ಗ್ಲಾಮರ್ ಗಾಡಿಯಲ್ಲಿ ಮಾರಕಾಸ್ತ್ರ: ಡಬ್ಬಿಂಗ್ ರೈಟ್ಸ್ನಲ್ಲಿ ನಿರ್ಮಾಪಕರು ಅರ್ಧ ಸೇಫ್
Team Udayavani, Aug 22, 2023, 4:33 PM IST
ಮಾಲಾಶ್ರೀ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಮಾರಕಾಸ್ತ್ರ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಗ್ಲಾಮರಸ್ ಹಾಡೊಂದನ್ನು ಬಿಡುಗಡೆ ಮಾಡಿದೆ. ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ “ಗ್ಲಾಮರ್ ಗಾಡಿ’ ಎಂಬ ಹಾಡು ಇತ್ತೀಚೆಗೆ ಬಿಡುಗಡೆ ಯಾಯಿತು.
ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಹೀನಾ ಎಂ ಪಂಚಾಲ್ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ನಟರಾಜ್, “ನಾನು ಸಿನಿಮಾ ಮಾಡುತ್ತೇನೆ ಎಂದಾಗ, ಬೇಡ ಅಂದವರೆ ಹೆಚ್ಚು. ಆದರೆ ಅವರುಗಳು ಹೇಳಿದ ತರಹ ಅನುಭವ ನನಗೆ ಈ ಚಿತ್ರದಲ್ಲಿ ಆಗಿಲ್ಲ. ಏಕೆಂದರೆ ಒಳ್ಳೆಯ ತಂಡದ ಸಹಕಾರ. ಮಾಲಾಶ್ರೀ ಅವರು ಸೇರಿದಂತೆ ಬಹು ದೊಡ್ಡ ತಾರಾಬಳಗ ಹೊಂದಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು.
ಗುರುಮೂರ್ತಿ ಸುನಾಮಿ ಈ ಚಿತ್ರದ ನಿರ್ದೇಶಕರು, “ಇದು ನನ್ನ ಮೊದಲ ಚಿತ್ರ. ಮಾರಕಾಸ್ತ್ರ ಒಂದು ಕೌಟುಂಬಿಕ ಚಿತ್ರ. ಇದರಲ್ಲಿ ಆ್ಯಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ. ಈಗಾಗಲೇ ಟೀಸರ್ ಎಲ್ಲರ ಮನ ಗೆದ್ದಿದೆ. ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರಲಿದೆ’ ಎಂದರು.
ಚಿತ್ರದಲ್ಲಿ ಏಳು ಹಾಡುಗಳಿದೆ. ಆ ಪೈಕಿ ನಾಲ್ಕು ಹಾಡುಗಳನ್ನು ನಟರಾಜ್ ಅವರೆ ಹಾಡಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡನ್ನು ನಾನೇ ಬರೆದಿದ್ದೇನೆ. ಅನನ್ಯಾ ಭಟ್ ಹಾಡಿದ್ದಾರೆ ಎನ್ನುವುದು ಸಂಗೀತ ನಿರ್ದೇಶಕ ಮಂಜು ಕವಿ ಮಾತು.
ಚಿತ್ರದ ಕ್ರಿಯೇಟಿವ್ ಹೆಡ್ ಆಗಿ ನೃತ್ಯ ನಿರ್ದೇಶಕ ಧನುಕುಮಾರ್ ಇಡೀ ಸಿನಿಮಾಕ್ಕೆ ಸಾಥ್ ನೀಡಿದ್ದಾರೆ. ನಿರ್ಮಾಪಕರನ್ನು ಒಂದು ಹಂತಕ್ಕೆ ಸೇಫ್ ಮಾಡಿದ್ದಾರೆ. ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಒಂದು ಕೋಟಿ ಎಂಭತ್ತು ಲಕ್ಷ ರೂಪಾಯಿಗೆ ಮಾರಾಟ ಮಾಡಿ ಕೊಟ್ಟಿದ್ದಾರೆ. ಚಿತ್ರದ ಛಾಯಾಗ್ರಹಕ ಅರುಣ್ ಸುರೇಶ್, ಸಂಕಲನಕಾರ ವಿಶ್ವ ಹಾಗೂ ಚಿತ್ರದಲ್ಲಿ ನಟಿಸಿರುವ ಆನಂದ್ ಆರ್ಯನ್, ರವಿಚೇತನ್, ಮೈಕೊ ನಾಗರಾಜ್, ಮನಮೋಹನ್ ರೈ, ಭರತ್ ಮುಂತಾದವರು ಮಾರಕಾಸ್ತ್ರ ಚಿತ್ರದ ಕುರಿತು ಮಾತನಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್ 69ನೇ ಹುಟ್ಟುಹಬ್ಬ
Junior World Shooting: ಖುಷಿಗೆ ಕಂಚು
State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ
Irani Cup:ಅಭಿಮನ್ಯು ಅಜೇಯ 151 ರನ್: 102 ಡಿಗ್ರಿ ಜ್ವರವಿದ್ದೂ ಶಾರ್ದೂಲ್ ಬ್ಯಾಟಿಂಗ್
Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.