ್ತಿದೆ ಎಂಬುದು ಸ್ಥಳೀಯರ ಆಕ್ಷೇಪ.

8 ಯೋಜನೆ ಅನುಷ್ಠಾನ
ದ.ಕ. ಜಿಲ್ಲೆಯಲ್ಲಿ ಹೊಸದಾಗಿ 6 ಹಾಗೂ ಉಡುಪಿ ಜಿಲ್ಲೆಯಲ್ಲಿ 2 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಉದ್ದೇಶಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ. ಮಳೆ ಕಾರಣದಿಂದ ತಡವಾಗಿತ್ತು. ಯೋಜನೆಗೆ ವೇಗ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ವಹಿಸಲಾಗುವುದು.
– ಎನ್‌.ಡಿ. ರಘುನಾಥ್‌ ಹಾಗೂ ಉದಯ್‌ ಕುಮಾರ್‌ ಶೆಟ್ಟಿ

ಕಾರ್ಯನಿರ್ವಾಹಕ ಎಂಜಿನಿಯರ್‌, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ
-ದ.ಕ. ಹಾಗೂ ಉಡುಪಿ

– ದಿನೇಶ್‌ ಇರಾ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.