Mangaluru University; ಆಗಸ್ಟ್‌ 23ರಿಂದ ಪದವಿ ತರಗತಿ ಆರಂಭಕ್ಕೆ ಶತಪ್ರಯತ್ನ

ಮತ್ತಷ್ಟು ಮುಂದೂಡಿಕೆಯಾದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ

Team Udayavani, Aug 21, 2023, 7:15 AM IST

Mangaluru University; ಆಗಸ್ಟ್‌ 23ರಿಂದ ಪದವಿ ತರಗತಿ ಆರಂಭಕ್ಕೆ ಶತಪ್ರಯತ್ನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಒಳಪಟ್ಟಿರುವ ಪದವಿ ಕಾಲೇಜುಗಳಲ್ಲಿ 2023-24ನೇ ಸಾಲಿನ ತರಗತಿ ಗಳನ್ನು ಆ. 23ರಿಂದ ಆರಂಭಿಸಲು ವಿ.ವಿ.ಯು ಶತಪ್ರಯತ್ನ ನಡೆಸುತ್ತಿದೆ.

ಈಗಾಗಲೇ ನಡೆದಿರುವ ಪದವಿ ಪರೀಕ್ಷೆ ಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ ಯಾದರೂ ಪದವಿ ತರಗತಿಗಳ ಆರಂಭವನ್ನು ಇನ್ನಷ್ಟು ಮುಂದೂಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗಲಿದೆ. ಹೀಗಾಗಿ ಆ. 23ರಿಂದ ಪದವಿ ತರಗತಿಗಳ ಆರಂಭಕ್ಕೆ ಸರ್ವ ಸಿದ್ಧತೆ ನಡೆಸುವಂತೆ ವಿ.ವಿ.ಯು ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಿದೆ.

ಮೊದಲಿಗೆ 2023-24ನೇ ಸಾಲಿನ ಪದವಿ ತರಗತಿಗಳನ್ನು ಆ. 1ರಿಂದ ಆರಂಭಿಸಲು ನಿರ್ಧರಿಸ ಲಾಗಿತ್ತು. ಆದರೆ ಪದವಿ ಪರೀಕ್ಷೆಗಳು ನಡೆಯುವ ಕಾರಣ ಇದನ್ನು ಆ. 17ಕ್ಕೆ ಮುಂದೂಡಲಾಗಿತ್ತು. ಕೊನೆಗೆ ಅದೂ ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಆ. 8ರಂದು ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಆ. 23ರಿಂದ ಪದವಿ ತರಗತಿ ಆರಂಭದ ಬಗ್ಗೆ ತಿಳಿಸಲಾಗಿತ್ತು.

ಮೌಲ್ಯಮಾಪನ ಸವಾಲು
ಈಗಾಗಲೇ ನಡೆದ ಪದವಿ ಪರೀಕ್ಷೆಯ ಮೌಲ್ಯಮಾಪನ ಸದ್ಯ ಕೊನೆಯ ಹಂತದಲ್ಲಿದೆ. ಕೆಲವು ಉಪನ್ಯಾಸಕರು ಮೌಲ್ಯಮಾಪನದಲ್ಲಿ ತೊಡಗಿಕೊಂಡಿದ್ದು, ಆ. 23ಕ್ಕೆ ಕಾಲೇಜು ಆರಂಭವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಕಾಲೇಜು ಆರಂಭದ ಸಂದರ್ಭ ಸಂಬಂಧಪಟ್ಟ ಕಾಲೇಜಿನವರು ಈ ಸವಾಲನ್ನು ಎದುರಿಸಬೇಕಾಗಿದೆ.

ಮಂಗಳೂರು ವಿ.ವಿ. ಕುಲಸಚಿವ ರಾಜು ಚಲ್ಲಣ್ಣವರ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಪದವಿ ತರಗತಿಗಳು ಆ. 23ರಿಂದ ಆರಂಭವಾಗಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈಗಾಗಲೇ ಮೌಲ್ಯಮಾಪನ ಬಹುತೇಕ ಮುಕ್ತಾಯ ಹಂತದಲ್ಲಿದೆ. ಆದರೆ ಯುಯುಸಿಎಂಎಸ್‌ ಸರ್ವರ್‌ ಸ್ವಲ್ಪ ನಿಧಾನಗತಿಯಲ್ಲಿದ್ದು, ಅಂಕ ಅಪ್‌ಲೋಡ್‌ ಮಾಡಲು ಕೊಂಚ ಸಮಸ್ಯೆ ಆಗುತ್ತಿದೆ. ಅದರ ಬಗ್ಗೆ ನಿಗಾ ಇರಿಸಲಾಗುವುದು. ತರಗತಿ ಆರಂಭವನ್ನು ಮತ್ತೆ ಮುಂದೂಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.

ಮಂಗಳೂರು ವಿ.ವಿ.ವ್ಯಾಪ್ತಿಯಲ್ಲಿ ಆ. 23ರಿಂದ ಪದವಿ ತರಗತಿ ಆರಂಭಿಸಲೇ ಬೇಕಿದೆ. ಒಂದು ವೇಳೆ ಮತ್ತೆ ಮುಂದೂಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗುತ್ತದೆ. ಹೀಗಾಗಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಕ್ಷಿಪ್ರವಾಗಿ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ.
-ಪ್ರೊ| ಜಯರಾಜ್‌ ಅಮೀನ್‌
ಕುಲಪತಿ (ಪ್ರಭಾರ), ಮಂಗಳೂರು ವಿ.ವಿ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.