BJP: ನೀರು ಬಿಟ್ಟು ಸರ್ವಪಕ್ಷ ಸಭೆ ಕರೆದ ಸರಕಾರ: ಸರಕಾರದ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ


Team Udayavani, Aug 22, 2023, 11:14 PM IST

BJP FLAG 1

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಬಳಿಕ ರಾಜ್ಯ ಸರಕಾರ ಸರ್ವಪಕ್ಷ ಸಭೆ ಕರೆದಿದೆ. ಆದರೂ ನಾವು ಬಹಿಷ್ಕರಿಸುವುದಿಲ್ಲ. ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿ, ನಮ್ಮ ನಿಲುವು ತಿಳಿಸುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವರಾದ ಆರ್‌. ಅಶೋಕ್‌, ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ| ಅಶ್ವತ್ಥನಾರಾಯಣ ಸೇರಿ ಹಲವು ನಾಯಕರು ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ನಾವು ಸರ್ವಪಕ್ಷ ಸಭೆಯನ್ನು ಬಹಿಷ್ಕಾರ ಮಾಡುವುದಿಲ್ಲ. ಸಭೆಯಲ್ಲಿ ಪಾಲ್ಗೊಂಡು ನಮ್ಮ ನಿಲುವು ತಿಳಿಸುತ್ತೇವೆ ಎಂದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಸರಕಾರ ಪೂರ್ವಾಪರ ವಿವೇಚನೆ ಇಲ್ಲದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಮಂಡ್ಯ ಭಾಗದ ರೈತರಿಗೆ ಅನ್ಯಾಯ ಮಾಡಲಾಗಿದೆ. ರಾಜ್ಯದ ನೀರಾವರಿ ಸಚಿವರು ಮತ್ತು ಕೃಷಿ ಸಚಿವರಿಗೆ ರಾಜ್ಯದ ರೈತರ ಕುರಿತು ಕಾಳಜಿ ಇಲ್ಲ. ತಮಿಳುನಾಡು ಸರಕಾರ ರಿಟ್‌ ಅರ್ಜಿ ದಾಖಲಿಸಿದ ತತ್‌ಕ್ಷಣವೇ ಯಥೇತ್ಛವಾಗಿ ನೀರು ಬಿಟ್ಟಿ¨ªಾರೆ. ಸುಮಾರು 12-13 ಟಿಎಂಸಿ ನೀರನ್ನು ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿಗೆ ಕುರುವೈ ಬೆಳೆಗೆ 32 ಟಿಎಂಸಿ ಮಾತ್ರ ನೀರನ್ನು ಕೊಡಬೇಕಿದೆ. 1.8 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬೆಳೆ ಬೆಳೆಯಬೇಕೆಂದು ಸೂಚಿಸಿದೆ. ಆದರೆ, ಅರ್ಜಿ ಹಾಕುವುದಕ್ಕೆ ಮೊದಲು 7.4 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದು ತಮಿಳುನಾಡಿನ ಡ್ಯಾಂನಲ್ಲಿದ್ದ 30-32 ಟಿಎಂಸಿ ನೀರನ್ನು ಖಾಲಿ ಮಾಡಿ, ಸುಪ್ರೀಂ ಕೋರ್ಟ್‌ಗೆ ನೀರಿಗಾಗಿ ಅರ್ಜಿ ಸಲ್ಲಿಸಿದ್ಧಾರೆ ಎಂದು ಆರೋಪಿಸಿದರು.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಜತೆ ಒಳ ಒಪ್ಪಂದ ಮಾಡಿಕೊಂಡು ನಮ್ಮ ರೈತರಿಗೆ ದ್ರೋಹ ಬಗೆಯಬೇಡಿ. ಡಿ.ಕೆ. ಶಿವಕುಮಾರ್‌ ಅವರು ಬ್ರಾÂಂಡ್‌ ಬೆಂಗಳೂರು ಎಂದು ಹೇಳಿಕೊಂಡು ನೀರಾವರಿ ಇಲಾಖೆಯನ್ನು ಮರೆಯಬಾರದು ಎಂದೂ ಆಗ್ರಹಿಸಿದರು.

ಅಧಿಕಾರಕ್ಕೆ ಬರುವ ಮುನ್ನ ಮೇಕೆದಾಟು ಎಂದವರೀಗ ಮೇಕೆಯೂ ಇಲ್ಲ, ದಾಟೂ ಇಲ್ಲ. ಕೈಗೆ ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ, ಮೇಕೆದಾಟೂ ಇಲ್ಲ. ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರಕಾರ ಅನ್ಯಾಯ ಮಾಡಿದೆ. ಈಗ ಸರ್ವಪಕ್ಷ ಸಭೆ ಕರೆದಿದೆ. ಆದರೂ ನಾವು ಹೋಗುತ್ತೇವೆ. ನಮ್ಮ ನಿಲುವನ್ನು ಅಲ್ಲೇ ತಿಳಿಸುತ್ತೇವೆ.
– ಆರ್‌. ಅಶೋಕ್‌,ಮಾಜಿ ಡಿಸಿಎಂ

ಐಎನ್‌ಡಿಐಎ ಸಲುವಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ. ಸ್ಟಾಲಿನ್‌ ಸ್ನೇಹಕ್ಕೆ ನಾಡಿನ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಮಂಡ್ಯದ ಜನರ ಪಾಲಿಗೆ ಶಾಪವಾಗಿರುವ ಕಾಂಗ್ರೆಸ್‌, ತಮಿಳುನಾಡಿಗೆ ವರವಾಗಿದೆ. ನೀರು ಬಿಟ್ಟ ಮೇಲೆ ಇವರು ಸರ್ವಪಕ್ಷ ಸಭೆ ನಡೆಸಿ ಏನು ಪ್ರಯೋಜನ?
– ಸಿ.ಟಿ. ರವಿ, ಮಾಜಿ ಸಚಿವ

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.