Raju Punjabi: ಜೀವ ತೆಗೆದ ಜಾಂಡೀಸ್; 40 ಹರೆಯದಲ್ಲಿ ಕೊನೆಯುಸಿರೆಳೆದ ಜನಪ್ರಿಯ ಗಾಯಕ
Team Udayavani, Aug 22, 2023, 12:51 PM IST
ಚಂಡಿಗಢ: ತನ್ನ ಹಾಡುಗಳಿಂದ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ ಗಾಯಕ ರಾಜು ಪಂಜಾಬಿ (40) ಮಂಗಳವಾರ (ಆ.22 ರಂದು) ಕೊನೆಯುಸಿರೆಳೆದಿದ್ದಾರೆ.
ರಾಜು ಪಂಜಾಬಿ ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಜಾಂಡೀಸ್ ಕಾಯಲೆಗೆ ಹರಿಯಾಣದ ಹಿಸಾರ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನಕಳೆದಂತೆ ಅವರ ಆರೋಗ್ಯ ಹದಗೆಟ್ಟಿತ್ತು. ವೆಂಟಿಲೇಟರ್ ವ್ಯವಸ್ಥೆಯಲ್ಲಿ ಇರಿಸುವ ಹಂತಕ್ಕೆ ಅವರ ಆರೋಗ್ಯ ಹದಗೆಟ್ಟಿತ್ತು. ಮಂಗಳವಾರ ಅವರು ಕೊನೆಯುಸಿರೆಳೆದಿದ್ದಾರೆ.
ಹರ್ಯಾಣದಲ್ಲಿ ರಾಜು ಪಂಜಾಬಿ ಗಾಯಕರಾಗಿ ಅಪಾರ ಜನಪ್ರಿಯರಾಗಿದ್ದರು. ತನ್ಜ ಹಾಡುಗಳಿಂದ ಖ್ಯಾತರಾಗಿದ್ದ ಅವರು ಸಣ್ಣ ವಯಸ್ಸಿನಲ್ಲೇ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದರು.
ʼʼಆಚಾ ಲಗೇ ಸೆʼʼ, ʼʼದೇಸಿ ದೇಸಿʼʼ, ʼʼತು ಚೀಜ್ ಲಜವಾಬ್ʼʼ, ʼʼಲಾಸ್ಟ್ ಪೆಗ್ʼʼ ಮತ್ತು ʼʼಭಾಂಗ್ ಮೇರೆ ಯಾರಾ ನೇʼʼ ಮುಂತಾದ ಹಾಡುಗಳಿಂದ ಜನಮನದಲ್ಲಿ ಖ್ಯಾತರಾಗಿದ್ದರು.
ಇದನ್ನೂ ಓದಿ: Chiranjeevi: ಮೆಗಾಸ್ಟಾರ್ ವೃತ್ತಿ ಜೀವನದಲ್ಲೇ ದುಬಾರಿ ಸಿನಿಮಾ ʼMega 157′ ಪೋಸ್ಟರ್ ಔಟ್
ರಾಜು ಪಂಜಾಬಿ ಅವರು ಇತ್ತೀಚೆಗೆ (ಆ.12 ರಂದು) ‘ಆಪ್ಸೆ ಮಿಲ್ಕೆ ಯಾರಾ ಹಮ್ಕೊ ಅಚ್ಚಾ ಲಗಾ ಥಾ’ ಹಾಡನ್ನು ರಿಲೀಸ್ ಮಾಡಿದ್ದರು.
ಗಾಯಕನ ನಿಧನದ ಸುದ್ದಿ ಕೇಳಿ ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಟ್ವಿಟರ್ ನಲ್ಲಿ ಖ್ಯಾತ ಹರ್ಯಾನ್ವಿ ಗಾಯಕ ಮತ್ತು ಸಂಗೀತ ನಿರ್ಮಾಪಕ ರಾಜು ಪಂಜಾಬಿ ಜಿ ಅವರ ನಿಧನವು ಹರಿಯಾಣ ಸಂಗೀತ ಉದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಓಂ ಶಾಂತಿ!” ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಸ್ಥಳೀಯ ರಾವತ್ಸರ್ ಖೇಡಾಕ್ಕೆ ಕೊಂಡೊಯ್ಯಲಾಗುತ್ತದೆ, ಅಲ್ಲಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ. ಅವರು ಪ್ರಸ್ತುತ ಹಿಸಾರ್ನ ಆಜಾದ್ನಗರದಲ್ಲಿ ವಾಸಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.