Plastic ಮಿಶ್ರಿತ ಅಕ್ಕಿ ವಿತರಣೆ ವದಂತಿ ಪಡಿತರದಲ್ಲಿರುವುದು ಸಾರವರ್ಧಿತ ಅಕ್ಕಿ


Team Udayavani, Aug 22, 2023, 11:21 PM IST

Plastic ಮಿಶ್ರಿತ ಅಕ್ಕಿ ವಿತರಣೆ ವದಂತಿ ಪಡಿತರದಲ್ಲಿರುವುದು ಸಾರವರ್ಧಿತ ಅಕ್ಕಿ

ಉಡುಪಿ/ತೆಕ್ಕಟ್ಟೆ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ನೀಡುತ್ತಿರುವ ಅಕ್ಕಿಯಲ್ಲಿ ಸಾರವರ್ಧಿತ ಅಕ್ಕಿಯನ್ನು ಬೆರೆಸಿ ನೀಡಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಜನರಿಗೆ ಸರಿಯಾದ ಮಾಹಿತಿ ಒದಗಿಸದೇ ಇರುವುದರಿಂದ ಪ್ಲಾಸ್ಟಿಕ್‌ ಅಕ್ಕಿ ನೀಡಲಾಗುತ್ತಿದೆ ಎನ್ನುವ ನೆಲೆಯಲ್ಲಿ ಆತಂಕ ಸೃಷ್ಟಿಯಾಗುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸಾರವರ್ಧಿತ ಅಕ್ಕಿ ವಿತರಣೆ ಯೋಜನೆಯಡಿ ಸಾರವರ್ಧಿತ ಅಕ್ಕಿ ಬಳಸಬೇಕು ಎನ್ನುವ ನಿಟ್ಟಿನಿಂದ ಐರನ್‌, ಫೋಲಿಕ್‌ ಆ್ಯಸಿಡ್‌, ವಿಟಮಿನ್‌ ಬಿ 12 ಅಂಶವನ್ನು ಒಳಗೊಂಡಿರುವ ಫೋರ್ಟಿಫೈಡ್‌ ಅಕ್ಕಿಯನ್ನು ಸಾಮಾನ್ಯ ಅಕ್ಕಿಗೆ ಮಿಶ್ರಣ ಮಾಡಿಯೇ ಕಳೆದೆರಡು ತಿಂಗಳಿನಿಂದಲೂ ರಾಜ್ಯದ ಎಲ್ಲ ಪಡಿತರ ವಿತರಣ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ.

ಪೌಷ್ಟಿಕಾಂಶ ಹೆಚ್ಚು ನೀಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ ಎಂದು ಆಹಾರ, ಗ್ರಾಹಕ ವ್ಯವಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಡುಪಿ ಜಿಲ್ಲಾ ಪ್ರಭಾರ ಉಪನಿರ್ದೇಶಕ ರವೀಂದ್ರ ಮಾಹಿತಿ ನೀಡಿದ್ದಾರೆ.
ಸಾರವರ್ಧಿತ ಅಕ್ಕಿಯ ಬಗ್ಗೆ ಎಲ್ಲ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ಒದಗಿಸಿದ್ದೇವೆ. ಅಕ್ಕಿ ವಿತರಣೆಯ ಸಂದರ್ಭದಲ್ಲಿ ಇದರ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಬೇಕು ಮತ್ತು ಅಕ್ಕಿ ಬೇಯಿಸಿದ ಸಂದರ್ಭದಲ್ಲಿ ಸ್ವಲ್ಪ ಮೆತ್ತಗೆ ಆಗುತ್ತದೆ. ಇದು ಪ್ಲಾಸ್ಟಿಕ್‌ ಅಕ್ಕಿಯಲ್ಲ. ಸಾರವರ್ಧಿತ ಅಕ್ಕಿ ಎಂಬ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇವೆ ಎಂದಿದ್ದಾರೆ.

ಕೊಮೆ ಕೊರವಡಿಯಲ್ಲಿ ಗೊಂದಲ
ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದ ಪಡಿತರ ವಿತರಣೆ ವಿಭಾಗದಲ್ಲಿ ವಿತರಿಸಲಾದ ಅಕ್ಕಿ ಪ್ಲಾಸ್ಟಿಕ್‌ ಮಿಶ್ರಿತವಾಗಿದೆ ಎಂದು ಪರಿಸರದಲ್ಲಿ ಸುದ್ದಿ ಹರಡುತ್ತಿದಂತೆ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್‌ ಸ್ಥಳಕ್ಕೆ ಧಾವಿಸಿ ಗೊಂದಲಕ್ಕೆ ತೆರೆ ಎಳೆದ ಘಟನೆ ಆ. 22ರಂದು ನಡೆದಿದೆ.

ಸರಕಾರ ಈಗಾಗಲೇ ಪಡಿತರ ವಿತರಣ ಕೇಂದ್ರಗಳಲ್ಲಿ ಸಾಮಾನ್ಯ ಅಕ್ಕಿಯ ಜತೆಗೆ ಸಾಧಾರಣ ಅಕ್ಕಿಯಂತೆಯೇ ಬಣ್ಣ, ರುಚಿ ಹೊಂದಿರುವ ಸಾರವರ್ಧಿತ ಅಕ್ಕಿಯನ್ನು ಸೇರಿಸಿ ವಿತರಿಸುತ್ತಿದೆ. ಗ್ರಾಹಕರು ಪ್ಲಾಸ್ಟಿಕ್‌ ಅಕ್ಕಿ ಎಂದು ಭಾವಿಸಿ ಗೊಂದಲಕ್ಕೀಡಾಗಿದ್ದಾರೆ. ನಾನು ಸ್ಥಳಕ್ಕೆ ತೆರಳಿ ಚೀಲದಲ್ಲಿರುವ ಸಾರವರ್ಧಿತ ಅಕ್ಕಿಯನ್ನು ಸೇವಿಸಿ ಜನರಲ್ಲಿ ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದೇನೆ.
– ಸುರೇಶ್‌
ಆಹಾರ ನಿರೀಕ್ಷಕರು, ಕುಂದಾಪುರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.