Karnataka: ಸಾಹಿತಿಗಳಿಗೆ ಜೀವಬೆದರಿಕೆ ಪತ್ರ – ಗೃಹಸಚಿವರ ಭೇಟಿ
Team Udayavani, Aug 22, 2023, 11:12 PM IST
ಬೆಂಗಳೂರು: ಸಾಹಿತಿಗಳಿಗೆ ಬಂದಿರುವ ಬೆದರಿಕೆ ಕರೆ ಹಾಗೂ ಪತ್ರದ ಬಗ್ಗೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
ಡಾ| ಕೆ.ಮರುಳಸಿದ್ದಪ್ಪ, ಪ್ರೊ| ಎಸ್.ಜಿ. ಸಿದ್ದರಾಮಯ್ಯ, ಬಂಜೆಗೆರೆ ಜಯಪ್ರಕಾಶ್ ಸೇರಿ ಹಿರಿಯ ಸಾಹಿತಿಗಳ ಜತೆಗೆ ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದ ಹೆಸರಾಂತ ಸಾಹಿತಿಗಳ ಪೈಕಿ ಕೆಲವರು ಮರಳುಸಿದ್ದಪ್ಪ ನೇತೃತ್ವದಲ್ಲಿ ಭೇಟಿ ಮಾಡಿದ್ದರು. ತಮಗೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಹದಿನೈದು ದಿನಗಳ ಹಿಂದೆ ಪತ್ರ ಬರೆದಿದ್ದರು. ಅನೇಕ ಸಾಹಿತಿಗಳಿಗೆ ಈ ರೀತಿ ಬೆದರಿಕೆ ಪತ್ರ, ಕರೆಗಳು ಬಂದಿರುವ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದಾರೆ. ನಮ್ಮನ್ನು ಯಾವ ರೀತಿ ರಕ್ಷಣೆ ಮಾಡುತ್ತೀರಿ? ಎಂದು ಕೇಳಿದರು ಎಂದು ವಿವರಿಸಿದರು.
ಈ ಬೆದರಿಕೆ ಪತ್ರದ ಪ್ರತಿಯನ್ನು ನಾನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಿದ್ದೇನೆ. ಅನೇಕ ಬೆದರಿಕೆ ಪತ್ರಗಳ ಪ್ರತಿ ಕೊಟ್ಟಿ¨ªಾರೆ. ಯಾವ ರೀತಿ ಬೆದರಿಕೆ ಹಾಕುತ್ತಾರೆ. ಯಾವ ರೀತಿ ಮಾತನಾಡುತ್ತಾರೆ ಎಂದು ತಿಳಿದುಕೊಂಡಿದ್ದೇನೆ. ಇದು ಸೈದ್ಧಾಂತಿಕ ವಿಚಾರ ಎಂಬುದನ್ನು ನಾವು ಗಮನಿಸಿದ್ದೇವೆ. ಒಂದು ವರ್ಗ ಒಂದು ಸಿದ್ಧಾಂತ ನಂಬಿದ್ರೆ, ಇನ್ನೊಂದು ವರ್ಗ ವಿರುದ್ಧವಾಗಿದೆ ಎಂದರು.
ಪ್ರತ್ಯೇಕ ತಂಡ ರಚನೆ-ಭರವಸೆ
ನಾವು ಸಾಹಿತಿಗಳ ರಕ್ಷಣೆ ಮಾಡುತ್ತೇವೆ. ಪರ್ಸನಲ್ ಸೆಕ್ಯೂರಿಟಿ, ಗನ್ ಮ್ಯಾನ್ ಸೌಲಭ್ಯ ಕೊಡುತ್ತೇವೆ ಎಂದು ಹೇಳಿದ್ದೇನೆ. ಬಂದಿರುವ ದೂರುಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುತ್ತೇವೆ. ಇದಕ್ಕೆ ಪ್ರತ್ಯೇಕವಾದ ತಂಡ ರಚನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.