Karwar ನೌಕಾ ನೆಲೆಯಲ್ಲಿ ನಿರ್ಮಿಸಿದ ಬಹುಮಹಡಿಯ 600 ಫ್ಲಾಟ್ಸ್ ಉದ್ಘಾಟನೆ


Team Udayavani, Aug 21, 2023, 9:48 PM IST

1-sadasd

ಕಾರವಾರ: ನೌಕಾನೆಲೆ ಐಎನ್ ಎಸ್ ಕದಂಬ ಪ್ರದೇಶ ವ್ಯಾಪ್ತಿಯ ಅಮದಳ್ಳಿ ಮತ್ತು ಅರ್ಗಾ ನೇವಲ್ ಬೇಸ್‌ನಲ್ಲಿ ತಲಾ 600 ಫ್ಲಾಟ್‌ಗಳನ್ನು ಒಳಗೊಂಡ ಎರಡು ಬಹುಮಹಡಿ ವಸತಿ ಕಟ್ಟಡಗಳನ್ನು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್.ಹರಿ ಕುಮಾರ್ ಉದ್ಘಾಟಿಸಿದರು.

ಇಲ್ಲಿನ‌ ನೌಕಾನೆಲೆಯ ಆವರಣದಲ್ಲಿ ಏರ್ಪಟ್ಟ ಸಮಾರಂಭದಲ್ಲಿ ಅವರು ವಸತಿ ಸಂಕೀರ್ಣಗಳನ್ನು ನೇವಿ ಸೇಲರ್ಸ ಮತ್ತು ಅವರ ಕುಟುಂಬದವರಿಗೆ ಅರ್ಪಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ನೌಕಾ ಸಿಬ್ಬಂದಿ ಮತ್ತು ರಕ್ಷಣಾ ನಾಗರಿಕರ ಕುಟುಂಬಗಳು ಸಾಕ್ಷಿಯಾಗಿದ್ದವು.

ಬಹುಮಹಡಿಯ 10 ವಸತಿ ಗೋಪುರಗಳನ್ನು ಐಜಿಬಿಸಿ ಗೋಲ್ಡ್ ರೇಟಿಂಗ್‌ಗೆ ಅನುಗುಣವಾಗಿ ಆಧುನಿಕ ಸೌಕರ್ಯಗಳ ಸಹಿತ ನಿರ್ಮಿಸಲಾಗಿದೆ. ಸುಧಾರಿತ ಒಳಾಂಗಣಗಳ ಸಹಿತ ವಸತಿ ಸಂಕೀರ್ಣಗಳನ್ನು ರೂಪಿಸಲಾಗಿದೆ ಎಂದು ಅವರು ನುಡಿದರು.

ಈ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳು ಸೀಬರ್ಡ ನೌಕಾನೆಲೆಯ ಎರಡನೇ ಹಂತದ ಯೋಜನೆಯ ಎ ಭಾಗದ ಕಾರ್ಯಗಳಾಗಿವೆ. ಈ ವಸತಿ ಸಂಕೀರ್ಣಗಳಲ್ಲಿ ಸುಮಾರು 10,000 ನೇವಿ ಸೇಲರ್ಸ ಮತ್ತು ನೇವಿ ಸಿಬ್ಬಂದಿ ಹಾಗೂ ಅವರ ಕುಟುಂಬಗಳ ವಾಸಕ್ಕೆ ನಿರ್ಮಿಸಲಾಗಿದೆ ಎಂದು ನೇವಿ ಮುಖ್ಯಸ್ಥರು ನುಡಿದರು.

ಹತ್ತು ಸಾವಿರ ಕುಟುಂಬಗಳ ವಾಸಸ್ಥಾನವನ್ನು ನೌಕಾನೆಲೆ ಹೊಂದಿದೆ.‌ ಈ ಬಹುಮಹಡಿ ಕಟ್ಟಡ ನಿರ್ಮಾಣ ದಿಂದ
ಹತ್ತು ಹಲವು ಅಭಿವೃದ್ಧಿಗೆ ಕಾರಣವಾಗಿದೆ. ಹಲವು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಯಾಗಿವೆ. ಯೋಜನೆಯು ಆತ್ಮನಿರ್ಭರ ಭಾರತದೊಂದಿಗೆ ಹೊಲಿಸಬಹುದು ಎಂದರು. ದೇಶೀಯವಾಗಿ ಶೇ.90 ಕ್ಕಿಂತ ಹೆಚ್ಚಿನ ವಸ್ತುಗಳನ್ನು ನಿರ್ಮಾಣದಲ್ಲಿ ಬಳಸಲಾಗಿದೆ.

ಉನ್ನತ ಗುಣಮಟ್ಟದ ರಕ್ಷಣಾ ಮೂಲಸೌಕರ್ಯಗಳು ಪ್ರಾಜೆಕ್ಟ್ ಸೀಬರ್ಡ್ ನಲ್ಲಿ ಆಗುತ್ತಿರುವುದನ್ನು ಈ ನಿಟ್ಟಿನಲ್ಲಿ ನಡೆದ ಪ್ರಯತ್ನವನ್ನು ನೌಕಾದಳ ಮುಖ್ಯಸ್ಥ ಹರಿ ಕುಮಾರ್ ಶ್ಲಾಘಿಸಿದರು.ಇಲ್ಲಿ ಆಗಬೇಕಾದ ಉಳಿದ ಸೌಲಭ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅವರು ಸಂಬಂಧಿತರಿಗೆ ಸೂಚಿಸಿದರು.

ಆರಂಭದಲ್ಲಿ ನೇವಿ ಮುಖ್ಯಸ್ಥ ಹರಿ ಕುಮಾರ್ ಅವರನ್ನು ಕರ್ನಾಟಕ ನೇವಿ ಕಮಾಂಡರ್ ಸ್ವಾಗತಿಸಿದರು. ನೇವಿಯ ವಿವಿಧ ವಿಭಾಗದ ಮುಖ್ಯಸ್ಥರು,ಹಿರಿಯ ನೇವಿ ಅಧಿಕಾರಿಗಳು, ಸೀಬರ್ಡ ನೌಕಾನೆಲೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.